ಜಿಲ್ಲೆಗಳು

ಹನೂರು : ಶಬರಿಮಲೆ ಅಯ್ಯಪ್ಪ ಭಕ್ತರಿಂದ ಅಯ್ಯಪ್ಪ ಸ್ವಾಮಿ ಉತ್ಸವ

ಹನೂರು: ತಾಲ್ಲೂಕಿನ ಕಾಂಚಳ್ಳಿ ಗ್ರಾಮದಲ್ಲಿ ಶಬರಿಮಲೆ ಅಯ್ಯಪ್ಪ ಭಕ್ತರಿಂದ ಅಯ್ಯಪ್ಪ ಸ್ವಾಮಿ ಉತ್ಸವ ಕಾರ್ಯಕ್ರಮ ವಿಧಿ ವಿಧಾನಗಳೊಂದಿಗೆ ಜರುಗಿತು.

ಇದೇ ಸಂದರ್ಭದಲ್ಲಿ ಗುರುಸ್ವಾಮಿ ಕಾಂತರಾಜು ಮಾತನಾಡಿ ಕಳೆದ ಮೂವತ್ತು ವರ್ಷಗಳಿಂದ ನಿರಂತರವಾಗಿ ಶಬರಿಮಲೆ ಯಾತ್ರಾ ಪ್ರವಾಸ ಕೈಗೊಳ್ಳುತ್ತಿದ್ದೇವೆ. ಕಳೆದ 2 ವರ್ಷ ದೇಶಾದ್ಯಂತ ಕರೋನ ಮಹಾಮಾರಿ ವ್ಯಾಪಿಸಿದ್ದ ಹಿನ್ನೆಲೆ ಪ್ರವಾಸ ಸ್ಥಗಿತಗೊಳಿಸಲಾಗಿತ್ತು. ಇದೀಗ ಕರೋನಾ ಮಹಾಮಾರಿ ಕಡಿಮೆಯಾಗಿರುವುದರಿಂದ ಮತ್ತೆ ಶಬರಿಮಲೆ ಯಾತ್ರಾ ಪ್ರವಾಸ ಕೈಗೊಂಡಿದ್ದೇವೆ. ಗ್ರಾಮದಲ್ಲಿ ಉತ್ತಮ ಮಳೆ,ಬೆಳೆಯಾಗಿ ಜನತೆ ಸದಾ ಸಮೃದ್ಧಿಯಾಗಿರಲಿ ಎಂದು ಪ್ರತಿವರ್ಷ ವಿಶೇಷ ಪೂಜೆ ಮಾಡುತ್ತಿದ್ದೇವೆ .ಅದರಂತೆ ಈ ವರ್ಷವೂ ಸಹ ಶಬರಿಮಲೆ ಅಯ್ಯಪ್ಪ ಉತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಉತ್ಸವ ಮುಗಿದ ನಂತರ ಗ್ರಾಮಸ್ಥರಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಇದೇ ವೇಳೆ ಅಯ್ಯಪ್ಪ ಮಾಲಾಧಾರಿಗಳು “ಸ್ವಾಮಿಯೇ ಶರಣಂ ಅಯ್ಯಪ್ಪ” ಎಂಬ ಘೋಷಣೆಯೊಂದಿಗೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

andolana

Recent Posts

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

8 hours ago

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು…

11 hours ago

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

12 hours ago

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

13 hours ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

14 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

19 hours ago