ಹನೂರು: ತಾಲ್ಲೂಕಿನ ಕಾಂಚಳ್ಳಿ ಗ್ರಾಮದಲ್ಲಿ ಶಬರಿಮಲೆ ಅಯ್ಯಪ್ಪ ಭಕ್ತರಿಂದ ಅಯ್ಯಪ್ಪ ಸ್ವಾಮಿ ಉತ್ಸವ ಕಾರ್ಯಕ್ರಮ ವಿಧಿ ವಿಧಾನಗಳೊಂದಿಗೆ ಜರುಗಿತು.
ಇದೇ ಸಂದರ್ಭದಲ್ಲಿ ಗುರುಸ್ವಾಮಿ ಕಾಂತರಾಜು ಮಾತನಾಡಿ ಕಳೆದ ಮೂವತ್ತು ವರ್ಷಗಳಿಂದ ನಿರಂತರವಾಗಿ ಶಬರಿಮಲೆ ಯಾತ್ರಾ ಪ್ರವಾಸ ಕೈಗೊಳ್ಳುತ್ತಿದ್ದೇವೆ. ಕಳೆದ 2 ವರ್ಷ ದೇಶಾದ್ಯಂತ ಕರೋನ ಮಹಾಮಾರಿ ವ್ಯಾಪಿಸಿದ್ದ ಹಿನ್ನೆಲೆ ಪ್ರವಾಸ ಸ್ಥಗಿತಗೊಳಿಸಲಾಗಿತ್ತು. ಇದೀಗ ಕರೋನಾ ಮಹಾಮಾರಿ ಕಡಿಮೆಯಾಗಿರುವುದರಿಂದ ಮತ್ತೆ ಶಬರಿಮಲೆ ಯಾತ್ರಾ ಪ್ರವಾಸ ಕೈಗೊಂಡಿದ್ದೇವೆ. ಗ್ರಾಮದಲ್ಲಿ ಉತ್ತಮ ಮಳೆ,ಬೆಳೆಯಾಗಿ ಜನತೆ ಸದಾ ಸಮೃದ್ಧಿಯಾಗಿರಲಿ ಎಂದು ಪ್ರತಿವರ್ಷ ವಿಶೇಷ ಪೂಜೆ ಮಾಡುತ್ತಿದ್ದೇವೆ .ಅದರಂತೆ ಈ ವರ್ಷವೂ ಸಹ ಶಬರಿಮಲೆ ಅಯ್ಯಪ್ಪ ಉತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಉತ್ಸವ ಮುಗಿದ ನಂತರ ಗ್ರಾಮಸ್ಥರಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಇದೇ ವೇಳೆ ಅಯ್ಯಪ್ಪ ಮಾಲಾಧಾರಿಗಳು “ಸ್ವಾಮಿಯೇ ಶರಣಂ ಅಯ್ಯಪ್ಪ” ಎಂಬ ಘೋಷಣೆಯೊಂದಿಗೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…
ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್ಗೆ ಹೋಗುತಿದ್ದ ಇಂಡಿಗೊ…
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…
ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…
ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…