ಹನೂರು : ಪಟ್ಟಣದ ಲೋಕೋಪಯೋಗಿ ವಸತಿಗೃಹದಲ್ಲಿ ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರಕವಿ ಕುವೆಂಪು ರವರ ಜಯಂತಿಗೆ ಹಿರಿಯ ಅಧಿಕಾರಿಗಳು ಗೈರಾಗುವ ಮೂಲಕ ಕಿರಿಯ ಅಧಿಕಾರಿಗಳು ಕಾಟಾಚಾರಕ್ಕೆ ಆಚರಿಸಿದ್ದಾರೆ.
ಗುರುವಾರ ರಾಷ್ಟ್ರಕವಿ ಕುವೆಂಪುರವರ 119ನೇ ಜಯಂತಿ ಆಚರಣೆ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ತಹಸಿಲ್ದಾರ್ ಆನಂದಯ್ಯ ರವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗಬೇಕಿತ್ತು. ಆದರೆ ಅವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆಯಲ್ಲಿ ಭಾಗವಹಿಸಿದ್ದ ಕಾರಣ ಗ್ರೇಡ್ 2 ತಹಸಿಲ್ದಾರ್ ಧನಂಜಯ್ ರವರಿಗೆ ಉಸ್ತುವಾರಿ ನೀಡಲಾಗಿತ್ತು. ಈ ಹಿನ್ನೆಲೆ ಗುರುವಾರ 10:30 ಗಂಟೆಗೆ ಕುವೆಂಪು ಜಯಂತಿ ನಿಗದಿ ಮಾಡಲಾಗಿತ್ತು. ಕಾರ್ಯಕ್ರಮಕ್ಕೆ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಗಿರೀಶ್, ಸದಸ್ಯ ಹರೀಶ್, ಸುದೇಶ್ ಮುಖಂಡರುಗಳಾದ ನಟರಾಜು, ಸಿದ್ದೇಗೌಡ ಆಗಮಿಸಿ ಅಧಿಕಾರಿಗಳ ಬರುವಿಕೆಗೆ ಕಾದು ಕುಳಿತಿದ್ದರು. 11.15 ಗಂಟೆ ಆದರೂ ಸಹ ಗ್ರೇಡ್ 2 ತಹಸಿಲ್ದಾರ್ ಹಾಜರಾಗಿರಲಿಲ್ಲ.
ಇದರಿಂದ ಅಸಮಾಧಾನಗೊಂಡ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಗಿರೀಶ್ ರವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ನಂತರ ಶಿರಸ್ತಿದಾರ್ ಶ್ರೀನಿವಾಸ್ ತರಾತುರಿಯಲ್ಲಿ ಪೂಜೆ ಮಾಡಿಸಿ ಜಯಂತಿ ಆಚರಿಸಿದರು. ರಾಷ್ಟ್ರಕವಿ ಕುವೆಂಪುರವರಿಗೆ ಜನ್ಮದಿನದಂದು ಗೌರವ ನೀಡುವ ಬದಲು ಅ ಗೌರವ ತೋರಿಸಿರುವುದಕ್ಕೆ ಅಧಿಕಾರಿಗಳ ವಿರುದ್ಧ ಪ್ರಜ್ಞಾವಂತ ನಾಗರಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…