ಜಿಲ್ಲೆಗಳು

ಹನೂರು : ತಾಲ್ಲೂಕು ಆಡಳಿತದಿಂದ ಕಾಟಾಚಾರಕ್ಕೆ ಕುವೆಂಪು ಜಯಂತಿ ಆಚರಣೆ

ಹನೂರು : ಪಟ್ಟಣದ ಲೋಕೋಪಯೋಗಿ ವಸತಿಗೃಹದಲ್ಲಿ ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರಕವಿ ಕುವೆಂಪು ರವರ ಜಯಂತಿಗೆ ಹಿರಿಯ ಅಧಿಕಾರಿಗಳು ಗೈರಾಗುವ ಮೂಲಕ ಕಿರಿಯ ಅಧಿಕಾರಿಗಳು ಕಾಟಾಚಾರಕ್ಕೆ ಆಚರಿಸಿದ್ದಾರೆ.

ಗುರುವಾರ ರಾಷ್ಟ್ರಕವಿ ಕುವೆಂಪುರವರ 119ನೇ ಜಯಂತಿ ಆಚರಣೆ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ತಹಸಿಲ್ದಾರ್ ಆನಂದಯ್ಯ ರವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗಬೇಕಿತ್ತು. ಆದರೆ ಅವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆಯಲ್ಲಿ ಭಾಗವಹಿಸಿದ್ದ ಕಾರಣ ಗ್ರೇಡ್ 2 ತಹಸಿಲ್ದಾರ್ ಧನಂಜಯ್ ರವರಿಗೆ ಉಸ್ತುವಾರಿ ನೀಡಲಾಗಿತ್ತು. ಈ ಹಿನ್ನೆಲೆ ಗುರುವಾರ 10:30 ಗಂಟೆಗೆ ಕುವೆಂಪು ಜಯಂತಿ ನಿಗದಿ ಮಾಡಲಾಗಿತ್ತು. ಕಾರ್ಯಕ್ರಮಕ್ಕೆ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಗಿರೀಶ್, ಸದಸ್ಯ ಹರೀಶ್, ಸುದೇಶ್ ಮುಖಂಡರುಗಳಾದ ನಟರಾಜು, ಸಿದ್ದೇಗೌಡ ಆಗಮಿಸಿ ಅಧಿಕಾರಿಗಳ ಬರುವಿಕೆಗೆ ಕಾದು ಕುಳಿತಿದ್ದರು. 11.15 ಗಂಟೆ ಆದರೂ ಸಹ ಗ್ರೇಡ್ 2 ತಹಸಿಲ್ದಾರ್ ಹಾಜರಾಗಿರಲಿಲ್ಲ.

ಇದರಿಂದ ಅಸಮಾಧಾನಗೊಂಡ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಗಿರೀಶ್ ರವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ನಂತರ ಶಿರಸ್ತಿದಾರ್ ಶ್ರೀನಿವಾಸ್ ತರಾತುರಿಯಲ್ಲಿ ಪೂಜೆ ಮಾಡಿಸಿ ಜಯಂತಿ ಆಚರಿಸಿದರು. ರಾಷ್ಟ್ರಕವಿ ಕುವೆಂಪುರವರಿಗೆ ಜನ್ಮದಿನದಂದು ಗೌರವ ನೀಡುವ ಬದಲು ಅ ಗೌರವ ತೋರಿಸಿರುವುದಕ್ಕೆ ಅಧಿಕಾರಿಗಳ ವಿರುದ್ಧ ಪ್ರಜ್ಞಾವಂತ ನಾಗರಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

andolanait

Recent Posts

ಪುನರುಜ್ಜೀವನಕ್ಕಾಗಿ ಕಾಯುತ್ತಿದೆ ಪುರಭವನ?

ಮೈಸೂರು : ಸಾಂಸ್ಕೃತಿಕ ನಗರದ ಹೃದಯ ಭಾಗದಲ್ಲಿ ರುವ ಐತಿಹಾಸಿಕ ರಂಗಾಚಾರ್ಲು ಪುರಭವನ ಇದೀಗ ನಿರ್ಲಕ್ಷ್ಯದ ಪರಿಣಾಮ ಶಿಥಿಲಾವಸ್ಥೆಯತ್ತ ಸಾಗುತ್ತಿದೆ.…

42 mins ago

ಹಿಜಾಬ್‌ ವಿವಾದ : ಹೊಸ ಆದೇಶ ಸಕಾರಾತ್ಮಕ ಬೆಳವಣಿಗೆಗೆ ಸಹಾಯ

ಸಂವಿಧಾನಾತ್ಮಕ ಹಕ್ಕು ಅನುಷ್ಠಾನದಲ್ಲಿ ಎಚ್ಚರಿಕೆ ಅಗತ್ಯ ನಿರಂಜನಾರಾಧ್ಯ ವಿ.ಪಿ.ಅಭಿವೃದ್ಧಿ ಶಿಕ್ಷಣ ತಜ್ಞ ಹಿಂದೆ ೨೦೨೨ರಲ್ಲಿ ಹಿಜಾಬ್ ನಿಷೇಧಿಸಿ ಬಿಜೆಪಿ ನೇತೃತ್ವದ…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಗಾಂಧಿ ಮುಟ್ಟಿದ ನನ್ನೂರಿನ ಮನಸುಗಳು…

• ಎಸ್.ಗಂಗಾಧರಯ್ಯ ಗಾಂಧಿ ಎಂಬುದೊಂದು ತಾಯ್ತನದ ಭಾವ, ಅದು ಅಂದು ಇಂದು ಮುಂದೆ ಯಾವತ್ತೂ ಎದೆಯ ಕತ್ತಲಿಗೆ ಹಚ್ಚಿದ ತುಂಬಿಹೋಗದ…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ : ಇಲ್ಲಿದೆ ಗಾಂಧಿ ಆತ್ಮಕತೆಯ ಆಯ್ದ ತುಣುಕು

ನನ್ನ ನಡೆತೆಯನ್ನು ಬಹು ಎಚ್ಚರಿಕೆಯಿಂದ ಕಾಯ್ದುಕೊಂಡಿದ್ದೆ ನನ್ನ ಮದುವೆಯಾದ ಕಾಲಕ್ಕೆ ನಾನು ಪ್ರೌಢಶಾಲೆಯಲ್ಲಿ ಓದುತ್ತಿದ್ದೆ. ನಾನು ಉಪಾಧ್ಯಾಯರ ಪ್ರೀತಿಯನ್ನು ಯಾವಾಗಲೂ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.16 ಶನಿವಾರ  

6 hours ago

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

22 hours ago