ಹನೂರು: ಕಳೆದ ಒಂದು ವಾರದಿಂದ ಸೋಲಾರ್ ಪ್ಲಾಂಟ್ ಕೆಟ್ಟಿರುರುವುದರಿಂದ ತೋಳಸಿಕೆರೆ ಗ್ರಾಮಸ್ಥರು ಕಗ್ಗತ್ತಲ್ಲಿ ಜೀವನ ಕಳೆಯುವಂತಾಗಿದೆ.
ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಈ ಗ್ರಾಮದಲ್ಲಿ ವಿದ್ಯುತ್ ಇಲ್ಲದೆ ಇದ್ದರಿಂದ ದೀನ್ ದಯಾಳ್ ಉಪಾಧ್ಯಾಯ ಗ್ರಾಮ ಜ್ಯೋತಿ ಯೋಜನೆ ಅಡಿ ಡಿಡಿಜಿ ಕಾರ್ಯಕ್ರಮದಡಿಯಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ಮೈಸೂರು ವತಿಯಿಂದ ಮುಂಬೈನ ನವ್ಯ ಟೆಕ್ನಾಲಜಿ ಸಂಸ್ಥೆಯ ಮೂಲಕ ಅಕ್ಟೋಬರ್ 31 2018 ರಂದು ಗ್ರಾಮದ 180 ಕುಟುಂಬಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಎರಡು ಕೋಟಿ 28 ಲಕ್ಷದ 48ಸಾವಿರ ವೆಚ್ಚದಲ್ಲಿ ಸೋಲಾರ್ ವಿದ್ಯುತ್ ಸೌಕರ್ಯ ಕಲ್ಪಿಸಲಾಗಿತ್ತು.
ಕಳೆದ ಒಂದು ವಾರದಿಂದ ಸೋಲಾರ್ ಪ್ಲಾಂಟ್ ಕೆಟ್ಟಿರುವುದರಿಂದ ಕಾಡು ಪ್ರಾಣಿಗಳ ಹಾವಳಿ ಹಾಗೂ ಕಗ್ಗತ್ತಲಿನಲ್ಲಿ ಜೀವನ ಕಳೆಯುವಂತಹ ಪರಿಸ್ಥಿತಿ ಬಂದಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಏಜೆನ್ಸಿಯವರು ತಕ್ಷಣ ಸೂಕ್ತ ಕ್ರಮ ಕೈಗೊಂಡು ಗ್ರಾಮಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಗ್ರಾಪಂ ಅಧ್ಯಕ್ಷ ಕುಮಾರ್ ಬೇಟಿ: ತೋಳಸಿಕೆರೆ ಗ್ರಾಮದಲ್ಲಿ ಸೋಲಾರ್ ಕೆಟ್ಟು ನಿಂತಿರುವ ಬಗ್ಗೆ ದೂರು ಬಂದ ಹಿನ್ನೆಲೆ ಗ್ರಾಪಂ ಅಧ್ಯಕ್ಷ ಕುಮಾರ್ ಹಾಗೂ ಸದಸ್ಯ ಚಂದ್ರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸಂಬಂಧ ಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ.
ತೋಳಸಿಕೆರೆ ಗ್ರಾಮದಲ್ಲಿ ಸೋಲಾರ್ ದುರಸ್ತಿಯಾಗಿರುವ ಬಗ್ಗೆ ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಗಮನಕ್ಕೆ ತಂದಿದ್ದೇನೆ.
ಕಿರಣ್ ಪಿಡಿಒ ಮ, ಬೆಟ್ಟ
ತೋಳಸಿಕೆರೆ ಗ್ರಾಮದಲ್ಲಿ ಸೋಲಾರ್ ದುರಸ್ತಿಯಾಗಿರುವ ಬಗ್ಗೆ ಗಮನಕ್ಕೆ ಬಂದಿದೆ. ಈ ಸಂಬಂಧ ಏಜೆನ್ಸಿ ರವರೆಗೆ ದುರಸ್ತಿಪಡಿಸುವಂತೆ ತಿಳಿಸಲಾಗಿದೆ.ಏಜೆನ್ಸಿಯವರು ಬಂದು ಪರಿಶೀಲನೆ ನಡೆಸಿ ಐಸಿ ಹೋಗಿರುವುದಾಗಿ ತಿಳಿಸಿದ್ದಾರೆ. ಆದಷ್ಟು ಶೀಘ್ರದಲ್ಲಿ ಸಮಸ್ಯೆ ಬಗೆಹರಿಸಲಾಗುವುದು.
ಶಂಕರ್
ಎಇಇ ಸೆಸ್ಕಾಂ ಹನೂರು ಉಪವಿಭಾಗ
ಮುಂಬೈ: ಎನ್ಸಿಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ ಶರದ್ ಪವಾರ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶರದ್…
ಚಾಮರಾಜನಗರ : ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್ ಸಂದರ್ಭದಲ್ಲಿ ಆಮ್ಲಜನಕ ಕೊರತೆಯಿಂದ ಮೃತಪಟ್ಟವರ ಕುಟುಂಬಗಳ ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಹಾಗೂ…
ಗುಂಡ್ಲುಪೇಟೆ : ಮೂಢನಂಬಿಕೆಗಳಲ್ಲಿ ನನಗೆ ನಂಬಿಕೆಯಿಲ್ಲ. ಹಾಗಾಗಿ ಚಾಮರಾಜನಗರಕ್ಕೆ ಸಾಕಷ್ಟು ಭಾರಿ ಭೇಟಿ ನೀಡಿದ್ದೇನೆ. ಇಲ್ಲಿಗೆ ಬಂದರೆ ಕುರ್ಚಿ ಗಟ್ಟಿಯಾಗುತ್ತದೆ…
ಟೆಹ್ರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಎರಡನೇ ಸುತ್ತಿನ ಮಾತುಕತೆಗೆ ಅಮೆರಿಕ ಉತ್ಸುಕತೆ ತೋರಿದರೂ ಇರಾನ್ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ.…
ಕೆ.ಆರ್.ಎಸ್. ಅಣೆಕಟ್ಟೆಯಿಂದ ಹರಿಯುವ ವಿಶ್ವೇಶ್ವರಯ್ಯ ನಾಲೆಯ ಆಕರ್ಷಣೆ ಹೇಮಂತ್ಕುಮಾರ್ ಮಂಡ್ಯ : ಸುಡುವ ಬಿಸಿಲಿನಿಂದ ಕಂಗಾಲಾದ ಜನರು ತಂಪನ್ನೆರೆಯುವ ಜಲಪಾತಗಳತ್ತ…
ಬೇಸಿಗೆಯ ಸುಡು ಬಿಸಿಲು ಮತ್ತು ಅಸಹನೀಯ ಧಗೆಯಿಂದಾಗಿ ಜನರು ತಂಪು ಪಾನೀಯಗಳ ಮೊರೆ ಹೋಗುವುದು ಅನಿವಾರ್ಯ ವಾಗಿದೆ. ಇದನ್ನೇ ಬಂಡವಾಳ…