ಜಿಲ್ಲೆಗಳು

ಹುಣಸೂರು ಜಿಲ್ಲಾ ಕೇಂದ್ರವಾಗಬೇಕು: ಹೆಚ್.‌ ವಿಶ್ವನಾಥ್‌

ಮೈಸೂರು: ಉಳುವವನೇ ಭೂಮಿಯ ಒಡೆಯ ಎಂಬ ಭೂ ಸುಧಾರಣಾ ಕಾಯ್ದೆ ಮೂಲಕ ಬಡವರಿಗೆ ೨೧ ಲಕ್ಷ ಎಕರೆ ಭೂಮಿ ನೀಡಿ ಭೂ ಮಾಲೀಕರನ್ನಾಗಿ ವಾಡುವ ಮೂಲಕ ಅವರ ಬದುಕಿಗೆ ಆಸರೆಯಾದ ನಾಡಿನ ಧೀಮಂತ ನಾಯಕ ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜ ಅರಸರ ಹೆಸರಿನಲ್ಲಿ ಹುಣಸೂರು ಜಿಲ್ಲಾ ಕೇಂದ್ರವಾಗಬೇಕು ಎಂದು ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಹೇಳಿದರು.

ಬುಧವಾರ ನಗರದ ಪತ್ರಕರ್ತರ ಭವನದಲ್ಲಿ ಏರ್ಪಡಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ರಾಜಕೀಯ ಇತಿಹಾಸದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಆರಸರ ಹೆಸರು ಅಜರಾಮರ. ಉಳುವವನೆ ಭೂಮಿ ಒಡೆಯ, ಜೀತ ವಿಮುಕ್ತಿ ಕಾಯ್ದೆ ಇನ್ನಿತರ ಸವಾಜಮುಖಿ ಯೋಜನೆಗಳನ್ನು ಜಾರಿಗೊಳಿಸಿ ದನಿ ಇಲ್ಲದ ಶೋಷಿತ ವರ್ಗದವರ ದನಿಯಾದ ಸಮಾನತೆಯ ಹರಿಕಾರ ಎಂದು ಹೇಳಿದರು.

ಹೀಗಾಗಿ ಅವರ ಹೆಸರಿನಲ್ಲಿ ಹುಣಸೂರನ್ನು ಅರಸು ಜಿಲ್ಲೆಯನ್ನಾಗಿ ಘೋಷಿಸುವಂತೆ ಸರ್ಕಾರದ ಗಮನ ಸೆಳೆಯಲು ಪಕ್ಷಾತೀತವಾಗಿ ಪ್ರಯತ್ನ ಹಾಕುತ್ತೇವೆ. ಹುಣಸೂರು, ಪಿರಿಯಾಪಟ್ಟಣ, ಕೆ.ಆರ್.ನಗರ, ಹೆಚ್.ಡಿ.ಕೋಟೆ, ಸರಗೂರು, ಸಾಲಿಗ್ರಾಮ ತಾಲ್ಲೂಕುಗಳನ್ನು ಒಳಗೊಂಡಂತೆ ಜಿಲ್ಲೆ ರಚನೆಯಾಗಬೇಕು ಎಂದು ಹೇಳಿದರು.

ಈ ಸಂಬಂಧ ನಾಲ್ಕು ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ವಾಜಿ ಶಾಸಕರು, ಉದ್ಯಮಿಗಳು ಹೀಗೆ ಎಲ್ಲರೂ ಸೇರಿ ಜಿಲ್ಲೆಯ ರಚನೆಗೆ ಒತ್ತಡ ಹೇರುತ್ತೇವೆ. ಈ ಸಂಬಂಧ ಆದಷ್ಟು ಶೀಘ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅವರ ಮನವೊಲಿಸಲಾಗುವುದು ಎಂದು ತಿಳಿಸಿದರು.

ಮೈಸೂರು ಜಿಲ್ಲಾಧಿಕಾರಿಗೆ ಕೆಲಸದ ಒತ್ತಡ ಹೆಚ್ಚಾಗಿದೆ. ಇಲ್ಲಿಗೆ ಕೇಂದ್ರ ಹಾಗೂ ರಾಜ್ಯದ ಮುಖಂಡರು ಭೇಟಿ ನಿಡುತ್ತಾರೆ. ಹೀಗಾಗಿ ತಾಲ್ಲೂಕು ಮಟ್ಟದಲ್ಲಿ ಕೆಲಸ ನಿರ್ವಹಿಸಲು ಅವರಿಂದ ಆಗುತ್ತಿಲ್ಲ. ಸರ್ಕಾರದ ಸವಲತ್ತುಗಳು ಸಾಮಾನ್ಯ ಜನರಿಗೆ ತಲುಪಲು ಹಾಗೂ ಸರ್ಕಾರದ ಕೆಲಸಗಳು ಸುಲಲಿತವಾಗಿ ನಡೆಯಲು ಅಧಿಕಾರ ವಿಕೇಂದ್ರೀಕರಣವಾಗಬೇಕು ಎಂದರು.

andolana

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

3 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

4 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

4 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

4 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

4 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

4 hours ago