ಜಿಲ್ಲೆಗಳು

ಹನೂರು : ಗಣರಾಜ್ಯೋತ್ಸವ ಆಚರಣೆ ಕುರಿತು ಪೂರ್ವಭಾವಿ ಸಭೆ

ಹನೂರು; ಪಟ್ಟಣದ ಲೋಕೋಪಯೋಗಿ ಅತಿಥಿ ಗೃಹದ ಸಭಾಂಗಣದಲ್ಲಿ ಗುರುವಾರ ಗಣರಾಜ್ಯೋತ್ಸವ ಆಚರಣೆ ಸಂಬಂಧ ವಿವಿಧ ಇಲಾಖೆಯ ಅಧಿಕಾರಿಗಳ ಪೂರ್ವಭಾವಿ ಸಭೆ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಶಾಸಕ ಆರ್.ನರೇಂದ್ರ ಮಾತನಾಡಿ, ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಪಟ್ಟಣದ ಶ್ರೀ ಮಹದೇಶ್ವರ ಕ್ರೀಡಾಂಗಣದಲ್ಲಿ ಆಚರಿಸಲು ತೀರ್ಮಾನಿಸಲಾಗಿದೆ. ಆದ್ದರಿಂದ ವಿವಿಧ ಇಲಾಖೆಯ ಅಧಿಕಾರಿಗಳು ಜಾವಬ್ದಾರಿಯನ್ನು ವಹಿಸಿಕೊಳ್ಳಬೇಕು. ಈ ಸಂಬಂಧ ಪೂರ್ವ ತಯಾರಿ ನಡೆಸಬೇಕು. ಕುಡಿಯುವ ನೀರು, ವಿದ್ಯಾರ್ಥಿಗಳು, ಸಾರ್ವಜನಿಕರ ಅಗತ್ಯಕ್ಕೆ ತಕ್ಕಂತೆ ಶಾಮಿಯಾನ ವ್ಯವಸ್ಥೆ ಮಾಡಬೇಕು. ಯಾವುದೇ ಲೋಪ ಆಗದಂತೆ ಕಾರ್ಯಕ್ರಮವನ್ನು ರೂಪುಗೊಳಿಸಬೇಕು. ಈ ದಿಸೆಯಲ್ಲಿ ಅಧಿಕಾರಿಗಳು ಸಂಘ ಸಂಸ್ಥೆಗಳ ಸಹಕಾರವನ್ನು ಪಡೆದುಕೊಳ್ಳಬೇಕು. ಅಲ್ಲದೇ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಸಾಧಕರನ್ನು ಸನ್ಮಾನಿಸಬೇಕು. ಈ ಮೂಲಕ ಗಣರಾಜೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪಪಂ ಉಪಾಧ್ಯಕ್ಷ ಗಿರೀಶ್, ತಹಸೀಲ್ದಾರ್ ಆನಂದಯ್ಯ, ಗ್ರೇಡ್ 2 ತಹಸೀಲ್ದಾರ್ ಧನಂಜಯ, ಬಿಇಒ ಶಿವರಾಜು, ಪಪಂ ಮುಖ್ಯಾಧಿಕಾರಿ ಮೂರ್ತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ನವೀದ್ ಮಠದ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಗಂಗಾಧರ್, ಕೃಷಿ ಸಹಾಯಕ ನಿರ್ದೇಶಕಿ ಸುಂದರಮ್ಮ, ಹಾಗೂ ಇನ್ನಿತರರು ಹಾಜರಿದ್ದರು.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

5 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

6 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

7 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

7 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

13 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

13 hours ago