ಜಿಲ್ಲೆಗಳು

ಹನೂರು: ದೇಶವಾಸಿಗಳು ಹಕ್ಕು, ಕರ್ತವ್ಯಗಳ ಪಾಲನೆ ಮಾಡಬೇಕು: ತಹಸಿಲ್ದಾರ್ ಧನಂಜಯ್

ಹನೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕರಡು ಸಮಿತಿ ಅಧ್ಯಕ್ಷತೆಯಲ್ಲಿ ರಚನೆಗೊಂಡ ಭಾರತದ ಸಂವಿಧಾನ ಆಶಯಗಳಿಗನುಗುಣವಾಗಿ ದೇಶವಾಸಿಗಳು ಹಕ್ಕು ಮತ್ತು ಕರ್ತವ್ಯಗಳನ್ನು ಪಾಲನೆ ಮಾಡಬೇಕೆಂದು ಗ್ರೇಡ್ 2 ತಹಸಿಲ್ದಾರ್ ಧನಂಜಯ್ ತಿಳಿಸಿದರು.

ಪಟ್ಟಣದ ಲೋಕೋಪಯೋಗಿ ವಸತಿ ಗೃಹ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಂವಿಧಾನ ಸಮರ್ಪಣಾ ದಿನ ಕಾರ್ಯಕ್ರಮದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಬಳಿಕ ಮಾತನಾಡಿದರು.

ಭಾರತದ ಸಂವಿಧಾನ ವಿಶ್ವದ ಅತ್ಯಂತ ಬೃಹತ್ ಲಿಖಿತ ರೂಪದ ಸಂವಿಧಾನವಾಗಿದೆ. ಡಾ.ಬಿ.ಆರ್. ಅಂಬೇಡ್ಕರ್ ನೇತೃತ್ವದಲ್ಲಿ 1949 ನವೆಂಬರ್ 26ರಂದು ಸಂವಿಧಾನವನ್ನು ಅಂಗೀಕರಿಸಲಾಯಿತು.

ಸ್ವಾತಂತ್ರ್ಯದ ಬಳಿಕ ರಾಜಪ್ರಭುತ್ವ ವ್ಯವಸ್ಥೆಯ ಬದಲಿಗೆ ಸಂವಿಧಾನದ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮುನ್ನುಡಿ ಬರೆದ 1949 ನವಂಬರ್ 26 ದೇಶದ ಪ್ರಜೆಗಳ ಪಾಲಿಗೆ ಸುದಿನವಾಗಿದೆ. ಸ್ವಾತಂತ್ರ್ಯ, ಸಮಾನತೆ, ಸಹೋದರತೆ, ಮುಂತಾದ ಮೌಲ್ಯಯುತ ವಿಚಾರಗಳು ಸಂವಿಧಾನದಲ್ಲಿ ಅಡಕವಾಗಿವೆ. ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತ ದೇಶಕ್ಕೆ ವಿಶ್ವವೇ ಮೆಚ್ಚುವ ಮತ್ತು ಮಾದರಿಯಾಗುವ ಸಂವಿಧಾನವನ್ನು ನೀಡಲು ಹಗಲಿರುಳು ಶ್ರಮಿಸಿದ ಮಹನೀಯರನ್ನು ಸ್ಮರಿಸಬೇಕು. ಪ್ರತಿಯೊಬ್ಬ ಅಧಿಕಾರಿ, ಜನಪ್ರತಿನಿಧಿಗಳು ಸೇರಿದಂತೆ ನಾಗರಿಕರು ಸಂವಿಧಾನದಡಿ ಕರ್ತವ ಮತ್ತು ಜೀವನ ಸಾಗಿಸುತ್ತಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಸಂವಿಧಾನದ ಆಶಯಗಳ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು. ಬಳಿಕ ಪಟ್ಟಣದ ಪೊಲೀಸ್ ಠಾಣ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಬೃಹತ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸೂಚಿಸಿದರು.

ಈ ಸಂದರ್ಭದಲ್ಲಿ ಉಪತಹಸಿಲ್ದಾರ್ ಸುರೇಖಾ, ಶಿರೆಸ್ತೇದಾರ ನಾಗೇಂದ್ರ, ಆರ್.ಐ.ಮಹದೇವಸ್ವಾಮಿ, ಗ್ರಾಮಲೆಕ್ಕಿಗ ಶೇಷಣ್ಣ, ಕುಮಾರ, ಕಛೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

ವಿವಿಧಡೆ ಆಚರಣೆ: ರಾಜಪ್ರಭುತ್ವದಿಂದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಡಿಗಲಿಟ್ಟ ನವಂಬರ್ 26 ರಂದು ದೇಶಕ್ಕೆ ಸಂವಿಧಾನ ಸಮರ್ಪಿಸಿದ ದಿನದ ಅಂಗವಾಗಿ ತಾಲೂಕಿನ ವಿವಿಧಡೆ ಶಾಲಾ ಕಾಲೇಜು, ತಾಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ, ಹಾಗೂ ಸರ್ಕಾರೇತರ ಕಚೇರಿಗಳು, ಸಂಘ ಸಂಸ್ಥೆಗಳಲ್ಲಿ ಸಂವಿಧಾನ ದಿವಸವನ್ನು ಆಚರಿಸಲಾಯಿತು.

andolana

Recent Posts

ಬೆಂಗಳೂರಿನಲ್ಲಿ 11.86 ಕೋಟಿ ರೂ ಮೌಲ್ಯದ ಮಾದಕ ವಸ್ತು ಜಪ್ತಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸರು 11.86 ಕೋಟಿ ರೂ ಮೌಲ್ಯದ ಮಾದಕವಸ್ತು ಜಪ್ತಿ ಮಾಡಿ ಇಬ್ಬರು ವಿದೇಶಿ ಮಹಿಳೆಯರು…

47 mins ago

ಸಂಸತ್‌ ವಿಶೇಷ ಅಧಿವೇಶನ: ಮೂರು ಮಹತ್ವದ ಮಸೂದೆ ಮಂಡನೆ

ನವದೆಹಲಿ: ಇಂದಿನಿಂದ ಆರಂಭವಾಗಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಮೂರು ಪ್ರಮುಖ ಮಸೂದೆಗಳನ್ನು ಮಂಡಿಸಿದೆ. ಸಂವಿಧಾನದ ತಿದ್ದುಪಡಿ ಮಸೂದೆ-2026,…

1 hour ago

ಪಶ್ಚಿಮಘಟ್ಟಗಳನ್ನು ಭವಿಷ್ಯದ ಪೀಳಿಗೆಯ ಜೀವನಾಡಿಯಾಗಿ ನೋಡಬೇಕು: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಪ್ರಕೃತಿ, ಪರಿಸರ ಸಂರಕ್ಷಣೆ ಹಾಗೂ ಹಸಿರು ಹೊದಿಕೆ ಹೆಚ್ಚಳದಲ್ಲಿ ಸುಸ್ಥಿರ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪಾತ್ರ ಹಿರಿದಾಗಿದೆ ಎಂದು…

2 hours ago

ಲೋಕಸಭೆಯಲ್ಲಿ ಮಹತ್ವದ ಕ್ಷೇತ್ರ ಮರುವಿಂಗಡಣೆ ಮಸೂದೆ ಮಂಡನೆ

ನವದೆಹಲಿ: ಕೇಂದ್ರ ಸಚಿವ ಅರ್ಜುನ್‌ ರಾಮ್‌ ಮೇಘವಾಲ್‌ ಅವರು ಇಂದು ಲೋಕಸಭೆಯಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆ 2026ನ್ನು ಮಂಡಿಸಿದರು. ಈ…

2 hours ago

ಲೋಕಸಭಾ ಕ್ಷೇತ್ರ ಮರು ವಿಂಗಡಣೆ ಮಸೂದೆಗೆ ತೀವ್ರ ವಿರೋಧ: ತಮಿಳುನಾಡು ಸಿಎಂ ಸ್ಟಾಲಿನ್‌ ಪ್ರತಿಭಟನೆ

ಚೆನ್ನೈ: ಕೇಂದ್ರ ಸರ್ಕಾರ ಜಾರಿ ಮಾಡಲು ಹೊರಟಿರುವ ಲೋಕಸಭಾ ಕ್ಷೇತ್ರ ಮರು ವಿಂಗಡಣೆ ಮಸೂದೆಗೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು,…

3 hours ago

ತಾಪಮಾನ ಏರಿಕೆ ಬೆನ್ನಲ್ಲೇ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ರಣ ಬಿಸಿಲ ಧಗೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೆಲ ಜಿಲ್ಲೆಗಳಲ್ಲಿ ಅತ್ಯಧಿಕ ತಾಪಮಾನ ದಾಖಲಾಗುತ್ತಿದ್ದು, ಜನರು ಬಿಸಿಲ…

3 hours ago