ಹನೂರು: ಶವ ಸಂಸ್ಕಾರ ನೆರವೇರಿಸಲು ಸ್ಮಶಾನ ವ್ಯವಸ್ಥೆ ಇಲ್ಲದ್ದರಿಂದ ಮೃತಪಟ್ಟ ಮಹಿಳೆಯ ಶವವನ್ನು ಖಾಸಗಿ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಿಸಿರುವ ಘಟನೆ ಹನೂರು ತಾಲ್ಲೂಕಿನ ವಿ.ಎಸ್.ದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಕಮಲಮ್ಮ ಎಂಬವರು ಗುರುವಾರ ನಿಧನರಾಗಿದ್ದರು. ಆದರೆ ಸ್ಮಶಾನ ಇಲ್ಲದ ಪರಿಣಾಮ ಶವ ಸಂಸ್ಕಾರ ನೆರವೇರಿಸಲು ತೊಂದರೆಯಾಗಿತ್ತು. ಈ ಹಿಂದೆ ಅಕ್ಟೋಬರ್ನಲ್ಲಿ ಮೃತಪಟ್ಟ ಪುಟ್ಟರಾಜಶೆಟ್ಟಿ ಎಂಬವರನ್ನು ಖಾಸಗಿ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸಲಾಗಿತ್ತು. ಗ್ರಾಮದಲ್ಲಿ ಸ್ಮಶಾನ ಇಲ್ಲದ ಬಗ್ಗೆ ಗ್ರಾಮಸ್ಥರು ಆಕ್ರೋಶ ಪಡಿಸಿದರು.
ಈ ಸಂದರ್ಭದಲ್ಲಿ ಗ್ರಾಮಸ್ಥರು ಮಾತನಾಡಿ, ಗ್ರಾಮಕ್ಕೆ ಸ್ಮಶಾನ ಕಲ್ಪಿಸುವಂತೆ ಹಿಂದೆಯೇ ಮನವಿ ಸಲ್ಲಿಸಿದ್ದು, ಡಿಸಿ ಅವರು ಮಂಜೂರು ಮಾಡುವಂತೆ ಸೂಚಿಸಿದ್ದರೂ ಸ್ಮಶಾನ ವ್ಯವಸ್ಥೆ ಕಲ್ಪಿಸಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಅಂತ್ಯಸಂಸ್ಕಾರಕ್ಕೆ ಜಾಗದ ವ್ಯವಸ್ಥೆ ಮಾಡಿಕೊಡಬೇಕು. ಜತೆಗೆ ಸ್ಮಶಾನ ಮಂಜೂರು ಮಾಡಬೇಕು. ಇಲ್ಲವಾದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯನ್ನ ಬಹಿಷ್ಕರಿಸಲಾಗುವುದು ಎಂದು ತಿಳಿಸಿದರು.
ಸುದ್ದಿ ತಿಳಿದು ಗ್ರಾಮಕ್ಕೆ ಆಗಮಿಸಿದ ತಹಸಿಲ್ದಾರ್ ಅನಂದಯ್ಯ ಅವರು ಸ್ಮಶಾನಕ್ಕಾಗಿ ಗುರ್ತಿಸಿರುವ ಜಾಗವನ್ನು ಅಳತೆ ಮಾಡಿ, ಬಳಿಕ ಸ್ಮಶಾನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು. ನಂತರ ಮಹಿಳೆಯ ಅಂತ್ಯಸಂಸ್ಕಾರವನ್ನು ಖಾಸಗಿ ಜಮೀನಿನಲ್ಲಿ ನೆರವೇರಿಸಲಾಯಿತು.
ಶ್ರೀರಂಗಪಟ್ಟಣ : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…
ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…
ಅಮೃತ್ಸರ : ಪಂಜಾಬ್ನ ಅಮೃತ್ಸರ್ ಮತ್ತು ಜಲಂಧರ್ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…
7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ : ವನ್ಯಜೀವಿಗಳ ಸಂಖ್ಯೆ ದಿನದಿಂದ…
ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…
ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…