ಜಿಲ್ಲೆಗಳು

ಹನೂರು ಕ್ಷೇತ್ರ ಸಮಗ್ರ ಅಭಿವೃದ್ಧಿಯಾಗಿದ್ದು ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ : ಆರ್‌ ನರೇಂದ್ರ

ಹನೂರು :ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವರಾಗಿದ್ದ ಹೆಚ್ ಆಂಜನೇಯ ರವರು ಹಾಡಿಗಳ ಸಮಗ್ರ ಅಭಿವೃದ್ಧಿಗಾಗಿ 10 ಕೋಟಿ ಅನುದಾನ ನೀಡಿದ್ದರು ಎಂದು ಶಾಸಕರಾದ ಆರ್ ನರೇಂದ್ರ ತಿಳಿಸಿದರು.

ತಾಲೂಕಿನ ಜೀರಿಗೆಗದ್ದೆ ಗ್ರಾಮದಲ್ಲಿ 50 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಮಹರ್ಷಿ ವಾಲ್ಮೀಕಿ ಭವನ ಉದ್ಘಾಟನೆ ಮಾಡಿ ಅವರು ಮಾತನಾಡಿದರು.ಇಂದಿನ ಸರ್ಕಾರದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವರಾಗಿದ್ದ ಆಂಜನೇಯ ರವರು ನೂತನ ವರ್ಷ ಆಚರಣೆಗೆ ಹನೂರು ಕ್ಷೇತ್ರಕ್ಕೆ ಬರುತ್ತೇನೆ ಎಂದು ತಿಳಿಸಿದಾಗ, ನೀವು ಸುಮ್ಮನೆ ಕ್ಷೇತ್ರಕ್ಕೆ ಬರುವುದೇ ಬೇಡ ಹನೂರು ಕ್ಷೇತ್ರದ ಜನತೆಗೆ ಒಳಿತಾಗುವ ನಿಟ್ಟಿನಲ್ಲಿ ಅನುದಾನ ನೀಡಿ ಈ ಭಾಗದ ಜನರಿಗೆ ಖುಷಿಪಡಿಸಿ ನೀವು ಸಹ ಹೊಸ ವರ್ಷ ಆಚರಣೆ ಮಾಡಿ ಎಂದು ತಿಳಿಸಿದ್ದೆ. ಈ ನಿಟ್ಟಿನಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಆದಿವಾಸಿ ಹಾಡಿಗಳ ಸಮಗ್ರ ಅಭಿವೃದ್ಧಿಗೆ 10 ಕೋಟಿ ಅನುದಾನ ನೀಡುವಂತೆ ಮನವಿ ಮಾಡಿದ್ದೆ. ಅದರಂತೆ ಅನುದಾನ ಮಂಜೂರು ಮಾಡಿದರು. ಈ ಅನುದಾನದಲ್ಲಿ ಹಾಡಿಗಳಿಗೆ ಸಿಸಿ ರಸ್ತೆ, ಚರಂಡಿ ಕಾಮಗಾರಿ ಸೇರಿದಂತೆ ವಿವಿಧ ಅಭಿವೃದ್ಧಿಗಳನ್ನು ಮಾಡಲಾಗಿದೆ. ಸೇತುವೆ ವ್ಯಾಪ್ತಿಯ 82 ಹಾಡಿಗಳ 1800 ಜನರಿಗೆ 3250 ಎಕರೆ ಅರಣ್ಯ ಹಕ್ಕು ಕಾಯ್ದೆ ಅಡಿ ಸಾಗುವಳಿ ಪತ್ರ ನೀಡಲಾಗಿದೆ. ಇವರಿಗೆ ಗಂಗಾ ಕಲ್ಯಾಣ ಯೋಜನೆ ಅಡಿ ಬೋರ್ವೆಲ್ ಕೊರಸಿ ಉಚಿತ ರಸಗೊಬ್ಬರಗಳನ್ನು ಕೊಡಿಸಿ ಇವರನ್ನು ಆರ್ಥಿಕವಾಗಿ ಮುಂದೆ ಬರಲು ನಮ್ಮ ಸರ್ಕಾರ ಕ್ರಮ ಕೈಗೊಂಡಿತ್ತು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

35 ಸಾವಿರ ಉಚಿತ ಗ್ಯಾಸ್ ವಿತರಣೆ : ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ 35,000 ಜನರಿಗೆ ಉಚಿತ ಗ್ಯಾಸ್ ಸಂಪರ್ಕ ಹಾಗೂ ವರ್ಷಕ್ಕೆ ಎರಡು ಸಿಲಿಂಡರ್ ವಿತರಣೆ ಮಾಡಲಾಗಿತ್ತು ಆದರೆ ಕೇಂದ್ರ ಸರ್ಕಾರ ಗ್ಯಾಸ್ ಬೆಲೆ ಏರಿಕೆ ಮಾಡಿರುವುದರಿಂದ ಹಾಡಿಗಳಲ್ಲಿ ಸಿಲಿಂಡರ್ ಗಳನ್ನು ಚೇರ್ ಮಾಡಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದರು.

ಹೊದಿಕೆ ಹಾಗೂ ಸೀರೆಗಳಿಗೆ ಮರುಳಾಗಬೇಡಿ : ದಿವಂಗತ ರಾಜು ಗೌಡರ ಕಾಲದಿಂದಲೂ ನಮ್ಮ ಮನೆತನ ಆದಿವಾಸಿಗಳ ಕುಟುಂಬಕ್ಕೆ ಬೆನ್ನೆಲುಬಾಗಿ ನಿಂತಿದೆ. ನಾನು ಸಹ ಕಳೆದ 14 ವರ್ಷಗಳಿಂದ ನಿಮ್ಮ ಕಷ್ಟ ಸುಖಗಳಿಗೆ ಧನಿಯಾಗಿದ್ದೇನೆ ಇಂದು ಯಾರೋ ಹೊರಗಿನವರು ಬಂದು ನೀಡುವ 25 ರೂ ಹೊದಿಕೆ ಹಾಗೂ 80 ರೂ ಸೀರೆಗಳಿಗೆ ಮರುಳಾಗಬೇಡಿ. ನೀವು ಸ್ವಾಭಿಮಾನಿಗಳು ನಿಮ್ಮ ಅಭಿವೃದ್ಧಿಗೆ ಸ್ಪಂದಿಸುವ ಅವರಿಗೆ ಮತ ನೀಡಿ ಎಂದು ಮನವಿ ಮಾಡಿದರು.

ಕಳೆದ ಐವತ್ತು ವರ್ಷಗಳಿಂದ ಹನೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದೇವೆ. ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಹತ್ತಾರು ಆಶ್ರಮ ಶಾಲೆಗಳು, ವಸತಿ ಶಾಲೆಗಳು,ಸರ್ಕಾರಿ ಪ್ರೌಢಶಾಲೆಗಳು, ಪಿಯು ಕಾಲೇಜುಗಳು ಪ್ರಥಮ ದರ್ಜೆ ಕಾಲೇಜು ಸೇರಿದಂತೆ ಶೈಕ್ಷಣಿಕವಾಗಿ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗೆ ಕಲ್ಪಿಸಿದ್ದೇವೆ ಬೇರೆಯವರು ಏನು ಕೊಡುಗೆ ನೀಡಿದ್ದಾರೆ ಎಂಬುದನ್ನು ಸಾಬೀತು ಮಾಡಲಿ ಎಂದು ಸವಾಲು ಹಾಕಿದರು.

ಸಿಸಿ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ : ಕ್ಷೇತ್ರ ವ್ಯಾಪ್ತಿಯ ಲೋಕನಹಳ್ಳಿ 15 ಲಕ್ಷ, ಜೀರಿಗೆ ಗದ್ದೆ 10 ಲಕ್ಷ ಉದ್ದಟ್ಟಿ 10 ಲಕ್ಷ, ಮಾವತ್ತೂರು 10 ಲಕ್ಷ ಹಿರಿಯಂಬಲ 20 ಲಕ್ಷ ಬೂದಿಪಡಗ 15ಲಕ್ಷ ಸೇರಿದಂತೆ ಕೌಳಿ ಹಳ್ಳ ಡ್ಯಾಮ್ 5 ಲಕ್ಷ ದ ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಒಂದು ಕೋಟಿ 25 ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಹಾಗೂ ಉದ್ದಟ್ಟಿ ಗ್ರಾಮದಲ್ಲಿ 50 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ವಾಲ್ಮೀಕಿ ಸಮುದಾಯ ಭವನಗಳನ್ನು ಉದ್ಘಾಟನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಜಿಪಂ ಮಾಜಿ ಉಪಾಧ್ಯಕ್ಷ ಬಸವರಾಜು, ಮಾಜಿ ಸದಸ್ಯ ಕೊಪ್ಪಳಿ ಮಹದೇವ ನಾಯಕ್, ಗ್ರಾಮ ಪಂಚಾಯಿತಿ ಸದಸ್ಯ ಪುಟ್ವೀರ್ ನಾಯ್ಕ, ಮುಖಂಡರುಗಳಾದ ಮಂಗಲ ಪುಟ್ಟರಾಜು ಲೋಕನಹಳ್ಳಿ ಜಗದೀಶ್, ವಿಷ್ಣು ಕುಮಾರ್ ಸಿದ್ದರಾಜು, ವಿನಯ್ ಕೆಂಪರಾಜು ಚಂದ್ರು ಮಹದೇವ ಕಂಡಯ್ಯನಪಾಳ್ಯ ಮಾದೇಶ್, ಚಿಕ್ಕಬಳ್ಳಾಪುರ ಅಂಕರಾಜು ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚೇತನ್ ದೊರೆರಾಜ್ ಯುವ ಮುಖಂಡ ವಿನೋದ್ ಸತೀಶ್ ಸೇರಿದಂತೆ ಇನ್ನಿತರರು ಹಾಜರಿದ್ದರು

andolanait

Recent Posts

ಟಿಬಿ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಕೆಗೆ ಚಾಲನೆ

ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್‌ ಮುಂದೆ…

21 mins ago

ಮೈಸೂರು| ಮದುವೆ ಆಗುವುದಾಗಿ ನಂಬಿಸಿ ವಕೀಲೆಗೆ ಮೋಸ

ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…

24 mins ago

ಪುರಾವೆ ಇಲ್ಲದೇ ಯಾರ ಮೇಲೂ ತನಿಖೆ ಮಾಡಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…

1 hour ago

ಎಚ್.ಡಿ.ಕೋಟೆ: ಬಸ್‌ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳ ಪರದಾಟ

ಎಚ್.ಡಿ.ಕೋಟೆ: ಬಸ್‌ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ…

1 hour ago

ನಿರ್ಮಲಾನಂದನಾಥ ಶ್ರೀಗಳ ಸಮ್ಮುಖದಲ್ಲೇ ಬಹಿರಂಗವಾಗಿ ಕ್ಷಮೆಯಾಚಿಸಿದ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ವಿಸಿ ಫಾರ್ಮ್‌ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.…

1 hour ago

ಸರ್ಕಾರದ ವೈಫಲ್ಯದ ವಿರುದ್ಧ ಕೈ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದ್ರೂ ಅಚ್ಚರಿಯಿಲ್ಲ: ವಿಜಯೇಂದ್ರ

ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೂ ಅಚ್ಚರಿ ಇಲ್ಲ ಎಂದು…

2 hours ago