ಜಿಲ್ಲೆಗಳು

ಹನುಮ ಧ್ವಜ ತೆರವು ಪ್ರಕರಣ: ಸಿದ್ದರಾಮಯ್ಯಗೆ ಎಚ್ಚರಿಕೆ ನೀಡಿದ ಹೆಚ್‌ಡಿಕೆ

ಮಂಡ್ಯ: ತಾಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವುಗೊಳಿಸಿದ್ದನ್ನು ಖಂಡಿಸಿ ಬಿಜೆಪಿ, ಜೆಡಿಎಸ್‌, ಭಜರಂಗದಳ, ವಿಶ್ವ ಹಿಂದೂ ಪರಿಷತ್‌ ಕಾರ್ಯಕರ್ತರು ಕೆರಗೋಡು ಗ್ರಾಮದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೂ ಪಾದಯಾತ್ರೆ ಹಮ್ಮಿಕೊಂಡಿದ್ದರು.

ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಜಮಾಯಿಸಿದ ಕಾರ್ಯಕರ್ತರು ಜೈ ಶ್ರೀರಾಮ್‌ ಘೋಷಣೆ ಕೂಗಿದರು. ಈ ಪ್ರತಿಭಟನೆಯಲ್ಲಿ ಹೆಚ್‌ ಡಿ ಕುಮಾರಸ್ವಾಮಿ ಸಹ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಕುಮಾರಸ್ವಾಮಿ ಜೈ ಶ್ರೀರಾಮ್‌ ಎಂದು ಘೋಷಣೆ ಕೂಗುವ ಮೂಲಕ ತಮ್ಮ ಮಾತನ್ನು ಆರಂಭಿಸಿದರು.

ಹನುಮ ಧ್ವಜ ತೆರವುಗೊಳಿಸಿದ್ದರ ವಿರುದ್ಧ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಹಾಗೂ ಜನರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಈ ವೇಳೆ ಒಬ್ಬನ ಕಣ್ಣಿಗೆ ತೀವ್ರ ಏಟು ಬಿದ್ದಿದೆ. ಕಣ್ಣು ಹೋಗಿದ್ದರೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಣ್ಣು ತಂದು ಕೊಡುತ್ತಿದ್ರಾ? ಪೊಲೀಸರೇ ಎಚ್ಚರವಾಗಿರಿ. ಇನ್ನೆಷ್ಟು ದಿನ ನಿಮ್ಮ ಆಟ ನಡೆಯುತ್ತದೆಯೋ ನಾನೂ ನೋಡುತ್ತೇನೆ. ಯಾವನೋ ಹೇಳುತ್ತಾನೆ ಅಂತ ಹೇಗೆ ಬೇಕೋ ಹಾಗೆ ಕೆಲಸ ಮಾಡುವುದನ್ನು ನಾನು ಒಪ್ಪಲಾರೆ ಎಂದು ಕುಮಾರಸ್ವಾಮಿ ಕಿಡಿಕಾರಿದರು.

ಕೆರಗೋಡು ಗ್ರಾಮದಲ್ಲಿ ನಡೆದ ಸಂಘರ್ಷಕ್ಕೆ ಸರ್ಕಾರವೇ ಕಾರಣವಾಗಿದೆ. ಮೊದಲು ಜಿಲ್ಲಾಧಿಕಾರಿಯನ್ನು ಅಮಾನತು ಮಾಡಿ ಹೊರಗೆ ಕಳುಹಿಸಿ. ಆ ಘಟನೆಗೆಲ್ಲಾ ಮಂಡ್ಯ ಜಿಲ್ಲಾಧಿಕಾರಿಯೇ ಕಾರಣ. ಹನುಮಂತನನ್ನು ಕೆಣಕಿದ್ದಕ್ಕೆ ಲಂಕಾದಹನವಾಯಿತು. ಅದೇ ರೀತಿ ನಿಮ್ಮ ಅವನತಿ ಆಗುತ್ತದೆ. ಸಿದ್ದರಾಮಯ್ಯನವರೇ ಹೆಸರಿನಲ್ಲಿ ರಾಮ ಇದ್ದರೆ ಸಾಲದು. ನಿಮ್ಮಲ್ಲಿ ರಾಮನ ನಡವಳಿಕೆ ಇರಬೇಕು. ಇಲ್ಲಿ ನಡೆದ ಲಾಠಿ ಚಾರ್ಜ್‌ ಸರ್ಕಾರದ ರಾಕ್ಷಸ ಪ್ರವೃತ್ತಿಯನ್ನು ಘೋಷಿಸುತ್ತದೆ. ಸಿದ್ದರಾಮಯ್ಯ ಸರ್ಕಾರಕ್ಕೆ ಎಚ್ಚರಿಕೆ ಕೊಡುತ್ತಿದ್ದೇನೆ. ನಿಮ್ಮ ತಪ್ಪನ್ನು ತಿದ್ದುಕೊಳ್ಳಿ. ರಾಜಕೀಯ ಮಾಡಿದ್ದು ನೀವು. ಅಧಿಕಾರದ ಅಮಲಿನಲ್ಲಿ ದೈಹಿಕ ಹಲ್ಲೆ ಮಾಡಿಸಿದ್ದೀರಿ. ಈ ಹೋರಾಟವನ್ನು ಇಲ್ಲಿಗೆ ನಿಲ್ಲಿಸುವ ಪ್ರಶ್ನೆ ಇಲ್ಲ. ನಮ್ಮ ಕಾರ್ಯಕರ್ತರಿಗೆ ದೈಹಿಕವಾಗಿ ಪೆಟ್ಟು ಕೊಟ್ಟಿದ್ದೀರಿ. ಇದಕ್ಕಾಗಿ ಅಧಿಕಾರಿಗಳಿಗೆ ಪ್ರಾಯಶ್ಚಿತವಾಗಲೇಬೇಕು ಎಂದು ಕುಮಾರಸ್ವಾಮಿ ಹೇಳಿದರು.

ಇದು ರಾಜಕೀಯ ಲಾಭ ಅಥವಾ ನಷ್ಟದ ಹೋರಾಟವಲ್ಲ. ಧ್ವಜ ಸ್ತಂಭ ವಿಚಾರದಲ್ಲಿ ಸುಳ್ಳು ದಾಖಲೆ ಸೃಷ್ಟಿಯಾಗಿದೆ. ಅಧಿಕಾರಿಗಳನ್ನು ಬಳಸಿಕೊಂಡು ಉದ್ಧಟತನ ತೋರಿಸುತ್ತಿದ್ದಾರೆ. ಅಧಿಕಾರಿಗಳು ತಕ್ಷಣ ಕೆರಗೋಡಿನಲ್ಲಿ ಶಾಂತಿ ಸಭೆ ಕರೆಯಬೇಕು. ಧ್ವಜದ ಮರುಸ್ಥಾಪನೆಯಾಗಬೇಕು, ಅಲ್ಲಿಯವರೆಗೂ ನಮ್ಮ ಹೋರಾಟವಿರುತ್ತದೆ. 144 ಸೆಕ್ಷನ್‌ ಮೊದಲು ಕಿತ್ತುಹಾಕಿ. ಜನರು ಕೆರಳಿದರೆ ಪೊಲೀಸರಿಂದ ತಡೆಯಲು ಆಗುವುದಿಲ್ಲ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.

andolana

Recent Posts

ಸೈದ್ಧಾಂತಿಕ ಬದ್ಧತೆ; ಪಕ್ಷದ ಸಿದ್ಧಾಂತದಲ್ಲಿ ರಾಜಿ ಸಲ್ಲದು ; ಡಿಕೆಶಿಗೆ ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…

2 hours ago

ಹೊಸ ಸಚಿವ ಸಂಪುಟ ರಚನೆ ಬಗ್ಗೆ ಖರ್ಗೆ ಹೇಳಿದಿಷ್ಟು…

ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…

5 hours ago

ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ನಾಯಕರ ನಡುವೆ ಪೈಪೋಟಿ

ಬೆಂಗಳೂರು : ಡಿ.ಕೆ.ಶಿವಕುಮಾರ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…

8 hours ago

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

11 hours ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

11 hours ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

11 hours ago