ಮೈಸೂರು: ಉಳುವವನೇ ಭೂಮಿಯ ಒಡೆಯ ಎಂಬ ಭೂ ಸುಧಾರಣಾ ಕಾಯ್ದೆ ಮೂಲಕ ಬಡವರಿಗೆ ೨೧ ಲಕ್ಷ ಎಕರೆ ಭೂಮಿ ನೀಡಿ ಭೂ ಮಾಲೀಕರನ್ನಾಗಿ ವಾಡುವ ಮೂಲಕ ಅವರ ಬದುಕಿಗೆ ಆಸರೆಯಾದ ನಾಡಿನ ಧೀಮಂತ ನಾಯಕ ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜ ಅರಸರ ಹೆಸರಿನಲ್ಲಿ ಹುಣಸೂರು ಜಿಲ್ಲಾ ಕೇಂದ್ರವಾಗಬೇಕು ಎಂದು ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಹೇಳಿದರು.
ಬುಧವಾರ ನಗರದ ಪತ್ರಕರ್ತರ ಭವನದಲ್ಲಿ ಏರ್ಪಡಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ರಾಜಕೀಯ ಇತಿಹಾಸದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಆರಸರ ಹೆಸರು ಅಜರಾಮರ. ಉಳುವವನೆ ಭೂಮಿ ಒಡೆಯ, ಜೀತ ವಿಮುಕ್ತಿ ಕಾಯ್ದೆ ಇನ್ನಿತರ ಸವಾಜಮುಖಿ ಯೋಜನೆಗಳನ್ನು ಜಾರಿಗೊಳಿಸಿ ದನಿ ಇಲ್ಲದ ಶೋಷಿತ ವರ್ಗದವರ ದನಿಯಾದ ಸಮಾನತೆಯ ಹರಿಕಾರ ಎಂದು ಹೇಳಿದರು.
ಹೀಗಾಗಿ ಅವರ ಹೆಸರಿನಲ್ಲಿ ಹುಣಸೂರನ್ನು ಅರಸು ಜಿಲ್ಲೆಯನ್ನಾಗಿ ಘೋಷಿಸುವಂತೆ ಸರ್ಕಾರದ ಗಮನ ಸೆಳೆಯಲು ಪಕ್ಷಾತೀತವಾಗಿ ಪ್ರಯತ್ನ ಹಾಕುತ್ತೇವೆ. ಹುಣಸೂರು, ಪಿರಿಯಾಪಟ್ಟಣ, ಕೆ.ಆರ್.ನಗರ, ಹೆಚ್.ಡಿ.ಕೋಟೆ, ಸರಗೂರು, ಸಾಲಿಗ್ರಾಮ ತಾಲ್ಲೂಕುಗಳನ್ನು ಒಳಗೊಂಡಂತೆ ಜಿಲ್ಲೆ ರಚನೆಯಾಗಬೇಕು ಎಂದು ಹೇಳಿದರು.
ಈ ಸಂಬಂಧ ನಾಲ್ಕು ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ವಾಜಿ ಶಾಸಕರು, ಉದ್ಯಮಿಗಳು ಹೀಗೆ ಎಲ್ಲರೂ ಸೇರಿ ಜಿಲ್ಲೆಯ ರಚನೆಗೆ ಒತ್ತಡ ಹೇರುತ್ತೇವೆ. ಈ ಸಂಬಂಧ ಆದಷ್ಟು ಶೀಘ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅವರ ಮನವೊಲಿಸಲಾಗುವುದು ಎಂದು ತಿಳಿಸಿದರು.
ಮೈಸೂರು ಜಿಲ್ಲಾಧಿಕಾರಿಗೆ ಕೆಲಸದ ಒತ್ತಡ ಹೆಚ್ಚಾಗಿದೆ. ಇಲ್ಲಿಗೆ ಕೇಂದ್ರ ಹಾಗೂ ರಾಜ್ಯದ ಮುಖಂಡರು ಭೇಟಿ ನಿಡುತ್ತಾರೆ. ಹೀಗಾಗಿ ತಾಲ್ಲೂಕು ಮಟ್ಟದಲ್ಲಿ ಕೆಲಸ ನಿರ್ವಹಿಸಲು ಅವರಿಂದ ಆಗುತ್ತಿಲ್ಲ. ಸರ್ಕಾರದ ಸವಲತ್ತುಗಳು ಸಾಮಾನ್ಯ ಜನರಿಗೆ ತಲುಪಲು ಹಾಗೂ ಸರ್ಕಾರದ ಕೆಲಸಗಳು ಸುಲಲಿತವಾಗಿ ನಡೆಯಲು ಅಧಿಕಾರ ವಿಕೇಂದ್ರೀಕರಣವಾಗಬೇಕು ಎಂದರು.
ಮೈಸೂರು ನಗರದಲ್ಲಿ ಮಳೆನೀರು ಕೊಯ್ಲು ಥೀಮ್ ಪಾರ್ಕ್ ಸ್ಥಾಪಿಸುವ ಹಿಂದಿನ ಹಾಗೂ ಈಗಿನ ಸರ್ಕಾರಗಳ ಭರವಸೆ ಇನ್ನೂ ಕನ್ನಡಿಯೊಳಗಿನ ಗಂಟಾಗಿಯೇ…
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹರಳಹಳ್ಳಿಯ ಪುಸ್ತಕ ಪ್ರೇಮಿ ೭೮ ವರ್ಷದ ಅಂಕೇಗೌಡ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿರುವುದು ಕನ್ನಡ…
ಮೈಸೂರಿನ ರಾಮಕೃಷ್ಣನಗರ ಮಾರ್ಗಕ್ಕೆ ಪ್ರತಿದಿನ ನಗರ ಸಾರಿಗೆ ಬಸ್ಸುಗಳು ಸಂಚರಿಸುತ್ತವೆ. ಆದರೆ ಈ ಮಾರ್ಗದಲ್ಲಿ ಓಡಾಡುವ ಬಸ್ಸುಗಳ ಸಂಖ್ಯೆ ಮಾತ್ರ…
ಸರಗೂರು: ಪಟ್ಟಣದಲ್ಲಿ ಗ್ರಾಮದೇವತೆ ಶ್ರೀ ಸಂತೆ ಮಾಸ್ತಮ್ಮನವರ ೩೧ನೇ ಜಾತ್ರಾ ಮಹೋತ್ಸವ ಹಾಗೂ ಕೊಂಡೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು. ಜಾತ್ರಾ…
ರೆಸಾರ್ಟ್ಗಳು, ಹೋಂಸ್ಟೇಗಳಿಗೆ ಅಕ್ರಮ ರೆಸಾರ್ಟ್ಗಳ ತನಿಖಾ ಸಮಿತಿಯವರ ದಿಢೀರ್ ಭೇಟಿ ಹೆಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಹಿನ್ನೀರಿನ ನಾಗರಹೊಳೆ ಮತ್ತು ಬಂಡೀಪುರ…
ಕೆ.ಬಿ.ಶಂಶುದ್ಧೀನ್ ಗ್ರಾಮಕ್ಕೆ ಹುಲಿ, ಚಿರತೆಗಳು ಲಗ್ಗೆಯಿಡುವ ಆತಂಕ; ಹೋರಾಟದ ಎಚ್ಚರಿಕೆ ನೀಡಿದ ಹಕ್ಕೆ ಗ್ರಾಮಸ್ಥರು ಕುಶಾಲನಗರ: ಬೀದಿ ನಾಯಿಗಳ ಹಾವಳಿ…