ಜಿಲ್ಲೆಗಳು

ಕೋಟೆ ಕಸ ಕಸಿವಿಸಿಗೆ ತೆರೆ

ಕೆಲಸಕ್ಕೆ ಮರಳಿದ ಕಸ ಸಂಗ್ರಹ ವಾಹನ ಚಾಲಕರು

ಎಚ್.ಡಿ.ಕೋಟೆ: ಅಧಿಕಾರಿಗಳು ಮತ್ತು ಚಾಲಕರ ನಡುವೆ ನಡೆಯುತ್ತಿದ್ದ ಮುಸುಕಿನ ಗುದ್ದಾಟಕ್ಕೆ ಪುರಸಭೆ ಅಧ್ಯಕ್ಷರು, ಸ್ಥಾಯಿ ಸಮಿತಿ ಅಧ್ಯಕ್ಷರು, ಮುಖ್ಯಾಧಿಕಾರಿಗಳು ಅಂತ್ಯ ಹಾಡಿದ್ದು, ೩ ದಿನಗಳಿಂದ ಸ್ಥಗಿತಗೊಂಡಿದ್ದ ಮನೆಮನೆ ಕಸ ಸಂಗ್ರಹಿಸುವ ವಾಹನಗಳನ್ನು ಚಾಲನೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪುರಸಭೆಯಲ್ಲಿ ಟೆಂಡರ್ ಮೂಲಕ ಕೆಲಸ ನಿರ್ವಹಿಸುವ ಚಾಲಕರಿಗೆ ಕೆಲ ಅಧಿಕಾರಿಗಳು ನಿಂದಿಸುತ್ತಾರೆ ಎಂದು ಆರೋಪಿಸಿ ವಾಹನಗಳ ಕೀಗಳನ್ನು ಹಿಂತಿರುಗಿಸಿ ಕಳೆದ ಮೂರು ದಿನಗಳಿಂದ ಕೆಲಸಕ್ಕೆ ಹಾಜರಾಗಿರಲಿಲ್ಲ. ಇದರಿಂದ ಮನೆಗಳಲ್ಲಿ ಕಸ ವಿಲೇವಾರಿಯಾಗದೆ ಸಮಸ್ಯೆ ಉಂಟಾಗಿತ್ತು. ಸ್ಥಾಯಿ ಸಮಿತಿ ಅಧ್ಯಕ್ಷ ಐಡಿಯಾ ವೆಂಕಟೇಶ್, ಸದಸ್ಯರಾದ ಮಿಲ್ ನಾಗರಾಜು, ಲೋಕೇಶ್ ಅವರು ಸ್ವತಃ ವಾಹನಗಳನ್ನು ಚಾಲನೆ ಮಾಡಿ ಮನೆಗಳಲ್ಲಿ ಕಸವನ್ನು ಸಂಗ್ರಹಿಸಿದ್ದರು.

ಪರಿಸ್ಥಿತಿ ಹದಗೆಟ್ಟಿದ್ದರಿಂದ ಪುರಸಭಾ ಅಧ್ಯಕ್ಷರಾದ ಅನಿತಾ ನಿಂಗನಾಯಕ, ಮುಖ್ಯಾಧಿಕಾರಿ ಸುರೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಐಡಿಯಾ ವೆಂಕಟೇಶ್ ಸೇರಿದಂತೆ ಇನ್ನಿತರ ಸದಸ್ಯರು ಅಧಿಕಾರಿಗಳು ಮತ್ತು ಚಾಲಕರ ಜತೆ ಚರ್ಚೆ ನಡೆಸಿದರಲ್ಲದೆ, ಅಧಿಕಾರಿಗಳು ಏನೇ ತಪ್ಪು ಮಾಡಿದರೂ ನಮ್ಮ ಗಮನಕ್ಕೆ ತನ್ನಿ. ಏಕಾಏಕಿ ಈ ರೀತಿ ನಿರ್ಧಾರ ಕೈಗೊಂಡರೆ ಸಮಸ್ಯೆಯಾಗುತ್ತದೆ. ಏನೇ ಸಮಸ್ಯೆಗಳಿದ್ದರೂ ಬಗೆಹರಿಸೋಣ. ಅಧಿಕಾರಿಗಳ ವರ್ತನೆ ವಿಚಾರದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಹಾಗಾಗಿ ಎಲ್ಲ ಚಾಲಕರು ತಮ್ಮ ಕೆಲಸಕ್ಕೆ ಹಾಜರಾಗಿದ್ದಾರೆ.

* ಅಧಿಕಾರಿಗಳು ವಿನಾಕಾರಣ ನಿಂದಿಸುತ್ತಾರೆಂದು ಆರೋಪಿಸಿ ೩ ದಿನಗಳಿಂದ ಕಸ ಸಂಗ್ರಹ ಕಾರ್ಯ ಸ್ಥಗಿತಗೊಳಿಸಿದ್ದ ಚಾಲಕರು

* ಭಾನುವಾರ ಪುರಸಭೆ ಸದಸ್ಯರೇ ವಾಹನ ಚಲಾಯಿಸಿ ಕಸ ಸಂಗ್ರಹಿಸಿದ್ದರು

andolanait

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

24 mins ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

26 mins ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

27 mins ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

29 mins ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

30 mins ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

35 mins ago