ಜಿಲ್ಲೆಗಳು

ಕೈ ಕೊಟ್ಟ ಸೋಲಾರ್ ಕಗ್ಗತ್ತಲಲ್ಲಿ ತೋಳಸಿಕೆರೆ ಗ್ರಾಮಸ್ಥರು

ಹನೂರು: ಕಳೆದ ಒಂದು ವಾರದಿಂದ ಸೋಲಾರ್ ಪ್ಲಾಂಟ್ ಕೆಟ್ಟಿರುರುವುದರಿಂದ ತೋಳಸಿಕೆರೆ ಗ್ರಾಮಸ್ಥರು ಕಗ್ಗತ್ತಲ್ಲಿ ಜೀವನ ಕಳೆಯುವಂತಾಗಿದೆ.

ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಈ ಗ್ರಾಮದಲ್ಲಿ ವಿದ್ಯುತ್ ಇಲ್ಲದೆ ಇದ್ದರಿಂದ ದೀನ್ ದಯಾಳ್ ಉಪಾಧ್ಯಾಯ ಗ್ರಾಮ ಜ್ಯೋತಿ ಯೋಜನೆ ಅಡಿ ಡಿಡಿಜಿ ಕಾರ್ಯಕ್ರಮದಡಿಯಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ಮೈಸೂರು ವತಿಯಿಂದ ಮುಂಬೈನ ನವ್ಯ ಟೆಕ್ನಾಲಜಿ ಸಂಸ್ಥೆಯ ಮೂಲಕ ಅಕ್ಟೋಬರ್ 31 2018 ರಂದು ಗ್ರಾಮದ 180 ಕುಟುಂಬಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಎರಡು ಕೋಟಿ 28 ಲಕ್ಷದ 48ಸಾವಿರ ವೆಚ್ಚದಲ್ಲಿ ಸೋಲಾರ್ ವಿದ್ಯುತ್ ಸೌಕರ್ಯ ಕಲ್ಪಿಸಲಾಗಿತ್ತು.

ಕಳೆದ ಒಂದು ವಾರದಿಂದ ಸೋಲಾರ್ ಪ್ಲಾಂಟ್ ಕೆಟ್ಟಿರುವುದರಿಂದ ಕಾಡು ಪ್ರಾಣಿಗಳ ಹಾವಳಿ ಹಾಗೂ ಕಗ್ಗತ್ತಲಿನಲ್ಲಿ ಜೀವನ ಕಳೆಯುವಂತಹ ಪರಿಸ್ಥಿತಿ ಬಂದಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಏಜೆನ್ಸಿಯವರು ತಕ್ಷಣ ಸೂಕ್ತ ಕ್ರಮ ಕೈಗೊಂಡು ಗ್ರಾಮಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಗ್ರಾಪಂ ಅಧ್ಯಕ್ಷ ಕುಮಾರ್ ಬೇಟಿ: ತೋಳಸಿಕೆರೆ ಗ್ರಾಮದಲ್ಲಿ ಸೋಲಾರ್ ಕೆಟ್ಟು ನಿಂತಿರುವ ಬಗ್ಗೆ ದೂರು ಬಂದ ಹಿನ್ನೆಲೆ ಗ್ರಾಪಂ ಅಧ್ಯಕ್ಷ ಕುಮಾರ್ ಹಾಗೂ ಸದಸ್ಯ ಚಂದ್ರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸಂಬಂಧ ಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ.


ತೋಳಸಿಕೆರೆ ಗ್ರಾಮದಲ್ಲಿ ಸೋಲಾರ್ ದುರಸ್ತಿಯಾಗಿರುವ ಬಗ್ಗೆ ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಗಮನಕ್ಕೆ ತಂದಿದ್ದೇನೆ.

ಕಿರಣ್ ಪಿಡಿಒ ಮ, ಬೆಟ್ಟ 


ತೋಳಸಿಕೆರೆ ಗ್ರಾಮದಲ್ಲಿ ಸೋಲಾರ್ ದುರಸ್ತಿಯಾಗಿರುವ ಬಗ್ಗೆ ಗಮನಕ್ಕೆ ಬಂದಿದೆ. ಈ ಸಂಬಂಧ ಏಜೆನ್ಸಿ ರವರೆಗೆ ದುರಸ್ತಿಪಡಿಸುವಂತೆ ತಿಳಿಸಲಾಗಿದೆ.ಏಜೆನ್ಸಿಯವರು ಬಂದು ಪರಿಶೀಲನೆ ನಡೆಸಿ ಐಸಿ ಹೋಗಿರುವುದಾಗಿ ತಿಳಿಸಿದ್ದಾರೆ. ಆದಷ್ಟು ಶೀಘ್ರದಲ್ಲಿ ಸಮಸ್ಯೆ ಬಗೆಹರಿಸಲಾಗುವುದು.

ಶಂಕರ್
ಎಇಇ ಸೆಸ್ಕಾಂ ಹನೂರು ಉಪವಿಭಾಗ

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

8 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

8 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

8 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

8 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

8 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

8 hours ago