ಮೈಸೂರಿನಲ್ಲಿ ಇಂದು ( ಡಿಸೆಂಬರ್ 30 ) ಹನುಮೋತ್ಸವ ನಡೆದಿದೆ. ಹನುಮೋತ್ಸವ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಹನುಮ ಜಯಂತಿ ಅದ್ದೂರಿಯಾಗಿ ನಡೆಯಿತು. ಅರಮನೆ ಸಮೀಪದ ಕೋಟೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಸಲ್ಲಿಸಿದ ಬಳಿಕ 8 ಹನುಮ ಮೂರ್ತಿಗಳ ಮೆರವಣಿಗೆಯನ್ನು ಮಾಡಲಾಯಿತು.
ಈ ಸಮಾರಂಭದಲ್ಲಿ ವಿವಿಧ ಪಕ್ಷಗಳ ರಾಜಕೀಯ ನಾಯಕರು ಭಾಗವಹಿಸಿದ್ದರು. ಶಾಸಕರಾದ ಜಿಟಿ ದೇವೇಗೌಡ, ಟಿ ಎಸ್ ಶ್ರೀವತ್ಸ, ಕೆ ಹರೀಶ್ ಗೌಡ, ಮಾಜಿ ಮಹಾಪೌರ ಶಿವಕುಮಾರ್, ಜಿಲ್ಲಾ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಟಿಡಿ ಪ್ರಕಾಶ್, ಮೈಸೂರು ನಗರ ಕಾಂಗ್ರೆಸ್ ಅಧ್ಯಕ್ಷ ಆರ್ ಮೂರ್ತಿ, ನಗರ ಪಾಲಿಕೆ ಮಾಜಿ ಸದಸ್ಯ ಎಂ ಶಿವಣ್ಣ ಸೇರಿದಂತೆ ಹಲವರು ಭಾಗವಹಿಸಿದ್ದರು.
ಈ ಉತ್ಸವದಲ್ಲಿ ಸಾವಿರಾರು ಹನುಮ ಭಕ್ತರು ಭಾಗವಹಿಸಿ, ಕೇಸರಿ ಶಾಲು ಧರಿಸಿ, ಕೇಸರಿ ಬಾವುಟ ಹಾರಿಸುತ್ತಾ ರಾಮ ಹಾಗೂ ಹನುಮನಿಗೆ ಜೈಕಾರ ಕೂಗಿ ಸಂಭ್ರಮಿಸಿದರು. ಮೆರವಣಿಗೆಯಲ್ಲಿ ಹನುಮ ಮೂರ್ತಿಗೆ ತಿಂಡಿ ತಿನಿಸುಗಳ ಹಾರ ಹಾಕಿದ್ದು ವಿಶೇಷವಾಗಿತ್ತು. ಅಲ್ಲದೇ ಅಯೋಧ್ಯೆಯ ರಾಮಮಂದಿರದ ಸ್ತಬ್ಧಚಿತ್ರ ಎಲ್ಲರ ಗಮನ ಸೆಳೆಯಿತು.
ಮೈಸೂರು ಹನುಮೋತ್ಸವ ವಿಡಿಯೊ ವೀಕ್ಷಿಸಲು ಈ ಲಿಂಕ್ ಮೇಲ್ ಕ್ಲಿಕ್ ಮಾಡಿ: https://youtu.be/i8srMreMNXs?si=ARqT_4bKvov5rVuD
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…
ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…
ರೇಣುಕಾ ನಿಡುಗುಂದಿ ಜಂತರ್ ಮಂತರ್ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…
ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…