ಜಿಲ್ಲೆಗಳು

ಹನೂರು ಕ್ಷೇತ್ರ ಸಮಗ್ರ ಅಭಿವೃದ್ಧಿಯಾಗಿದ್ದು ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ : ಆರ್‌ ನರೇಂದ್ರ

ಹನೂರು :ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವರಾಗಿದ್ದ ಹೆಚ್ ಆಂಜನೇಯ ರವರು ಹಾಡಿಗಳ ಸಮಗ್ರ ಅಭಿವೃದ್ಧಿಗಾಗಿ 10 ಕೋಟಿ ಅನುದಾನ ನೀಡಿದ್ದರು ಎಂದು ಶಾಸಕರಾದ ಆರ್ ನರೇಂದ್ರ ತಿಳಿಸಿದರು.

ತಾಲೂಕಿನ ಜೀರಿಗೆಗದ್ದೆ ಗ್ರಾಮದಲ್ಲಿ 50 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಮಹರ್ಷಿ ವಾಲ್ಮೀಕಿ ಭವನ ಉದ್ಘಾಟನೆ ಮಾಡಿ ಅವರು ಮಾತನಾಡಿದರು.ಇಂದಿನ ಸರ್ಕಾರದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವರಾಗಿದ್ದ ಆಂಜನೇಯ ರವರು ನೂತನ ವರ್ಷ ಆಚರಣೆಗೆ ಹನೂರು ಕ್ಷೇತ್ರಕ್ಕೆ ಬರುತ್ತೇನೆ ಎಂದು ತಿಳಿಸಿದಾಗ, ನೀವು ಸುಮ್ಮನೆ ಕ್ಷೇತ್ರಕ್ಕೆ ಬರುವುದೇ ಬೇಡ ಹನೂರು ಕ್ಷೇತ್ರದ ಜನತೆಗೆ ಒಳಿತಾಗುವ ನಿಟ್ಟಿನಲ್ಲಿ ಅನುದಾನ ನೀಡಿ ಈ ಭಾಗದ ಜನರಿಗೆ ಖುಷಿಪಡಿಸಿ ನೀವು ಸಹ ಹೊಸ ವರ್ಷ ಆಚರಣೆ ಮಾಡಿ ಎಂದು ತಿಳಿಸಿದ್ದೆ. ಈ ನಿಟ್ಟಿನಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಆದಿವಾಸಿ ಹಾಡಿಗಳ ಸಮಗ್ರ ಅಭಿವೃದ್ಧಿಗೆ 10 ಕೋಟಿ ಅನುದಾನ ನೀಡುವಂತೆ ಮನವಿ ಮಾಡಿದ್ದೆ. ಅದರಂತೆ ಅನುದಾನ ಮಂಜೂರು ಮಾಡಿದರು. ಈ ಅನುದಾನದಲ್ಲಿ ಹಾಡಿಗಳಿಗೆ ಸಿಸಿ ರಸ್ತೆ, ಚರಂಡಿ ಕಾಮಗಾರಿ ಸೇರಿದಂತೆ ವಿವಿಧ ಅಭಿವೃದ್ಧಿಗಳನ್ನು ಮಾಡಲಾಗಿದೆ. ಸೇತುವೆ ವ್ಯಾಪ್ತಿಯ 82 ಹಾಡಿಗಳ 1800 ಜನರಿಗೆ 3250 ಎಕರೆ ಅರಣ್ಯ ಹಕ್ಕು ಕಾಯ್ದೆ ಅಡಿ ಸಾಗುವಳಿ ಪತ್ರ ನೀಡಲಾಗಿದೆ. ಇವರಿಗೆ ಗಂಗಾ ಕಲ್ಯಾಣ ಯೋಜನೆ ಅಡಿ ಬೋರ್ವೆಲ್ ಕೊರಸಿ ಉಚಿತ ರಸಗೊಬ್ಬರಗಳನ್ನು ಕೊಡಿಸಿ ಇವರನ್ನು ಆರ್ಥಿಕವಾಗಿ ಮುಂದೆ ಬರಲು ನಮ್ಮ ಸರ್ಕಾರ ಕ್ರಮ ಕೈಗೊಂಡಿತ್ತು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

35 ಸಾವಿರ ಉಚಿತ ಗ್ಯಾಸ್ ವಿತರಣೆ : ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ 35,000 ಜನರಿಗೆ ಉಚಿತ ಗ್ಯಾಸ್ ಸಂಪರ್ಕ ಹಾಗೂ ವರ್ಷಕ್ಕೆ ಎರಡು ಸಿಲಿಂಡರ್ ವಿತರಣೆ ಮಾಡಲಾಗಿತ್ತು ಆದರೆ ಕೇಂದ್ರ ಸರ್ಕಾರ ಗ್ಯಾಸ್ ಬೆಲೆ ಏರಿಕೆ ಮಾಡಿರುವುದರಿಂದ ಹಾಡಿಗಳಲ್ಲಿ ಸಿಲಿಂಡರ್ ಗಳನ್ನು ಚೇರ್ ಮಾಡಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದರು.

ಹೊದಿಕೆ ಹಾಗೂ ಸೀರೆಗಳಿಗೆ ಮರುಳಾಗಬೇಡಿ : ದಿವಂಗತ ರಾಜು ಗೌಡರ ಕಾಲದಿಂದಲೂ ನಮ್ಮ ಮನೆತನ ಆದಿವಾಸಿಗಳ ಕುಟುಂಬಕ್ಕೆ ಬೆನ್ನೆಲುಬಾಗಿ ನಿಂತಿದೆ. ನಾನು ಸಹ ಕಳೆದ 14 ವರ್ಷಗಳಿಂದ ನಿಮ್ಮ ಕಷ್ಟ ಸುಖಗಳಿಗೆ ಧನಿಯಾಗಿದ್ದೇನೆ ಇಂದು ಯಾರೋ ಹೊರಗಿನವರು ಬಂದು ನೀಡುವ 25 ರೂ ಹೊದಿಕೆ ಹಾಗೂ 80 ರೂ ಸೀರೆಗಳಿಗೆ ಮರುಳಾಗಬೇಡಿ. ನೀವು ಸ್ವಾಭಿಮಾನಿಗಳು ನಿಮ್ಮ ಅಭಿವೃದ್ಧಿಗೆ ಸ್ಪಂದಿಸುವ ಅವರಿಗೆ ಮತ ನೀಡಿ ಎಂದು ಮನವಿ ಮಾಡಿದರು.

ಕಳೆದ ಐವತ್ತು ವರ್ಷಗಳಿಂದ ಹನೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದೇವೆ. ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಹತ್ತಾರು ಆಶ್ರಮ ಶಾಲೆಗಳು, ವಸತಿ ಶಾಲೆಗಳು,ಸರ್ಕಾರಿ ಪ್ರೌಢಶಾಲೆಗಳು, ಪಿಯು ಕಾಲೇಜುಗಳು ಪ್ರಥಮ ದರ್ಜೆ ಕಾಲೇಜು ಸೇರಿದಂತೆ ಶೈಕ್ಷಣಿಕವಾಗಿ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗೆ ಕಲ್ಪಿಸಿದ್ದೇವೆ ಬೇರೆಯವರು ಏನು ಕೊಡುಗೆ ನೀಡಿದ್ದಾರೆ ಎಂಬುದನ್ನು ಸಾಬೀತು ಮಾಡಲಿ ಎಂದು ಸವಾಲು ಹಾಕಿದರು.

ಸಿಸಿ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ : ಕ್ಷೇತ್ರ ವ್ಯಾಪ್ತಿಯ ಲೋಕನಹಳ್ಳಿ 15 ಲಕ್ಷ, ಜೀರಿಗೆ ಗದ್ದೆ 10 ಲಕ್ಷ ಉದ್ದಟ್ಟಿ 10 ಲಕ್ಷ, ಮಾವತ್ತೂರು 10 ಲಕ್ಷ ಹಿರಿಯಂಬಲ 20 ಲಕ್ಷ ಬೂದಿಪಡಗ 15ಲಕ್ಷ ಸೇರಿದಂತೆ ಕೌಳಿ ಹಳ್ಳ ಡ್ಯಾಮ್ 5 ಲಕ್ಷ ದ ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಒಂದು ಕೋಟಿ 25 ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಹಾಗೂ ಉದ್ದಟ್ಟಿ ಗ್ರಾಮದಲ್ಲಿ 50 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ವಾಲ್ಮೀಕಿ ಸಮುದಾಯ ಭವನಗಳನ್ನು ಉದ್ಘಾಟನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಜಿಪಂ ಮಾಜಿ ಉಪಾಧ್ಯಕ್ಷ ಬಸವರಾಜು, ಮಾಜಿ ಸದಸ್ಯ ಕೊಪ್ಪಳಿ ಮಹದೇವ ನಾಯಕ್, ಗ್ರಾಮ ಪಂಚಾಯಿತಿ ಸದಸ್ಯ ಪುಟ್ವೀರ್ ನಾಯ್ಕ, ಮುಖಂಡರುಗಳಾದ ಮಂಗಲ ಪುಟ್ಟರಾಜು ಲೋಕನಹಳ್ಳಿ ಜಗದೀಶ್, ವಿಷ್ಣು ಕುಮಾರ್ ಸಿದ್ದರಾಜು, ವಿನಯ್ ಕೆಂಪರಾಜು ಚಂದ್ರು ಮಹದೇವ ಕಂಡಯ್ಯನಪಾಳ್ಯ ಮಾದೇಶ್, ಚಿಕ್ಕಬಳ್ಳಾಪುರ ಅಂಕರಾಜು ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚೇತನ್ ದೊರೆರಾಜ್ ಯುವ ಮುಖಂಡ ವಿನೋದ್ ಸತೀಶ್ ಸೇರಿದಂತೆ ಇನ್ನಿತರರು ಹಾಜರಿದ್ದರು

andolanait

Recent Posts

ಎಲ್‌ಪಿಜಿ ದರ ಭಾರತದಲ್ಲೇ ಅಗ್ಗ: ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ಸಮರ್ಥನೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದ್ದರೂ, ಭಾರತದಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್…

16 mins ago

ಬಾವಿಗೆ ಬಿದ್ದಿದ್ದ ಹಸು ರಕ್ಷಣೆ

ಮಹಾದೇಶ್‌ ಎಂ ಗೌಡ:  ಹನೂರು ತಾಲ್ಲೂಕು ವರದಿಗಾರರು  ಹನೂರು: ಮೇವು ಮೇಯುವ ವೇಳೆ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ಅಗ್ನಿಶಾಮಕ…

26 mins ago

ಭಾರತದ ಜನಸಂಖ್ಯೆಯಲ್ಲಿ ಗಣನೀಯ ಕುಸಿತವಾಗುತ್ತಿದೆ: ಎಲಾನ್‌ ಮಸ್ಕ್‌ ಆತಂಕ

ವಾಷಿಂಗ್ಟನ್:‌ ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು…

1 hour ago

ಸ್ವಕ್ಷೇತ್ರದಲ್ಲಿ ಜನರ ಮುಂದೆ ಸಿಎಂ ಡಿ.ಕೆ.ಶಿವಕುಮಾರ್‌ ಅಬ್ಬರದ ಭಾಷಣ

ರಾಮನಗರ: ನಾನು ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಇಲ್ಲಿ ಮುಖ್ಯಮಂತ್ರಿ ಅಲ್ಲ. ನಿಮ್ಮ ಮನೆ ಮಗ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.…

2 hours ago

ಆಪರೇಷನ್‌ ಶೆರಾವಲಿ ವೇಳೆ ಕಂದಕಕ್ಕೆ ಬಿದ್ದು ಸೇನಾ ಅಧಿಕಾರಿ ಹುತಾತ್ಮ

ಶ್ರೀನಗರ: ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ನಡೆಯುತ್ತಿರುವ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯ ಸಮಯದಲ್ಲಿ ಕಡಿದಾದ ಪರ್ವತದ ತುದಿಯಿಂದ ಜಾರಿ ಆಳವಾದ ಕಂದಕಕ್ಕೆ…

2 hours ago

ರಾಜ್ಯದಲ್ಲಿ ಮುಂಗಾರು ಚುರುಕು: ಮೂರು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದೆ. ಮುಂದಿನ ಕೆಲ ದಿನಗಳು ಕರಾವಳಿ ಮತ್ತು ಉತ್ತರ ಒಳನಾಡಿನ ಹಲವೆಡೆ ಬಿರುಗಾಳಿ ಸಹಿತ…

3 hours ago