ಜಿಲ್ಲೆಗಳು

ಮಾಜಿ ಸಿಎಂ ಹೆಚ್‌ಡಿಕೆ ರವರ ಅಸ್ಪೃಶ್ಯತೆ ಹೇಳಿಕೆ ಖಂಡಿಸಿ ಮೌನ ಪ್ರತಿಭಟನೆ

ಹನೂರು: ಜಾತ್ಯಾತೀತತೆ ಎಂಬುದು ಕೇವಲ ಪಕ್ಷಕಷ್ಟೇ ಸೀಮಿತ ಕುಮಾರಸ್ವಾಮಿಯವರ ಮನಸ್ಸು ಮತ್ತು ಮಾತಿನಲ್ಲಿ ಜಾತಿಯತೆ ಎಂಬುದು ಎದ್ದು ಕಾಣುತ್ತಿದೆ. ಈ ಕೂಡಲೇ ರಾಜ್ಯದ ಜನತೆಯಲ್ಲಿ ಬಹಿರಂಗ ಕ್ಷಮೆ ಕೇಳದಿದ್ದರೆ ಅವರ ವಿರುದ್ಧ ರಾಜ್ಯಾದ್ಯಂತ ಉಗ್ರವಾದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ಮುಖಂಡ ನಿಶಾಂತ್ ಎಚ್ಚರಿಕೆ ನೀಡಿದರು

ಕುಮಾರಸ್ವಾಮಿ ರವರ ಅಸ್ಪೃಶ್ಯತೆ ಎಂಬ ಹೇಳಿಕೆ ಖಂಡಿಸಿ ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಮೌನ ಪ್ರತಿಭಟನೆಯಲ್ಲಿ ಪೊಲೀಸ್ ಠಾಣೆ ಮುಂಭಾಗದಲ್ಲಿರುವ ಡಾಕ್ಟರ್ ಅಂಬೇಡ್ಕರ್ ಅವರ ಪುತ್ತಳಿಗೆ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು. ದೇಶದ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸರ್ಕಾರವು ಎಲ್ಲಾ ಸಮಾಜದವರಿಗೂ ಸಮಾನ ಹಕ್ಕು ನೀಡಿದೆ. ಎಲ್ಲೂ ಸಹ ಸಂವಿಧಾನ ವಿರೋಧಿ ಹೇಳಿಕೆ ಹಾಗೂ ಶಾಂತಿ ಕದಡುವ ಪ್ರಯತ್ನ ಮಾಡಿರುವುದಿಲ್ಲ. ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಅಡಿಯಲ್ಲಿಯೇ ಕುಮಾರಸ್ವಾಮಿ ರವರು ಎರಡು ಬಾರಿ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಇವರು ಈ ರೀತಿ ಸಂವಿಧಾನ ವಿರೋಧಿ ಹೇಳಿಕೆ ನೀಡಿರುವುದು ಖಂಡನೀಯ. ಈ ಕೂಡಲೇ ರಾಜ್ಯದ ಜನತೆ ಮುಂದೆ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು. ಇಲ್ಲವಾದರೆ ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವ ಜೊತೆಗೆ ಕ್ಷೇತ್ರದಾದ್ಯಂತ ಚುನಾವಣಾ ಪ್ರಚಾರದಲ್ಲಿ ಜೆಡಿಎಸ್ ಕಾರ್ಯಕರ್ತರಿಗೆ ಅವಕಾಶ ಮಾಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ತಾಲೂಕ್ ಪಂಚಾಯತಿ ಮಾಜಿ ಅಧ್ಯಕ್ಷ ಸುರೇಶ ಮಾತನಾಡಿ ಕುಮಾರಸ್ವಾಮಿ ನೀಡಿರುವ ಸಂವಿಧಾನ ವಿರೋಧಿ ಹೇಳಿಕೆಯನ್ನು ಕೇಳಿಯೂ ಸಹ ರಾಜ್ಯದ ಜನತೆ ಮೌನ ವಹಿಸಿದ್ದಾರೆ. ಮುಖ್ಯಮಂತ್ರಿ ಆಗಿದ್ದ ಸಮಯದಲ್ಲಿ ಬ್ಯಾಕ್ಲಾಗ ಹುದ್ದೆಗಳನ್ನು ಭರ್ತಿ ಮಾಡಲು ಮೀನಾ ಮೇಷ ಎಣಿಸಿದ್ದರು. ಇವರು ರಾಜ್ಯದ ಜನತೆಗೆ ಕ್ಷಮೆ ಕೇಳಬೇಕು ಎಂದರು. ಮುಖಂಡ ಕಿರಣ್ ಮಾತನಾಡಿ ಡಿಎಸ್ ಪಕ್ಷವು ಪ್ರಣಾಳಿಕೆಯಲ್ಲಿ ಜಾತ್ಯಾತೀತ ತತ್ವಗಳನ್ನು ಅಳವಡಿಸಿಕೊಂಡಿದೆ ಎನ್ನುತ್ತಾರೆ ಆದರೆ ಅವರು ಮಾಡುವುದು ಮಾತ್ರ ಕೀಳು ಮಟ್ಟದ ರಾಜಕೀಯ. ಇದು ಮಾಜಿ ಮುಖ್ಯಮಂತ್ರಿಗಳ ಘನತೆಗೆ ಶೋಭೆ ತರುವಂತಹದ್ದಲ್ಲ ಈ ಕೂಡಲೇ ಜನತೆಯ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಜಿಕೆ ಹೊಸೂರು ಬಸವರಾಜು, ರಂಗೇಗೌಡ, ಪಾಳ್ಯ ಸಿದ್ದಪ್ಪಾಜಿ ನಾಯಕ, ಸಿಂಗನಲ್ಲೂರು ಚೆನ್ನೇಶ್ ಗೌಡ , ಚೇತನ್, ಪ್ರಣವ್ ಗೌತಮ್, ತೇಜು, ಬಸವರಾಜು, ರುದ್ರ, ಜಗದೀಶ್ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರುಗಳು ಹಾಜರಿದ್ದರು.

andolanait

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

6 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

6 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

6 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

6 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

6 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago