ಜಿಲ್ಲೆಗಳು

ಹನುಮ ಧ್ವಜ ವಿವಾದ: ಶಾಂತಿ ಯಾತ್ರೆ ಮಾಡಲು ಮುಂದಾದ ಕಾಂಗ್ರೆಸ್‌

ಮಂಡ್ಯ: ತಾಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವುಗೊಳಿಸಿದ್ದ ಪ್ರಕರಣ ಇದೀಗ ರಾಜಕೀಯ ಸ್ವರೂಪವನ್ನು ಪಡೆದುಕೊಂಡಿದೆ. ಇಂದು ( ಜನವರಿ 29 ) ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಜತೆಗೂಡಿ ಕೆರಗೋಡು ಗ್ರಾಮದಿಂದ ಮಂಡ್ಯ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ನಡೆಸಿದರು.

ಈ ಯಾತ್ರೆಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸಿದ್ದರು. ಹೆಚ್‌ಡಿ ಕುಮಾರಸ್ವಾಮಿ ರೀತಿಯ ಬಲಿಷ್ಠ ನಾಯಕರೂ ಸಹ ಇದರಲ್ಲಿ ಪಾಲ್ಗೊಂಡು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಕಾಂಗ್ರೆಸ್‌ ವಿರುದ್ಧ ಕಿಡಿಕಾರಿ ಆಕ್ರೋಶ ಹೊರಹಾಕಿದ್ದರು.

ಇದೀಗ ಇದರ ಕುರಿತು ಪ್ರತಿಕ್ರಿಯಿಸಿರುವ ಮಂಡ್ಯ ಕಾಂಗ್ರೆಸ್ ಶಾಸಕ ರವಿ ಗಾಣಿಗ‌ ತ್ರಿರಂಗ ನಡಿಗೆ ಯಾತ್ರೆ ನಡೆಸಲು ತೀರ್ಮಾನಿಸಿದ್ದಾರೆ. ಈ ಕುರಿತು ಮಾತನಾಡಿದ ರವಿ ಗಾಣಿಗ ನಾನು ಶಾಂತಿ ಸಭೆ ಮಾಡಲು ಹೋಗಿದ್ರೆ ನನ್ನ ಕೊಲೆ ಮಾಡಿರುತ್ತಿದ್ರು. ನನ್ನ ಫ್ಲೆಕ್ಸ್‌ ಅನ್ನೇ ಬಿಡಲಿಲ್ಲ, ಇನ್ನು ನಾನು ಹೋಗಿದ್ರೆ ಬಿಡುತ್ತಿದ್ರಾ? ನನಗೂ ಕೇಸರಿ ಧ್ವಜದ ವಿಚಾರಕ್ಕೂ ಸಂಬಂಧವಿಲ್ಲ. ಶಾಂತಿ ಕಾಪಾಡುವ ಉದ್ದೇಶದಿಂದ ನಾವು ಶಾಂತಿ ಯಾತ್ರೆ ಮಾಡುತ್ತೇವೆ. ಶೀಘ್ರದಲ್ಲಿಯೇ ಶಾಂತಿ ಯಾತ್ರೆಯ ದಿನಾಂಕವನ್ನು ಘೋಷಣೆ ಮಾಡುತ್ತೇನೆ ಎಂದು ಹೇಳಿಕೆ ನೀಡಿದರು.

ಇನ್ನೂ ಮುಂದುವರಿದು ಮಾತನಾಡಿದ ರವಿ ಗಾಣಿಗ ನಾನು ಸಹ ಹಿಂದೂ, ಎಲ್ಲಾ ದೇವರನ್ನೂ ಪೂಜೆ ಮಾಡುತ್ತೇನೆ. ಮಂಡ್ಯದ ಆರ್‌ಎಸ್‌ಎಸ್‌ ಕಚೇರಿಗೆ ಹೋಗಿ ಒಂದು ಲಕ್ಷ ದೇಣಿಗೆ ನೀಡಿದ್ದೇನೆ. ಜನವರಿ 22ರಂದು ಸ್ಥಳೀಯ ರಾಮಮಂದಿರಕ್ಕೆ ಹೋಗಿದ್ದೇನೆ. ಇವರಿಂದ ದೇವರ ಪೂಜೆ ಮಾಡುವುದನ್ನು ನಾನು ಕಲಿಯಬೇಕಿಲ್ಲ. ನಮ್ಮ ಇಂಟೆಲಿಜೆನ್ಸ್‌ ವಿಫಲವಾಗಿದೆ. ಇಷ್ಟು ದೊಡ್ಡ ಗಲಾಟೆಯಾಗಿದೆ. ಹೊರಗಿನಿಂದ ಬಂದು ಗಲಾಟೆ ಮಾಡಿದ್ದಾರೆ. ನಮ್ಮ ಇಂಟೆಲಿಜೆನ್ಸ್‌ನವರು ಯಾಕೆ ಅವರನ್ನು ಒಳಗೆ ಬಿಟ್ಟರು. ಇದರ ಬಗ್ಗೆ ಸಹ ಮುಖ್ಯಮಂತ್ರಿಗಳಿಗೆ ಪತ್ರ ಬರೆಯುತ್ತೇನೆ ಎಂದು ಹೇಳಿದರು.

andolana

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

8 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

8 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

8 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

8 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

8 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

8 hours ago