Mysore
22
overcast clouds

Social Media

ಶನಿವಾರ, 13 ಜೂನ್ 2026
Light
Dark

ಹನೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಹನೂರು ಕ್ಷೇತ್ರದಲ್ಲಿ 9 ಸಮುದಾಯ ಭವನ ಮಂಜೂರು : ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಹನೂರು: ಕಳೆದ 3 ವರ್ಷಗಳಲ್ಲಿ ಹನೂರು ವಿಧಾನಸಭಾ ಕ್ಷೇತ್ರಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 9 ಸಮುದಾಯ ಭವನ ಮಂಜೂರು ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.

ಬೆಂಗಳೂರಿನ ವಿಧಾನಸಭೆ ಅಧಿವೇಶನದಲ್ಲಿ ಹನೂರು ಕ್ಷೇತ್ರದ ಶಾಸಕ ಆರ್ ನರೇಂದ್ರ ಅವರ ಪ್ರಶ್ನೆಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉತ್ತರಿಸಿ ಕಳೆದ 3ವರ್ಷಗಳಲ್ಲಿ ಹನೂರು ವಿಧಾನಸಭಾ ಕ್ಷೇತ್ರದಲ್ಲಿ 9ಸಮುದಾಯ ಭವನಗಳುಹಾಗೂ ವಿದ್ಯಾರ್ಥಿ ನಿಲಯಗಳು ಮಂಜೂರಾಗಿದ್ದು ಎಲ್ಲ ಸಮುದಾಯ ಭವನ ಹಾಗೂ ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣ ಕಾಮಗಾರಿಗಳು ಪ್ರಗತಿಯಲ್ಲಿದೆ,ಅಪೂರ್ಣಗೊಂಡ ಸಮುದಾಯ ಭವನ ಹಾಗೂ ವಿದ್ಯಾರ್ಥಿ ನಿಲಯಗಳಿಗೆ ಈಗಾಗಲೆ ಬಿಡುಗಡೆಯಾಗಿರುವ ಮೊದಲನೇ ಹಾಗೂ ಎರಡನೇ ಕಂತಿನ ಅನುದಾನಕ್ಕೆ ಸಂಬಂಧಪಟ್ಟ ಸಂಘ ಸಂಸ್ಥೆ ಹಾಗೂ ಟ್ರಸ್ಟ್ ಹಣ ಬಳಕೆ ಪ್ರಮಾಣ ಮತ್ತು ಕಟ್ಟಡ ನಿರ್ಮಾಣದ ಪ್ರಗತಿ ವರದಿ ಸಲ್ಲಿಕೆಯಾದ ನಂತರ ಸದರಿ ಕಾರ್ಯಕ್ರಮದಡಿ ಲಭ್ಯವಿರುವ ಅನುದಾನ ಹಾಗೂ ರಾಜ್ಯದ ಒಟ್ಟಾರೆ ಬೇಡಿಕೆಯನ್ನಾಧರಿಸಿ ಉಳಿಕೆ ಅನುದಾನವನ್ನು ಬಿಡುಗಡೆ ಗೊಳಿಸಿಅಪೂರ್ಣಗೊಂಡ ಸಮುದಾಯ ಭವನ ಹಾಗೂ ವಿದ್ಯಾರ್ಥಿ ನಿಲಯಗಳನ್ನು ಪೂರ್ಣಗೊಳಿಸಲು ಕ್ರಮವಹಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!