ಜಿಲ್ಲೆಗಳು

ಹನೂರು : ಹೆಚ್‌ಡಿಕೆ ಸಮ್ಮುಖದಲ್ಲಿ ಕೈ ತೊರೆದು ತೆನೆ ಹೊತ್ತ ಹಲವರು

ಹನೂರು: ಚಾಮುಲ್ ಮಾಜಿ ಅಧ್ಯಕ್ಷ ಚಿಂಚಳ್ಳಿ ಗುರುಮಲ್ಲಪ್ಪ ಭಾನುವಾರ ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಹಾಗೂ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ ಆರ್ ಮಂಜುನಾಥ್ ರವರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಯಾಗಿದ್ದಾರೆ.

ಕಳೆದ ಜೂನ್ ತಿಂಗಳಿನಲ್ಲಿ ನಡೆದ ಚಾಮುಲ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಗುರುಮಲ್ಲಪ್ಪ ಪರಾಭವಗೊಂಡಿದ್ದರು. ನನ್ನ ಸೋಲಿಗೆ ಶಾಸಕ ಆರ್ ನರೇಂದ್ರ ನೇರ ಕಾರಣ ಎಂದು ಆರೋಪಿಸಿ ಆಕ್ರೋಶ ಹೊರಹಾಕಿದ್ದರು. ಇದಾದ ನಂತರ ತಟಸ್ಥರಾಗಿದ್ದ ಹಿರಿಯ ಮುಖಂಡ ಗುರುಮಲ್ಲಪ್ಪ ರವರನ್ನು ಬಿಜೆಪಿಗೆ ಸೇರ್ಪಡೆಯಾಗುವಂತೆ ಜನಧ್ವನಿ ಬಿ ವೆಂಕಟೇಶ್ ಅವರು ಆಹ್ವಾನ ನೀಡಿದ್ದರು.

ಇದಾದ ಬಳಿಕ ಜೆಡಿಎಸ್ ಮುಖಂಡ ಎಂ ಆರ್ ಮಂಜುನಾಥ್ ಶುಕ್ರವಾರ ಚಿಂಚಳ್ಳಿ ಗುರುಮಲ್ಲಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ಒಂದು ಸುತ್ತಿನ ಮಾತುಕತೆ ನಡೆಸಿ ಪಕ್ಷಕ್ಕೆ ಆಹ್ವಾನ ನೀಡಿದ್ದರು. ಇಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರವರ ಬಿಡದಿ ನಿವಾಸದಲ್ಲಿ ಗುರುಮಲ್ಲಪ್ಪ ಹಾಗೂ ಇವರ ಬೆಂಬಲಿಗರು ಜೆಡಿಎಸ್ ಪಕ್ಷ ಸೇರ್ಪಡೆಯಾಗಿದ್ದಾರೆ.

5 ವರ್ಷ ಮೈಮುಲ್ ಅಧ್ಯಕ್ಷ ರಾಗಿ,2.5 ವರ್ಷ ಚಾಮುಲ್ ಅಧ್ಯಕ್ಷರಾಗಿ, 5 ವರ್ಷ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾಗಿ 4 ಬಾರಿ ನಿರ್ದೇಶಕರಾಗಿ ಆಯ್ಕೆಯಾಗಿರುವ ಇವರು ಕಾಂಗ್ರೆಸ್ ಪಕ್ಷದಲ್ಲಿ ಎಲ್ಲ ರೀತಿಯ ಅಧಿಕಾರ ಅನುಭವಿಸಿದ್ದಾರೆ. ಇದಲ್ಲದೆ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ 2 ಬಾರಿ ಅವಕಾಶ ಮಾಡಿಕೊಟ್ಟಿದ್ದಾರೆ. ಸುಮಾರು 27 ವರ್ಷಗಳ ಕಾಲ ಅಧಿಕಾರ ಅನುಭವಿಸಿರುವ ಇವರು ಚಾಮುಲ್ ಚುನಾವಣೆಯ ಸೋಲಿಗೆ ಶಾಸಕ ಆರ್ ನರೇಂದ್ರರವರನ್ನು ಹೊಣೆ ಮಾಡಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಜ್ಞಾವಂತರು ಪ್ರಶ್ನಿಸುತ್ತಿದ್ದಾರೆ.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

16 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

20 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

20 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

20 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

20 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

21 hours ago