ಜಿಲ್ಲೆಗಳು

ಹನೂರು : ಸ್ಮಶಾನವಿಲ್ಲದೆ ಖಾಸಗಿ ಜಮೀನಿನಲ್ಲಿ ಅಂತ್ಯಸಂಸ್ಕಾರ

ಹನೂರು: ಶವ ಸಂಸ್ಕಾರ ನೆರವೇರಿಸಲು ಸ್ಮಶಾನ ವ್ಯವಸ್ಥೆ ಇಲ್ಲದ್ದರಿಂದ ಮೃತಪಟ್ಟ ಮಹಿಳೆಯ ಶವವನ್ನು ಖಾಸಗಿ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಿಸಿರುವ ಘಟನೆ ಹನೂರು ತಾಲ್ಲೂಕಿನ ವಿ.ಎಸ್.ದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಕಮಲಮ್ಮ ಎಂಬವರು ಗುರುವಾರ ನಿಧನರಾಗಿದ್ದರು. ಆದರೆ ಸ್ಮಶಾನ ಇಲ್ಲದ ಪರಿಣಾಮ ಶವ ಸಂಸ್ಕಾರ ನೆರವೇರಿಸಲು ತೊಂದರೆಯಾಗಿತ್ತು. ಈ ಹಿಂದೆ ಅಕ್ಟೋಬರ್‌ನಲ್ಲಿ ಮೃತಪಟ್ಟ ಪುಟ್ಟರಾಜಶೆಟ್ಟಿ ಎಂಬವರನ್ನು ಖಾಸಗಿ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸಲಾಗಿತ್ತು. ಗ್ರಾಮದಲ್ಲಿ ಸ್ಮಶಾನ ಇಲ್ಲದ ಬಗ್ಗೆ ಗ್ರಾಮಸ್ಥರು ಆಕ್ರೋಶ ಪಡಿಸಿದರು.
ಈ ಸಂದರ್ಭದಲ್ಲಿ ಗ್ರಾಮಸ್ಥರು ಮಾತನಾಡಿ, ಗ್ರಾಮಕ್ಕೆ ಸ್ಮಶಾನ ಕಲ್ಪಿಸುವಂತೆ ಹಿಂದೆಯೇ ಮನವಿ ಸಲ್ಲಿಸಿದ್ದು, ಡಿಸಿ ಅವರು ಮಂಜೂರು ಮಾಡುವಂತೆ ಸೂಚಿಸಿದ್ದರೂ ಸ್ಮಶಾನ ವ್ಯವಸ್ಥೆ ಕಲ್ಪಿಸಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಅಂತ್ಯಸಂಸ್ಕಾರಕ್ಕೆ ಜಾಗದ ವ್ಯವಸ್ಥೆ ಮಾಡಿಕೊಡಬೇಕು. ಜತೆಗೆ ಸ್ಮಶಾನ ಮಂಜೂರು ಮಾಡಬೇಕು. ಇಲ್ಲವಾದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯನ್ನ ಬಹಿಷ್ಕರಿಸಲಾಗುವುದು ಎಂದು ತಿಳಿಸಿದರು.
ಸುದ್ದಿ ತಿಳಿದು ಗ್ರಾಮಕ್ಕೆ ಆಗಮಿಸಿದ ತಹಸಿಲ್ದಾರ್ ಅನಂದಯ್ಯ ಅವರು ಸ್ಮಶಾನಕ್ಕಾಗಿ ಗುರ್ತಿಸಿರುವ ಜಾಗವನ್ನು ಅಳತೆ ಮಾಡಿ, ಬಳಿಕ ಸ್ಮಶಾನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು. ನಂತರ ಮಹಿಳೆಯ ಅಂತ್ಯಸಂಸ್ಕಾರವನ್ನು ಖಾಸಗಿ ಜಮೀನಿನಲ್ಲಿ ನೆರವೇರಿಸಲಾಯಿತು.

andolanait

Recent Posts

ಬಂಡೀಪುರ, ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭ : ಸಿಎಂ

ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ…

8 hours ago

ಜ.5, 6ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ ; ತವರಲ್ಲಿ ಸಂಭ್ರಮ ಸಾಧ್ಯತೆ?

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಲ್ಲಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.5ರಂದು ಬೆಳಿಗ್ಗೆ…

8 hours ago

ಜ.4ರಂದು ʼಚಾ.ಬೆಟ್ಟಕ್ಕೆ ನಡಿಗೆʼ ಜಾಗೃತಿ ಜಾಥ ; ಬೆಂಬಲಿಸಲು ಮನವಿ

ಮೈಸೂರು : ಅರಮನೆ ನಗರಿ ಮೈಸೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದ ಸಂರಕ್ಷಣೆ ಮತ್ತು ಉಳಿವಿಗಾಗಿ ಜ.4ರಂದು(ಭಾನುವಾರ) ಜಾಗೃತಿ ಆಂದೋಲನವನ್ನು…

8 hours ago

ದೇಶದ ಸ್ವಚ್ಛ ನಗರ ಇಂದೋರ್‌ನಲ್ಲಿ ಕಲುಷಿತ ನೀರು ಸೇವನೆಯಿಂದ 11 ಮಂದಿ ಸಾವು!

ಭೋಪಾಲ್ : ಇಂದೋರ್‌ನ ಭಗೀರಥಪುರದಲ್ಲಿ ಕಲುಷಿತ ಕುಡಿಯುವ ನೀರು ಸೇವನೆಯಿಂದ 11 ಜೀವಗಳು ಬಲಿಯಾಗಿವೆ. ಮತ್ತು 1400ಕ್ಕೂ ಹೆಚ್ಚು ನಿವಾಸಿಗಳ…

9 hours ago

ಬಳ್ಳಾರಿ ಘರ್ಷಣೆ | ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ ; ಬಿವೈವಿ ಆಗ್ರಹ

ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…

11 hours ago

ಬಳ್ಳಾರಿ ಘರ್ಷಣೆ | ಕೈ ಕಾರ್ಯಕರ್ತ ಸಾವು, ಘಟನೆ ಬಗ್ಗೆ ಸಿಎಂ ಹೇಳಿದ್ದೇನು?

ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ  ಬ್ಯಾನರ್‌ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್‌ ಆಗಿ…

12 hours ago