ಹನೂರು: ಚಾಮುಲ್ ಮಾಜಿ ಅಧ್ಯಕ್ಷ ಚಿಂಚಳ್ಳಿ ಗುರುಮಲ್ಲಪ್ಪ ಭಾನುವಾರ ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಹಾಗೂ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ ಆರ್ ಮಂಜುನಾಥ್ ರವರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಯಾಗಿದ್ದಾರೆ.
ಕಳೆದ ಜೂನ್ ತಿಂಗಳಿನಲ್ಲಿ ನಡೆದ ಚಾಮುಲ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಗುರುಮಲ್ಲಪ್ಪ ಪರಾಭವಗೊಂಡಿದ್ದರು. ನನ್ನ ಸೋಲಿಗೆ ಶಾಸಕ ಆರ್ ನರೇಂದ್ರ ನೇರ ಕಾರಣ ಎಂದು ಆರೋಪಿಸಿ ಆಕ್ರೋಶ ಹೊರಹಾಕಿದ್ದರು. ಇದಾದ ನಂತರ ತಟಸ್ಥರಾಗಿದ್ದ ಹಿರಿಯ ಮುಖಂಡ ಗುರುಮಲ್ಲಪ್ಪ ರವರನ್ನು ಬಿಜೆಪಿಗೆ ಸೇರ್ಪಡೆಯಾಗುವಂತೆ ಜನಧ್ವನಿ ಬಿ ವೆಂಕಟೇಶ್ ಅವರು ಆಹ್ವಾನ ನೀಡಿದ್ದರು.
ಇದಾದ ಬಳಿಕ ಜೆಡಿಎಸ್ ಮುಖಂಡ ಎಂ ಆರ್ ಮಂಜುನಾಥ್ ಶುಕ್ರವಾರ ಚಿಂಚಳ್ಳಿ ಗುರುಮಲ್ಲಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ಒಂದು ಸುತ್ತಿನ ಮಾತುಕತೆ ನಡೆಸಿ ಪಕ್ಷಕ್ಕೆ ಆಹ್ವಾನ ನೀಡಿದ್ದರು. ಇಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರವರ ಬಿಡದಿ ನಿವಾಸದಲ್ಲಿ ಗುರುಮಲ್ಲಪ್ಪ ಹಾಗೂ ಇವರ ಬೆಂಬಲಿಗರು ಜೆಡಿಎಸ್ ಪಕ್ಷ ಸೇರ್ಪಡೆಯಾಗಿದ್ದಾರೆ.
5 ವರ್ಷ ಮೈಮುಲ್ ಅಧ್ಯಕ್ಷ ರಾಗಿ,2.5 ವರ್ಷ ಚಾಮುಲ್ ಅಧ್ಯಕ್ಷರಾಗಿ, 5 ವರ್ಷ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾಗಿ 4 ಬಾರಿ ನಿರ್ದೇಶಕರಾಗಿ ಆಯ್ಕೆಯಾಗಿರುವ ಇವರು ಕಾಂಗ್ರೆಸ್ ಪಕ್ಷದಲ್ಲಿ ಎಲ್ಲ ರೀತಿಯ ಅಧಿಕಾರ ಅನುಭವಿಸಿದ್ದಾರೆ. ಇದಲ್ಲದೆ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ 2 ಬಾರಿ ಅವಕಾಶ ಮಾಡಿಕೊಟ್ಟಿದ್ದಾರೆ. ಸುಮಾರು 27 ವರ್ಷಗಳ ಕಾಲ ಅಧಿಕಾರ ಅನುಭವಿಸಿರುವ ಇವರು ಚಾಮುಲ್ ಚುನಾವಣೆಯ ಸೋಲಿಗೆ ಶಾಸಕ ಆರ್ ನರೇಂದ್ರರವರನ್ನು ಹೊಣೆ ಮಾಡಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಜ್ಞಾವಂತರು ಪ್ರಶ್ನಿಸುತ್ತಿದ್ದಾರೆ.
ವಿಧಾನಸಭೆ : ನಗರಾಭಿವೃದ್ಧಿ ಇಲಾಖೆಯಿಂದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಒಳಚರಂಡಿ ಮತ್ತು ಅದಕ್ಕೆ ಸಂಬಂಧಿಸಿದ ಸೇವೆಗಳ ನಿರ್ವಹಣೆ ಅಸಾಧ್ಯ ಎಂದು…
ಹುಣಸೂರು : ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹಲವು ಗ್ರಾಮಗಳಲ್ಲಿ ನಡೆಯುತ್ತಿರುವ ನಿರಂತರ ಹುಲಿ ದಾಳಿಗಳ ಹಿನ್ನೆಲೆಯಲ್ಲಿ ರೈತರು ಅಂತರರಾಜ್ಯ…
ಮೈಸೂರು : ಪ್ರಾಚೀನ ಕಾಲದಲ್ಲಿ ವ್ಯಾಸ, ವಾಲ್ಮೀಕಿ, ಕಾಳಿದಾಸರಂತಹ ಮಹಾನ್ ಕವಿಗಳು ರಚಿಸಿದ ಮಹಾನ್ ಗ್ರಂಥಗಳ ಫಲವಾಗಿ ಭಾರತೀಯ ಸಾಹಿತ್ಯ…
ಹೊಸದಿಲ್ಲಿ : ಒಲಿಂಪಿಕ್ ಕನಸನ್ನು ಬೆನ್ನಟ್ಟಲು 18 ತಿಂಗಳ ವಿರಾಮದ ನಂತರ ಮತ್ತೆ ವಾಪಸ್ಸಾಗುವುದಾಗಿ ಕುಸ್ತಿಪಟು ವಿನೇಶ್ ಫೋಗಟ್ ಘೋಷಿಸಿದ್ದಾರೆ.…
ಬೆಳಗಾವಿ : ಡಿನ್ನರ್ ಮೀಟಿಂಗ್ ಗಳ ಮೂಲಕ ತಾವು ಶಕ್ತಿ ಪ್ರದರ್ಶನ ಮಾಡುತ್ತಿಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ…
ಬೆಳಗಾವಿ : ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಿಟ್ಟ 50 ಸಾವಿರ ಕೋಟಿ ಅನುದಾನ ದುರುಪಯೋಗವಾಗಿದೆ ಎಂದು…