ಜಿಲ್ಲೆಗಳು

ಹನೂರು : ಶಬರಿಮಲೆ ಅಯ್ಯಪ್ಪ ಭಕ್ತರಿಂದ ಅಯ್ಯಪ್ಪ ಸ್ವಾಮಿ ಉತ್ಸವ

ಹನೂರು: ತಾಲ್ಲೂಕಿನ ಕಾಂಚಳ್ಳಿ ಗ್ರಾಮದಲ್ಲಿ ಶಬರಿಮಲೆ ಅಯ್ಯಪ್ಪ ಭಕ್ತರಿಂದ ಅಯ್ಯಪ್ಪ ಸ್ವಾಮಿ ಉತ್ಸವ ಕಾರ್ಯಕ್ರಮ ವಿಧಿ ವಿಧಾನಗಳೊಂದಿಗೆ ಜರುಗಿತು.

ಇದೇ ಸಂದರ್ಭದಲ್ಲಿ ಗುರುಸ್ವಾಮಿ ಕಾಂತರಾಜು ಮಾತನಾಡಿ ಕಳೆದ ಮೂವತ್ತು ವರ್ಷಗಳಿಂದ ನಿರಂತರವಾಗಿ ಶಬರಿಮಲೆ ಯಾತ್ರಾ ಪ್ರವಾಸ ಕೈಗೊಳ್ಳುತ್ತಿದ್ದೇವೆ. ಕಳೆದ 2 ವರ್ಷ ದೇಶಾದ್ಯಂತ ಕರೋನ ಮಹಾಮಾರಿ ವ್ಯಾಪಿಸಿದ್ದ ಹಿನ್ನೆಲೆ ಪ್ರವಾಸ ಸ್ಥಗಿತಗೊಳಿಸಲಾಗಿತ್ತು. ಇದೀಗ ಕರೋನಾ ಮಹಾಮಾರಿ ಕಡಿಮೆಯಾಗಿರುವುದರಿಂದ ಮತ್ತೆ ಶಬರಿಮಲೆ ಯಾತ್ರಾ ಪ್ರವಾಸ ಕೈಗೊಂಡಿದ್ದೇವೆ. ಗ್ರಾಮದಲ್ಲಿ ಉತ್ತಮ ಮಳೆ,ಬೆಳೆಯಾಗಿ ಜನತೆ ಸದಾ ಸಮೃದ್ಧಿಯಾಗಿರಲಿ ಎಂದು ಪ್ರತಿವರ್ಷ ವಿಶೇಷ ಪೂಜೆ ಮಾಡುತ್ತಿದ್ದೇವೆ .ಅದರಂತೆ ಈ ವರ್ಷವೂ ಸಹ ಶಬರಿಮಲೆ ಅಯ್ಯಪ್ಪ ಉತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಉತ್ಸವ ಮುಗಿದ ನಂತರ ಗ್ರಾಮಸ್ಥರಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಇದೇ ವೇಳೆ ಅಯ್ಯಪ್ಪ ಮಾಲಾಧಾರಿಗಳು “ಸ್ವಾಮಿಯೇ ಶರಣಂ ಅಯ್ಯಪ್ಪ” ಎಂಬ ಘೋಷಣೆಯೊಂದಿಗೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

andolana

Recent Posts

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

10 hours ago

ಮೃಗಾಲಯದ ಬೇಟೆ ಚೀತಾ ‘ಬ್ರೂಕ್’ ಇನ್ನಿಲ್ಲ

ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…

11 hours ago

ಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…

11 hours ago

ಎಚ್.ಡಿ.ಕೋಟೆ | ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಮಾದರಿ ಕಾರ್ಯಕ್ರಮ

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…

11 hours ago

ಹೊಗೇನಕಲ್‌ ಜಲಪಾತಕ್ಕೆ ಪ್ರವಾಸಿಗರ ದಂಡು

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…

11 hours ago