ಜಿಲ್ಲೆಗಳು

ಹನುಮ ಜಯಂತಿ ಆಚರಣೆ : 3 ದಿನ ಮದ್ಯ ಮಾರಾಟಕ್ಕೆ ಬ್ರೇಕ್

ಮೈಸೂರು: ಹನುಮ ಜಯಂತಿ ಆಚರಣೆ ಹಿನ್ನೆಲೆ ಇಂದಿನಿಂದ ಮೂರು ದಿನಗಳ ಕಾಲ ಹುಣಸೂರು ತಾಲೂಕಿನಾದ್ಯಂತ ಮದ್ಯ ಮಾರಾಟ ನಿಷೇಧಲಾಗಿದೆ. ಜತೆಗೆ ಒಂದು ದಿನ‌ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಹನುಮ ಜಯಂತಿ ಶೋಭಾಯಾತ್ರೆಯ ಸಾಗುವ ಮಾರ್ಗಗಳನ್ನು ಎಸ್​ಪಿ ಆರ್‌. ಚೇತನ್‌ ನೇತೃತ್ವದಲ್ಲಿ ಪರಿಶೀಲನೆ ನಡೆಸಿ ಪಥ ಸಂಚಲನ ಮಾಡಲಾಗಿದೆ. ಶಾಂತಿಯುತವಾಗಿ ಹನುಮ ಜಯಂತಿ ಆಚರಿಸಲು ಅಗತ್ಯ ಕ್ರಮ‌ ಕೈಗೊಳ್ಳಲಾಗಿದೆ.ಕಲ್ಕುಣಿಕೆ ರಂಗನಾಥ ಬಡಾವಣೆಯಿಂದ ಶೋಭಾಯಾತ್ರೆ ಆರಂಭವಾಗಲಿದೆ. ಕಾನೂನು ಸುವ್ಯವಸ್ಥೆಗಾಗಿ 1,700 ಮಂದಿ ಪೊಲೀಸರು, 9 ಡಿಎಆರ್‌, 8 ಕೆಎಸ್‌ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿದೆ. ನಗರಸಭೆ ವತಿಯಿಂದ 70 ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಕೆ ಮಾಡಲಾಗಿದ್ದು, ಕಂಟ್ರೋಲ್‌ ರೂಂ ಮೂಲಕ ನಿಯಂತ್ರಣ ಮಾಡಲಾಗುತ್ತಿದೆ.
ಬೆಳಗ್ಗೆ 11 ರಿಂದ ಸಂಜೆ 5ರವರೆಗೆ ಜೆಎಲ್‌ಬಿ, ಬಜಾರ್‌ ರಸ್ತೆಗಳಲ್ಲಿ ಸಾರ್ವಜನಿಕರ ಓಡಾಟ ನಿಷೇಧಿಸಲಾಗಿದೆ. ಅನುಮತಿ ಪಡೆದ ವಾಹನಗಳಿಗೆ ಮಾತ್ರ ಮೆರವಣಿಗೆಗೆ ಅವಕಾಶ ನೀಡಲಾಗಿದೆ. ಅಲ್ಲದೇ ವಾಹನಗಳ ಮೇಲೆ ಹತ್ತುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.ಡಿಜೆ ಬಳಕೆಗೆ ಅವಕಾಶ ನಿರಾಕರಿಸಲಾಗಿದೆ. ಸಂಜೆ 5ರವರೆಗೆ ಮಾತ್ರ ಮೆರವಣಿಗೆಗೆ ಅವಕಾಶ ಕಲ್ಪಿಸಲಾಗಿದೆ. ಮೆರವಣಿಗೆ ಸಾಗುವ ಎಲ್ಲಾ ಮಾರ್ಗಗಳ ಪರಿಶೀಲನೆ ಮಾಡಲಾಗಿದೆ. ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ 30 ಮಂದಿ ಆರೋಪಿತರ ಪಟ್ಟಿ ಸಿದ್ಧಪಡಿಸಿ ಅವರ ಚಲನವಲನದ ಮೇಲೆ ಒಬ್ಬರಿಗೆ ಒಬ್ಬ ಪೊಲೀಸರು ನಿಗಾ ವಹಿಸಿದ್ದಾರೆ. ನಗರ ಪ್ರವೇಶಿಸುವ 6 ಕಡೆ, ಜಿಲ್ಲೆಯ ಎರಡು ಕಡೆ, ಜಿಲ್ಲೆಯ ಎರಡು ಕಡೆಯಲ್ಲಿ ಚೆಕ್‌ಪೋಸ್ಟ್‌ ಮಾಡಲಾಗಿದೆ.

ಸಾರ್ವಜನಿಕರು ಏನೇ ದೂರುಗಳಿದ್ದರೂ ಸಹಾಯ ವಾಣಿ 112ಗೆ ಸಂಪರ್ಕಿಸುವಂತೆ ಮನವಿ ಮಾಡಲಾಗಿದೆ. ನಗರಸಭೆಯ ಅನುಮತಿಯೊಂದಿಗೆ ನಿಗದಿತ ಸ್ಥಳದಲ್ಲಿ ಮಾತ್ರ ಬಾವುಟ, ಫ್ಲೆಕ್ಸ್‌ ಅಳವಡಿಕೆಗೆ ಅವಕಾಶ ನೀಡಲಾಗಿದೆ.

 

andolanait

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

5 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

6 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

7 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

7 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

8 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

8 hours ago