ಹನೂರು: ತಾಲ್ಲೂಕಿನ ಕಾಂಚಳ್ಳಿ ಗ್ರಾಮದಲ್ಲಿ ಶಬರಿಮಲೆ ಅಯ್ಯಪ್ಪ ಭಕ್ತರಿಂದ ಅಯ್ಯಪ್ಪ ಸ್ವಾಮಿ ಉತ್ಸವ ಕಾರ್ಯಕ್ರಮ ವಿಧಿ ವಿಧಾನಗಳೊಂದಿಗೆ ಜರುಗಿತು.
ಇದೇ ಸಂದರ್ಭದಲ್ಲಿ ಗುರುಸ್ವಾಮಿ ಕಾಂತರಾಜು ಮಾತನಾಡಿ ಕಳೆದ ಮೂವತ್ತು ವರ್ಷಗಳಿಂದ ನಿರಂತರವಾಗಿ ಶಬರಿಮಲೆ ಯಾತ್ರಾ ಪ್ರವಾಸ ಕೈಗೊಳ್ಳುತ್ತಿದ್ದೇವೆ. ಕಳೆದ 2 ವರ್ಷ ದೇಶಾದ್ಯಂತ ಕರೋನ ಮಹಾಮಾರಿ ವ್ಯಾಪಿಸಿದ್ದ ಹಿನ್ನೆಲೆ ಪ್ರವಾಸ ಸ್ಥಗಿತಗೊಳಿಸಲಾಗಿತ್ತು. ಇದೀಗ ಕರೋನಾ ಮಹಾಮಾರಿ ಕಡಿಮೆಯಾಗಿರುವುದರಿಂದ ಮತ್ತೆ ಶಬರಿಮಲೆ ಯಾತ್ರಾ ಪ್ರವಾಸ ಕೈಗೊಂಡಿದ್ದೇವೆ. ಗ್ರಾಮದಲ್ಲಿ ಉತ್ತಮ ಮಳೆ,ಬೆಳೆಯಾಗಿ ಜನತೆ ಸದಾ ಸಮೃದ್ಧಿಯಾಗಿರಲಿ ಎಂದು ಪ್ರತಿವರ್ಷ ವಿಶೇಷ ಪೂಜೆ ಮಾಡುತ್ತಿದ್ದೇವೆ .ಅದರಂತೆ ಈ ವರ್ಷವೂ ಸಹ ಶಬರಿಮಲೆ ಅಯ್ಯಪ್ಪ ಉತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಉತ್ಸವ ಮುಗಿದ ನಂತರ ಗ್ರಾಮಸ್ಥರಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಇದೇ ವೇಳೆ ಅಯ್ಯಪ್ಪ ಮಾಲಾಧಾರಿಗಳು “ಸ್ವಾಮಿಯೇ ಶರಣಂ ಅಯ್ಯಪ್ಪ” ಎಂಬ ಘೋಷಣೆಯೊಂದಿಗೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…
ಬೆಂಗಳೂರು: ಬೌರಿಂಗ್ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್ ಅನ್ನು ಕೂಡಲೇ ಅಮಾನತು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…
ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…