ಜಿಲ್ಲೆಗಳು

ಹನೂರು : ಸ್ಮಶಾನವಿಲ್ಲದೆ ಖಾಸಗಿ ಜಮೀನಿನಲ್ಲಿ ಅಂತ್ಯಸಂಸ್ಕಾರ

ಹನೂರು: ಶವ ಸಂಸ್ಕಾರ ನೆರವೇರಿಸಲು ಸ್ಮಶಾನ ವ್ಯವಸ್ಥೆ ಇಲ್ಲದ್ದರಿಂದ ಮೃತಪಟ್ಟ ಮಹಿಳೆಯ ಶವವನ್ನು ಖಾಸಗಿ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಿಸಿರುವ ಘಟನೆ ಹನೂರು ತಾಲ್ಲೂಕಿನ ವಿ.ಎಸ್.ದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಕಮಲಮ್ಮ ಎಂಬವರು ಗುರುವಾರ ನಿಧನರಾಗಿದ್ದರು. ಆದರೆ ಸ್ಮಶಾನ ಇಲ್ಲದ ಪರಿಣಾಮ ಶವ ಸಂಸ್ಕಾರ ನೆರವೇರಿಸಲು ತೊಂದರೆಯಾಗಿತ್ತು. ಈ ಹಿಂದೆ ಅಕ್ಟೋಬರ್‌ನಲ್ಲಿ ಮೃತಪಟ್ಟ ಪುಟ್ಟರಾಜಶೆಟ್ಟಿ ಎಂಬವರನ್ನು ಖಾಸಗಿ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸಲಾಗಿತ್ತು. ಗ್ರಾಮದಲ್ಲಿ ಸ್ಮಶಾನ ಇಲ್ಲದ ಬಗ್ಗೆ ಗ್ರಾಮಸ್ಥರು ಆಕ್ರೋಶ ಪಡಿಸಿದರು.
ಈ ಸಂದರ್ಭದಲ್ಲಿ ಗ್ರಾಮಸ್ಥರು ಮಾತನಾಡಿ, ಗ್ರಾಮಕ್ಕೆ ಸ್ಮಶಾನ ಕಲ್ಪಿಸುವಂತೆ ಹಿಂದೆಯೇ ಮನವಿ ಸಲ್ಲಿಸಿದ್ದು, ಡಿಸಿ ಅವರು ಮಂಜೂರು ಮಾಡುವಂತೆ ಸೂಚಿಸಿದ್ದರೂ ಸ್ಮಶಾನ ವ್ಯವಸ್ಥೆ ಕಲ್ಪಿಸಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಅಂತ್ಯಸಂಸ್ಕಾರಕ್ಕೆ ಜಾಗದ ವ್ಯವಸ್ಥೆ ಮಾಡಿಕೊಡಬೇಕು. ಜತೆಗೆ ಸ್ಮಶಾನ ಮಂಜೂರು ಮಾಡಬೇಕು. ಇಲ್ಲವಾದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯನ್ನ ಬಹಿಷ್ಕರಿಸಲಾಗುವುದು ಎಂದು ತಿಳಿಸಿದರು.
ಸುದ್ದಿ ತಿಳಿದು ಗ್ರಾಮಕ್ಕೆ ಆಗಮಿಸಿದ ತಹಸಿಲ್ದಾರ್ ಅನಂದಯ್ಯ ಅವರು ಸ್ಮಶಾನಕ್ಕಾಗಿ ಗುರ್ತಿಸಿರುವ ಜಾಗವನ್ನು ಅಳತೆ ಮಾಡಿ, ಬಳಿಕ ಸ್ಮಶಾನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು. ನಂತರ ಮಹಿಳೆಯ ಅಂತ್ಯಸಂಸ್ಕಾರವನ್ನು ಖಾಸಗಿ ಜಮೀನಿನಲ್ಲಿ ನೆರವೇರಿಸಲಾಯಿತು.

andolanait

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

3 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

5 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

13 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

13 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

14 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

14 hours ago