ಮೈಸೂರಿನಲ್ಲಿ ಇಂದು ( ಡಿಸೆಂಬರ್ 30 ) ಹನುಮೋತ್ಸವ ನಡೆದಿದೆ. ಹನುಮೋತ್ಸವ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಹನುಮ ಜಯಂತಿ ಅದ್ದೂರಿಯಾಗಿ ನಡೆಯಿತು. ಅರಮನೆ ಸಮೀಪದ ಕೋಟೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಸಲ್ಲಿಸಿದ ಬಳಿಕ 8 ಹನುಮ ಮೂರ್ತಿಗಳ ಮೆರವಣಿಗೆಯನ್ನು ಮಾಡಲಾಯಿತು.
ಈ ಸಮಾರಂಭದಲ್ಲಿ ವಿವಿಧ ಪಕ್ಷಗಳ ರಾಜಕೀಯ ನಾಯಕರು ಭಾಗವಹಿಸಿದ್ದರು. ಶಾಸಕರಾದ ಜಿಟಿ ದೇವೇಗೌಡ, ಟಿ ಎಸ್ ಶ್ರೀವತ್ಸ, ಕೆ ಹರೀಶ್ ಗೌಡ, ಮಾಜಿ ಮಹಾಪೌರ ಶಿವಕುಮಾರ್, ಜಿಲ್ಲಾ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಟಿಡಿ ಪ್ರಕಾಶ್, ಮೈಸೂರು ನಗರ ಕಾಂಗ್ರೆಸ್ ಅಧ್ಯಕ್ಷ ಆರ್ ಮೂರ್ತಿ, ನಗರ ಪಾಲಿಕೆ ಮಾಜಿ ಸದಸ್ಯ ಎಂ ಶಿವಣ್ಣ ಸೇರಿದಂತೆ ಹಲವರು ಭಾಗವಹಿಸಿದ್ದರು.
ಈ ಉತ್ಸವದಲ್ಲಿ ಸಾವಿರಾರು ಹನುಮ ಭಕ್ತರು ಭಾಗವಹಿಸಿ, ಕೇಸರಿ ಶಾಲು ಧರಿಸಿ, ಕೇಸರಿ ಬಾವುಟ ಹಾರಿಸುತ್ತಾ ರಾಮ ಹಾಗೂ ಹನುಮನಿಗೆ ಜೈಕಾರ ಕೂಗಿ ಸಂಭ್ರಮಿಸಿದರು. ಮೆರವಣಿಗೆಯಲ್ಲಿ ಹನುಮ ಮೂರ್ತಿಗೆ ತಿಂಡಿ ತಿನಿಸುಗಳ ಹಾರ ಹಾಕಿದ್ದು ವಿಶೇಷವಾಗಿತ್ತು. ಅಲ್ಲದೇ ಅಯೋಧ್ಯೆಯ ರಾಮಮಂದಿರದ ಸ್ತಬ್ಧಚಿತ್ರ ಎಲ್ಲರ ಗಮನ ಸೆಳೆಯಿತು.
ಮೈಸೂರು ಹನುಮೋತ್ಸವ ವಿಡಿಯೊ ವೀಕ್ಷಿಸಲು ಈ ಲಿಂಕ್ ಮೇಲ್ ಕ್ಲಿಕ್ ಮಾಡಿ: https://youtu.be/i8srMreMNXs?si=ARqT_4bKvov5rVuD
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದೆಹಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಕೈಗೊಂಡಿದ್ದು, ಕೆಮಿಕಲ್ ಘಟಕದಲ್ಲಿ ಲೇಬಲ್ ಇಲ್ಲದ ಖಾಲಿ ಬಾಟಲ್ಗಳನ್ನು…
ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…
ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…
ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…
ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…