ಜಿಲ್ಲೆಗಳು

ಹುಣಸೂರು ಜಿಲ್ಲಾ ಕೇಂದ್ರವಾಗಬೇಕು: ಹೆಚ್.‌ ವಿಶ್ವನಾಥ್‌

ಮೈಸೂರು: ಉಳುವವನೇ ಭೂಮಿಯ ಒಡೆಯ ಎಂಬ ಭೂ ಸುಧಾರಣಾ ಕಾಯ್ದೆ ಮೂಲಕ ಬಡವರಿಗೆ ೨೧ ಲಕ್ಷ ಎಕರೆ ಭೂಮಿ ನೀಡಿ ಭೂ ಮಾಲೀಕರನ್ನಾಗಿ ವಾಡುವ ಮೂಲಕ ಅವರ ಬದುಕಿಗೆ ಆಸರೆಯಾದ ನಾಡಿನ ಧೀಮಂತ ನಾಯಕ ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜ ಅರಸರ ಹೆಸರಿನಲ್ಲಿ ಹುಣಸೂರು ಜಿಲ್ಲಾ ಕೇಂದ್ರವಾಗಬೇಕು ಎಂದು ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಹೇಳಿದರು.

ಬುಧವಾರ ನಗರದ ಪತ್ರಕರ್ತರ ಭವನದಲ್ಲಿ ಏರ್ಪಡಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ರಾಜಕೀಯ ಇತಿಹಾಸದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಆರಸರ ಹೆಸರು ಅಜರಾಮರ. ಉಳುವವನೆ ಭೂಮಿ ಒಡೆಯ, ಜೀತ ವಿಮುಕ್ತಿ ಕಾಯ್ದೆ ಇನ್ನಿತರ ಸವಾಜಮುಖಿ ಯೋಜನೆಗಳನ್ನು ಜಾರಿಗೊಳಿಸಿ ದನಿ ಇಲ್ಲದ ಶೋಷಿತ ವರ್ಗದವರ ದನಿಯಾದ ಸಮಾನತೆಯ ಹರಿಕಾರ ಎಂದು ಹೇಳಿದರು.

ಹೀಗಾಗಿ ಅವರ ಹೆಸರಿನಲ್ಲಿ ಹುಣಸೂರನ್ನು ಅರಸು ಜಿಲ್ಲೆಯನ್ನಾಗಿ ಘೋಷಿಸುವಂತೆ ಸರ್ಕಾರದ ಗಮನ ಸೆಳೆಯಲು ಪಕ್ಷಾತೀತವಾಗಿ ಪ್ರಯತ್ನ ಹಾಕುತ್ತೇವೆ. ಹುಣಸೂರು, ಪಿರಿಯಾಪಟ್ಟಣ, ಕೆ.ಆರ್.ನಗರ, ಹೆಚ್.ಡಿ.ಕೋಟೆ, ಸರಗೂರು, ಸಾಲಿಗ್ರಾಮ ತಾಲ್ಲೂಕುಗಳನ್ನು ಒಳಗೊಂಡಂತೆ ಜಿಲ್ಲೆ ರಚನೆಯಾಗಬೇಕು ಎಂದು ಹೇಳಿದರು.

ಈ ಸಂಬಂಧ ನಾಲ್ಕು ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ವಾಜಿ ಶಾಸಕರು, ಉದ್ಯಮಿಗಳು ಹೀಗೆ ಎಲ್ಲರೂ ಸೇರಿ ಜಿಲ್ಲೆಯ ರಚನೆಗೆ ಒತ್ತಡ ಹೇರುತ್ತೇವೆ. ಈ ಸಂಬಂಧ ಆದಷ್ಟು ಶೀಘ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅವರ ಮನವೊಲಿಸಲಾಗುವುದು ಎಂದು ತಿಳಿಸಿದರು.

ಮೈಸೂರು ಜಿಲ್ಲಾಧಿಕಾರಿಗೆ ಕೆಲಸದ ಒತ್ತಡ ಹೆಚ್ಚಾಗಿದೆ. ಇಲ್ಲಿಗೆ ಕೇಂದ್ರ ಹಾಗೂ ರಾಜ್ಯದ ಮುಖಂಡರು ಭೇಟಿ ನಿಡುತ್ತಾರೆ. ಹೀಗಾಗಿ ತಾಲ್ಲೂಕು ಮಟ್ಟದಲ್ಲಿ ಕೆಲಸ ನಿರ್ವಹಿಸಲು ಅವರಿಂದ ಆಗುತ್ತಿಲ್ಲ. ಸರ್ಕಾರದ ಸವಲತ್ತುಗಳು ಸಾಮಾನ್ಯ ಜನರಿಗೆ ತಲುಪಲು ಹಾಗೂ ಸರ್ಕಾರದ ಕೆಲಸಗಳು ಸುಲಲಿತವಾಗಿ ನಡೆಯಲು ಅಧಿಕಾರ ವಿಕೇಂದ್ರೀಕರಣವಾಗಬೇಕು ಎಂದರು.

andolana

Recent Posts

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

2 hours ago

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು…

5 hours ago

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

6 hours ago

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

7 hours ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

8 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

12 hours ago