ಜಿಲ್ಲೆಗಳು

ಹನೂರು: ದೇಶವಾಸಿಗಳು ಹಕ್ಕು, ಕರ್ತವ್ಯಗಳ ಪಾಲನೆ ಮಾಡಬೇಕು: ತಹಸಿಲ್ದಾರ್ ಧನಂಜಯ್

ಹನೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕರಡು ಸಮಿತಿ ಅಧ್ಯಕ್ಷತೆಯಲ್ಲಿ ರಚನೆಗೊಂಡ ಭಾರತದ ಸಂವಿಧಾನ ಆಶಯಗಳಿಗನುಗುಣವಾಗಿ ದೇಶವಾಸಿಗಳು ಹಕ್ಕು ಮತ್ತು ಕರ್ತವ್ಯಗಳನ್ನು ಪಾಲನೆ ಮಾಡಬೇಕೆಂದು ಗ್ರೇಡ್ 2 ತಹಸಿಲ್ದಾರ್ ಧನಂಜಯ್ ತಿಳಿಸಿದರು.

ಪಟ್ಟಣದ ಲೋಕೋಪಯೋಗಿ ವಸತಿ ಗೃಹ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಂವಿಧಾನ ಸಮರ್ಪಣಾ ದಿನ ಕಾರ್ಯಕ್ರಮದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಬಳಿಕ ಮಾತನಾಡಿದರು.

ಭಾರತದ ಸಂವಿಧಾನ ವಿಶ್ವದ ಅತ್ಯಂತ ಬೃಹತ್ ಲಿಖಿತ ರೂಪದ ಸಂವಿಧಾನವಾಗಿದೆ. ಡಾ.ಬಿ.ಆರ್. ಅಂಬೇಡ್ಕರ್ ನೇತೃತ್ವದಲ್ಲಿ 1949 ನವೆಂಬರ್ 26ರಂದು ಸಂವಿಧಾನವನ್ನು ಅಂಗೀಕರಿಸಲಾಯಿತು.

ಸ್ವಾತಂತ್ರ್ಯದ ಬಳಿಕ ರಾಜಪ್ರಭುತ್ವ ವ್ಯವಸ್ಥೆಯ ಬದಲಿಗೆ ಸಂವಿಧಾನದ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮುನ್ನುಡಿ ಬರೆದ 1949 ನವಂಬರ್ 26 ದೇಶದ ಪ್ರಜೆಗಳ ಪಾಲಿಗೆ ಸುದಿನವಾಗಿದೆ. ಸ್ವಾತಂತ್ರ್ಯ, ಸಮಾನತೆ, ಸಹೋದರತೆ, ಮುಂತಾದ ಮೌಲ್ಯಯುತ ವಿಚಾರಗಳು ಸಂವಿಧಾನದಲ್ಲಿ ಅಡಕವಾಗಿವೆ. ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತ ದೇಶಕ್ಕೆ ವಿಶ್ವವೇ ಮೆಚ್ಚುವ ಮತ್ತು ಮಾದರಿಯಾಗುವ ಸಂವಿಧಾನವನ್ನು ನೀಡಲು ಹಗಲಿರುಳು ಶ್ರಮಿಸಿದ ಮಹನೀಯರನ್ನು ಸ್ಮರಿಸಬೇಕು. ಪ್ರತಿಯೊಬ್ಬ ಅಧಿಕಾರಿ, ಜನಪ್ರತಿನಿಧಿಗಳು ಸೇರಿದಂತೆ ನಾಗರಿಕರು ಸಂವಿಧಾನದಡಿ ಕರ್ತವ ಮತ್ತು ಜೀವನ ಸಾಗಿಸುತ್ತಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಸಂವಿಧಾನದ ಆಶಯಗಳ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು. ಬಳಿಕ ಪಟ್ಟಣದ ಪೊಲೀಸ್ ಠಾಣ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಬೃಹತ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸೂಚಿಸಿದರು.

ಈ ಸಂದರ್ಭದಲ್ಲಿ ಉಪತಹಸಿಲ್ದಾರ್ ಸುರೇಖಾ, ಶಿರೆಸ್ತೇದಾರ ನಾಗೇಂದ್ರ, ಆರ್.ಐ.ಮಹದೇವಸ್ವಾಮಿ, ಗ್ರಾಮಲೆಕ್ಕಿಗ ಶೇಷಣ್ಣ, ಕುಮಾರ, ಕಛೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

ವಿವಿಧಡೆ ಆಚರಣೆ: ರಾಜಪ್ರಭುತ್ವದಿಂದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಡಿಗಲಿಟ್ಟ ನವಂಬರ್ 26 ರಂದು ದೇಶಕ್ಕೆ ಸಂವಿಧಾನ ಸಮರ್ಪಿಸಿದ ದಿನದ ಅಂಗವಾಗಿ ತಾಲೂಕಿನ ವಿವಿಧಡೆ ಶಾಲಾ ಕಾಲೇಜು, ತಾಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ, ಹಾಗೂ ಸರ್ಕಾರೇತರ ಕಚೇರಿಗಳು, ಸಂಘ ಸಂಸ್ಥೆಗಳಲ್ಲಿ ಸಂವಿಧಾನ ದಿವಸವನ್ನು ಆಚರಿಸಲಾಯಿತು.

andolana

Recent Posts

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

3 mins ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

16 mins ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

18 mins ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

20 mins ago

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

22 mins ago

ರೈಲ್ವೆ ಕೆಳಸೇತುವೆ ಶಿಥಿಲ

ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ  ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…

27 mins ago