ಜಿಲ್ಲೆಗಳು

ಹನೂರು: ದೇಶವಾಸಿಗಳು ಹಕ್ಕು, ಕರ್ತವ್ಯಗಳ ಪಾಲನೆ ಮಾಡಬೇಕು: ತಹಸಿಲ್ದಾರ್ ಧನಂಜಯ್

ಹನೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕರಡು ಸಮಿತಿ ಅಧ್ಯಕ್ಷತೆಯಲ್ಲಿ ರಚನೆಗೊಂಡ ಭಾರತದ ಸಂವಿಧಾನ ಆಶಯಗಳಿಗನುಗುಣವಾಗಿ ದೇಶವಾಸಿಗಳು ಹಕ್ಕು ಮತ್ತು ಕರ್ತವ್ಯಗಳನ್ನು ಪಾಲನೆ ಮಾಡಬೇಕೆಂದು ಗ್ರೇಡ್ 2 ತಹಸಿಲ್ದಾರ್ ಧನಂಜಯ್ ತಿಳಿಸಿದರು.

ಪಟ್ಟಣದ ಲೋಕೋಪಯೋಗಿ ವಸತಿ ಗೃಹ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಂವಿಧಾನ ಸಮರ್ಪಣಾ ದಿನ ಕಾರ್ಯಕ್ರಮದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಬಳಿಕ ಮಾತನಾಡಿದರು.

ಭಾರತದ ಸಂವಿಧಾನ ವಿಶ್ವದ ಅತ್ಯಂತ ಬೃಹತ್ ಲಿಖಿತ ರೂಪದ ಸಂವಿಧಾನವಾಗಿದೆ. ಡಾ.ಬಿ.ಆರ್. ಅಂಬೇಡ್ಕರ್ ನೇತೃತ್ವದಲ್ಲಿ 1949 ನವೆಂಬರ್ 26ರಂದು ಸಂವಿಧಾನವನ್ನು ಅಂಗೀಕರಿಸಲಾಯಿತು.

ಸ್ವಾತಂತ್ರ್ಯದ ಬಳಿಕ ರಾಜಪ್ರಭುತ್ವ ವ್ಯವಸ್ಥೆಯ ಬದಲಿಗೆ ಸಂವಿಧಾನದ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮುನ್ನುಡಿ ಬರೆದ 1949 ನವಂಬರ್ 26 ದೇಶದ ಪ್ರಜೆಗಳ ಪಾಲಿಗೆ ಸುದಿನವಾಗಿದೆ. ಸ್ವಾತಂತ್ರ್ಯ, ಸಮಾನತೆ, ಸಹೋದರತೆ, ಮುಂತಾದ ಮೌಲ್ಯಯುತ ವಿಚಾರಗಳು ಸಂವಿಧಾನದಲ್ಲಿ ಅಡಕವಾಗಿವೆ. ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತ ದೇಶಕ್ಕೆ ವಿಶ್ವವೇ ಮೆಚ್ಚುವ ಮತ್ತು ಮಾದರಿಯಾಗುವ ಸಂವಿಧಾನವನ್ನು ನೀಡಲು ಹಗಲಿರುಳು ಶ್ರಮಿಸಿದ ಮಹನೀಯರನ್ನು ಸ್ಮರಿಸಬೇಕು. ಪ್ರತಿಯೊಬ್ಬ ಅಧಿಕಾರಿ, ಜನಪ್ರತಿನಿಧಿಗಳು ಸೇರಿದಂತೆ ನಾಗರಿಕರು ಸಂವಿಧಾನದಡಿ ಕರ್ತವ ಮತ್ತು ಜೀವನ ಸಾಗಿಸುತ್ತಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಸಂವಿಧಾನದ ಆಶಯಗಳ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು. ಬಳಿಕ ಪಟ್ಟಣದ ಪೊಲೀಸ್ ಠಾಣ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಬೃಹತ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸೂಚಿಸಿದರು.

ಈ ಸಂದರ್ಭದಲ್ಲಿ ಉಪತಹಸಿಲ್ದಾರ್ ಸುರೇಖಾ, ಶಿರೆಸ್ತೇದಾರ ನಾಗೇಂದ್ರ, ಆರ್.ಐ.ಮಹದೇವಸ್ವಾಮಿ, ಗ್ರಾಮಲೆಕ್ಕಿಗ ಶೇಷಣ್ಣ, ಕುಮಾರ, ಕಛೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

ವಿವಿಧಡೆ ಆಚರಣೆ: ರಾಜಪ್ರಭುತ್ವದಿಂದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಡಿಗಲಿಟ್ಟ ನವಂಬರ್ 26 ರಂದು ದೇಶಕ್ಕೆ ಸಂವಿಧಾನ ಸಮರ್ಪಿಸಿದ ದಿನದ ಅಂಗವಾಗಿ ತಾಲೂಕಿನ ವಿವಿಧಡೆ ಶಾಲಾ ಕಾಲೇಜು, ತಾಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ, ಹಾಗೂ ಸರ್ಕಾರೇತರ ಕಚೇರಿಗಳು, ಸಂಘ ಸಂಸ್ಥೆಗಳಲ್ಲಿ ಸಂವಿಧಾನ ದಿವಸವನ್ನು ಆಚರಿಸಲಾಯಿತು.

andolana

Recent Posts

ಅಮೇರಿಕಾದಲ್ಲಿ ಕಾಣೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಮೃತದೇಹ ಪತ್ತೆ

ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…

2 hours ago

ವಿವಾಹಪೂರ್ವ ದೈಹಿಕ ಸಂಬಂಧದಲ್ಲಿ ಎಚ್ಚರಿಕೆ ಅಗತ್ಯ : ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್‌ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…

3 hours ago

ಎಕ್ಸ್‌ ವೆಬ್‌ಸೈಟ್‌ ಸ್ಥಗಿತ : ಜಾಗತಿಕ ಬಳಕೆದಾರರ ಪರದಾಟ

ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…

4 hours ago

ರಾಹುಲ್‌ ಗಾಂಧಿ ಪ್ರಶ್ನೆಗೆ ಪ್ರಾಮಾಣಿಕವಾಗಿ ಉತ್ತರಿಸಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…

4 hours ago

ಕಾಡಾನೆಗಳ ದಾಳಿ ; ಗುಡಿಸಲು, ಸೋಲಾರ್ ತಂತಿಬೇಲಿ ನಾಶ

ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…

5 hours ago

ಮೈಸೂರು | ಅಪರಾಧ ನಿಯಂತ್ರಣ ಕುರಿತು ಎಡಿಜಿಪಿ ಸಭೆ

ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…

5 hours ago