ಮೈಸೂರು: ಹನುಮ ಜಯಂತಿ ಆಚರಣೆ ಹಿನ್ನೆಲೆ ಇಂದಿನಿಂದ ಮೂರು ದಿನಗಳ ಕಾಲ ಹುಣಸೂರು ತಾಲೂಕಿನಾದ್ಯಂತ ಮದ್ಯ ಮಾರಾಟ ನಿಷೇಧಲಾಗಿದೆ. ಜತೆಗೆ ಒಂದು ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಹನುಮ ಜಯಂತಿ ಶೋಭಾಯಾತ್ರೆಯ ಸಾಗುವ ಮಾರ್ಗಗಳನ್ನು ಎಸ್ಪಿ ಆರ್. ಚೇತನ್ ನೇತೃತ್ವದಲ್ಲಿ ಪರಿಶೀಲನೆ ನಡೆಸಿ ಪಥ ಸಂಚಲನ ಮಾಡಲಾಗಿದೆ. ಶಾಂತಿಯುತವಾಗಿ ಹನುಮ ಜಯಂತಿ ಆಚರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ.ಕಲ್ಕುಣಿಕೆ ರಂಗನಾಥ ಬಡಾವಣೆಯಿಂದ ಶೋಭಾಯಾತ್ರೆ ಆರಂಭವಾಗಲಿದೆ. ಕಾನೂನು ಸುವ್ಯವಸ್ಥೆಗಾಗಿ 1,700 ಮಂದಿ ಪೊಲೀಸರು, 9 ಡಿಎಆರ್, 8 ಕೆಎಸ್ಆರ್ಪಿ ತುಕಡಿ ನಿಯೋಜನೆ ಮಾಡಲಾಗಿದೆ. ನಗರಸಭೆ ವತಿಯಿಂದ 70 ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಕೆ ಮಾಡಲಾಗಿದ್ದು, ಕಂಟ್ರೋಲ್ ರೂಂ ಮೂಲಕ ನಿಯಂತ್ರಣ ಮಾಡಲಾಗುತ್ತಿದೆ.
ಬೆಳಗ್ಗೆ 11 ರಿಂದ ಸಂಜೆ 5ರವರೆಗೆ ಜೆಎಲ್ಬಿ, ಬಜಾರ್ ರಸ್ತೆಗಳಲ್ಲಿ ಸಾರ್ವಜನಿಕರ ಓಡಾಟ ನಿಷೇಧಿಸಲಾಗಿದೆ. ಅನುಮತಿ ಪಡೆದ ವಾಹನಗಳಿಗೆ ಮಾತ್ರ ಮೆರವಣಿಗೆಗೆ ಅವಕಾಶ ನೀಡಲಾಗಿದೆ. ಅಲ್ಲದೇ ವಾಹನಗಳ ಮೇಲೆ ಹತ್ತುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.ಡಿಜೆ ಬಳಕೆಗೆ ಅವಕಾಶ ನಿರಾಕರಿಸಲಾಗಿದೆ. ಸಂಜೆ 5ರವರೆಗೆ ಮಾತ್ರ ಮೆರವಣಿಗೆಗೆ ಅವಕಾಶ ಕಲ್ಪಿಸಲಾಗಿದೆ. ಮೆರವಣಿಗೆ ಸಾಗುವ ಎಲ್ಲಾ ಮಾರ್ಗಗಳ ಪರಿಶೀಲನೆ ಮಾಡಲಾಗಿದೆ. ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ 30 ಮಂದಿ ಆರೋಪಿತರ ಪಟ್ಟಿ ಸಿದ್ಧಪಡಿಸಿ ಅವರ ಚಲನವಲನದ ಮೇಲೆ ಒಬ್ಬರಿಗೆ ಒಬ್ಬ ಪೊಲೀಸರು ನಿಗಾ ವಹಿಸಿದ್ದಾರೆ. ನಗರ ಪ್ರವೇಶಿಸುವ 6 ಕಡೆ, ಜಿಲ್ಲೆಯ ಎರಡು ಕಡೆ, ಜಿಲ್ಲೆಯ ಎರಡು ಕಡೆಯಲ್ಲಿ ಚೆಕ್ಪೋಸ್ಟ್ ಮಾಡಲಾಗಿದೆ.
ಸಾರ್ವಜನಿಕರು ಏನೇ ದೂರುಗಳಿದ್ದರೂ ಸಹಾಯ ವಾಣಿ 112ಗೆ ಸಂಪರ್ಕಿಸುವಂತೆ ಮನವಿ ಮಾಡಲಾಗಿದೆ. ನಗರಸಭೆಯ ಅನುಮತಿಯೊಂದಿಗೆ ನಿಗದಿತ ಸ್ಥಳದಲ್ಲಿ ಮಾತ್ರ ಬಾವುಟ, ಫ್ಲೆಕ್ಸ್ ಅಳವಡಿಕೆಗೆ ಅವಕಾಶ ನೀಡಲಾಗಿದೆ.
ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿಯ ರಾಜೀವ್ ಗಾಂಧಿ ನಗರದಲ್ಲಿ ಬಸ್ ತಂಗುದಾಣವಿಲ್ಲದೆ ಸಾರ್ವಜನಿಕರು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲೇ ನಿಲ್ಲುವುದು…
ಲೋಕಸಭೆ ಮತ್ತು ವಿಧಾನಸಭೆ ಅಧಿವೇಶನಗಳು ಜನರ ಸಮಸ್ಯೆಗಳನ್ನು ಚರ್ಚಿಸಲು, ನೀತಿಗಳನ್ನು ರೂಪಿಸಲು ಹಾಗೂ ದೇಶ, ರಾಜ್ಯದ ಅಭಿವೃದ್ಧಿ ಕುರಿತು ಚರ್ಚಿಸಲು…
ಇತ್ತೀಚೆಗೆ ನಡೆದ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಕೆಲವು ಸದಸ್ಯರು ನಡೆದುಕೊಂಡ ರೀತಿ ತಲೆ ತಗ್ಗಿಸುವಂತಿದೆ. ಅವರು ಬಳಸಿದ ಪದ…
ಅತ್ಯಂತ ಅಪಾಯಕಾರಿ ಪರಿಸ್ಥಿತಿಯೊಂದನ್ನು ನನಗೆ ಹಸ್ತಾಂತರಿಸಲಾಗಿತ್ತು: ನರವಣೆ ‘ಜವಾಬ್ದಾರಿಯಿಂದ ಸಂಪೂರ್ಣವಾಗಿ ದೂರವೇ ಉಳಿದಿದ್ದ ಪ್ರಧಾನಿ’ ‘ಇಂದಿರಾ ಗಾಂದಿ, ವಾಜಪೇಯಿ ಪ್ರಧಾನಿಗಳಾಗಿದ್ದಾಗ…
ಲಕ್ಷ್ಮೀಕಾಂತ್ ಕೊಮಾರಪ್ಪ ಜನತೆಯ ೩೦ ವರ್ಷಗಳ ಕನಸು ಕೊನೆಗೂ ನನಸು; ೧.೦೫ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನಿಲ್ದಾಣ ಸೋಮವಾರಪೇಟೆ:…
ಮಹೇಂದ್ರ ಹಸಗೂಲಿ ನಿಯಮಾವಳಿ ಪಾಲಿಸದ ಕ್ರಷರ್; ದೂಳು-ಶಬ್ದ ಮಾಲಿನ್ಯ ಆರೋಪ ಗುಂಡ್ಲುಪೇಟೆ: ತಾಲ್ಲೂಕಿನ ಮಡಹಳ್ಳಿ ಗ್ರಾಮದ ಬಳಿ ಇರುವ ಪಾರ್ವತಿ…