ಮೈಸೂರು: ಹನುಮ ಜಯಂತಿ ಆಚರಣೆ ಹಿನ್ನೆಲೆ ಇಂದಿನಿಂದ ಮೂರು ದಿನಗಳ ಕಾಲ ಹುಣಸೂರು ತಾಲೂಕಿನಾದ್ಯಂತ ಮದ್ಯ ಮಾರಾಟ ನಿಷೇಧಲಾಗಿದೆ. ಜತೆಗೆ ಒಂದು ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಹನುಮ ಜಯಂತಿ ಶೋಭಾಯಾತ್ರೆಯ ಸಾಗುವ ಮಾರ್ಗಗಳನ್ನು ಎಸ್ಪಿ ಆರ್. ಚೇತನ್ ನೇತೃತ್ವದಲ್ಲಿ ಪರಿಶೀಲನೆ ನಡೆಸಿ ಪಥ ಸಂಚಲನ ಮಾಡಲಾಗಿದೆ. ಶಾಂತಿಯುತವಾಗಿ ಹನುಮ ಜಯಂತಿ ಆಚರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ.ಕಲ್ಕುಣಿಕೆ ರಂಗನಾಥ ಬಡಾವಣೆಯಿಂದ ಶೋಭಾಯಾತ್ರೆ ಆರಂಭವಾಗಲಿದೆ. ಕಾನೂನು ಸುವ್ಯವಸ್ಥೆಗಾಗಿ 1,700 ಮಂದಿ ಪೊಲೀಸರು, 9 ಡಿಎಆರ್, 8 ಕೆಎಸ್ಆರ್ಪಿ ತುಕಡಿ ನಿಯೋಜನೆ ಮಾಡಲಾಗಿದೆ. ನಗರಸಭೆ ವತಿಯಿಂದ 70 ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಕೆ ಮಾಡಲಾಗಿದ್ದು, ಕಂಟ್ರೋಲ್ ರೂಂ ಮೂಲಕ ನಿಯಂತ್ರಣ ಮಾಡಲಾಗುತ್ತಿದೆ.
ಬೆಳಗ್ಗೆ 11 ರಿಂದ ಸಂಜೆ 5ರವರೆಗೆ ಜೆಎಲ್ಬಿ, ಬಜಾರ್ ರಸ್ತೆಗಳಲ್ಲಿ ಸಾರ್ವಜನಿಕರ ಓಡಾಟ ನಿಷೇಧಿಸಲಾಗಿದೆ. ಅನುಮತಿ ಪಡೆದ ವಾಹನಗಳಿಗೆ ಮಾತ್ರ ಮೆರವಣಿಗೆಗೆ ಅವಕಾಶ ನೀಡಲಾಗಿದೆ. ಅಲ್ಲದೇ ವಾಹನಗಳ ಮೇಲೆ ಹತ್ತುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.ಡಿಜೆ ಬಳಕೆಗೆ ಅವಕಾಶ ನಿರಾಕರಿಸಲಾಗಿದೆ. ಸಂಜೆ 5ರವರೆಗೆ ಮಾತ್ರ ಮೆರವಣಿಗೆಗೆ ಅವಕಾಶ ಕಲ್ಪಿಸಲಾಗಿದೆ. ಮೆರವಣಿಗೆ ಸಾಗುವ ಎಲ್ಲಾ ಮಾರ್ಗಗಳ ಪರಿಶೀಲನೆ ಮಾಡಲಾಗಿದೆ. ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ 30 ಮಂದಿ ಆರೋಪಿತರ ಪಟ್ಟಿ ಸಿದ್ಧಪಡಿಸಿ ಅವರ ಚಲನವಲನದ ಮೇಲೆ ಒಬ್ಬರಿಗೆ ಒಬ್ಬ ಪೊಲೀಸರು ನಿಗಾ ವಹಿಸಿದ್ದಾರೆ. ನಗರ ಪ್ರವೇಶಿಸುವ 6 ಕಡೆ, ಜಿಲ್ಲೆಯ ಎರಡು ಕಡೆ, ಜಿಲ್ಲೆಯ ಎರಡು ಕಡೆಯಲ್ಲಿ ಚೆಕ್ಪೋಸ್ಟ್ ಮಾಡಲಾಗಿದೆ.
ಸಾರ್ವಜನಿಕರು ಏನೇ ದೂರುಗಳಿದ್ದರೂ ಸಹಾಯ ವಾಣಿ 112ಗೆ ಸಂಪರ್ಕಿಸುವಂತೆ ಮನವಿ ಮಾಡಲಾಗಿದೆ. ನಗರಸಭೆಯ ಅನುಮತಿಯೊಂದಿಗೆ ನಿಗದಿತ ಸ್ಥಳದಲ್ಲಿ ಮಾತ್ರ ಬಾವುಟ, ಫ್ಲೆಕ್ಸ್ ಅಳವಡಿಕೆಗೆ ಅವಕಾಶ ನೀಡಲಾಗಿದೆ.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…