ಜಿಲ್ಲೆಗಳು

ಹನುಮ ಜಯಂತಿ ಆಚರಣೆ : 3 ದಿನ ಮದ್ಯ ಮಾರಾಟಕ್ಕೆ ಬ್ರೇಕ್

ಮೈಸೂರು: ಹನುಮ ಜಯಂತಿ ಆಚರಣೆ ಹಿನ್ನೆಲೆ ಇಂದಿನಿಂದ ಮೂರು ದಿನಗಳ ಕಾಲ ಹುಣಸೂರು ತಾಲೂಕಿನಾದ್ಯಂತ ಮದ್ಯ ಮಾರಾಟ ನಿಷೇಧಲಾಗಿದೆ. ಜತೆಗೆ ಒಂದು ದಿನ‌ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಹನುಮ ಜಯಂತಿ ಶೋಭಾಯಾತ್ರೆಯ ಸಾಗುವ ಮಾರ್ಗಗಳನ್ನು ಎಸ್​ಪಿ ಆರ್‌. ಚೇತನ್‌ ನೇತೃತ್ವದಲ್ಲಿ ಪರಿಶೀಲನೆ ನಡೆಸಿ ಪಥ ಸಂಚಲನ ಮಾಡಲಾಗಿದೆ. ಶಾಂತಿಯುತವಾಗಿ ಹನುಮ ಜಯಂತಿ ಆಚರಿಸಲು ಅಗತ್ಯ ಕ್ರಮ‌ ಕೈಗೊಳ್ಳಲಾಗಿದೆ.ಕಲ್ಕುಣಿಕೆ ರಂಗನಾಥ ಬಡಾವಣೆಯಿಂದ ಶೋಭಾಯಾತ್ರೆ ಆರಂಭವಾಗಲಿದೆ. ಕಾನೂನು ಸುವ್ಯವಸ್ಥೆಗಾಗಿ 1,700 ಮಂದಿ ಪೊಲೀಸರು, 9 ಡಿಎಆರ್‌, 8 ಕೆಎಸ್‌ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿದೆ. ನಗರಸಭೆ ವತಿಯಿಂದ 70 ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಕೆ ಮಾಡಲಾಗಿದ್ದು, ಕಂಟ್ರೋಲ್‌ ರೂಂ ಮೂಲಕ ನಿಯಂತ್ರಣ ಮಾಡಲಾಗುತ್ತಿದೆ.
ಬೆಳಗ್ಗೆ 11 ರಿಂದ ಸಂಜೆ 5ರವರೆಗೆ ಜೆಎಲ್‌ಬಿ, ಬಜಾರ್‌ ರಸ್ತೆಗಳಲ್ಲಿ ಸಾರ್ವಜನಿಕರ ಓಡಾಟ ನಿಷೇಧಿಸಲಾಗಿದೆ. ಅನುಮತಿ ಪಡೆದ ವಾಹನಗಳಿಗೆ ಮಾತ್ರ ಮೆರವಣಿಗೆಗೆ ಅವಕಾಶ ನೀಡಲಾಗಿದೆ. ಅಲ್ಲದೇ ವಾಹನಗಳ ಮೇಲೆ ಹತ್ತುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.ಡಿಜೆ ಬಳಕೆಗೆ ಅವಕಾಶ ನಿರಾಕರಿಸಲಾಗಿದೆ. ಸಂಜೆ 5ರವರೆಗೆ ಮಾತ್ರ ಮೆರವಣಿಗೆಗೆ ಅವಕಾಶ ಕಲ್ಪಿಸಲಾಗಿದೆ. ಮೆರವಣಿಗೆ ಸಾಗುವ ಎಲ್ಲಾ ಮಾರ್ಗಗಳ ಪರಿಶೀಲನೆ ಮಾಡಲಾಗಿದೆ. ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ 30 ಮಂದಿ ಆರೋಪಿತರ ಪಟ್ಟಿ ಸಿದ್ಧಪಡಿಸಿ ಅವರ ಚಲನವಲನದ ಮೇಲೆ ಒಬ್ಬರಿಗೆ ಒಬ್ಬ ಪೊಲೀಸರು ನಿಗಾ ವಹಿಸಿದ್ದಾರೆ. ನಗರ ಪ್ರವೇಶಿಸುವ 6 ಕಡೆ, ಜಿಲ್ಲೆಯ ಎರಡು ಕಡೆ, ಜಿಲ್ಲೆಯ ಎರಡು ಕಡೆಯಲ್ಲಿ ಚೆಕ್‌ಪೋಸ್ಟ್‌ ಮಾಡಲಾಗಿದೆ.

ಸಾರ್ವಜನಿಕರು ಏನೇ ದೂರುಗಳಿದ್ದರೂ ಸಹಾಯ ವಾಣಿ 112ಗೆ ಸಂಪರ್ಕಿಸುವಂತೆ ಮನವಿ ಮಾಡಲಾಗಿದೆ. ನಗರಸಭೆಯ ಅನುಮತಿಯೊಂದಿಗೆ ನಿಗದಿತ ಸ್ಥಳದಲ್ಲಿ ಮಾತ್ರ ಬಾವುಟ, ಫ್ಲೆಕ್ಸ್‌ ಅಳವಡಿಕೆಗೆ ಅವಕಾಶ ನೀಡಲಾಗಿದೆ.

 

andolanait

Recent Posts

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

12 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

16 hours ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

16 hours ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

17 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

17 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

18 hours ago