ಜಿಲ್ಲೆಗಳು

ಹನೂರು : ಗಣರಾಜ್ಯೋತ್ಸವ ಆಚರಣೆ ಕುರಿತು ಪೂರ್ವಭಾವಿ ಸಭೆ

ಹನೂರು; ಪಟ್ಟಣದ ಲೋಕೋಪಯೋಗಿ ಅತಿಥಿ ಗೃಹದ ಸಭಾಂಗಣದಲ್ಲಿ ಗುರುವಾರ ಗಣರಾಜ್ಯೋತ್ಸವ ಆಚರಣೆ ಸಂಬಂಧ ವಿವಿಧ ಇಲಾಖೆಯ ಅಧಿಕಾರಿಗಳ ಪೂರ್ವಭಾವಿ ಸಭೆ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಶಾಸಕ ಆರ್.ನರೇಂದ್ರ ಮಾತನಾಡಿ, ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಪಟ್ಟಣದ ಶ್ರೀ ಮಹದೇಶ್ವರ ಕ್ರೀಡಾಂಗಣದಲ್ಲಿ ಆಚರಿಸಲು ತೀರ್ಮಾನಿಸಲಾಗಿದೆ. ಆದ್ದರಿಂದ ವಿವಿಧ ಇಲಾಖೆಯ ಅಧಿಕಾರಿಗಳು ಜಾವಬ್ದಾರಿಯನ್ನು ವಹಿಸಿಕೊಳ್ಳಬೇಕು. ಈ ಸಂಬಂಧ ಪೂರ್ವ ತಯಾರಿ ನಡೆಸಬೇಕು. ಕುಡಿಯುವ ನೀರು, ವಿದ್ಯಾರ್ಥಿಗಳು, ಸಾರ್ವಜನಿಕರ ಅಗತ್ಯಕ್ಕೆ ತಕ್ಕಂತೆ ಶಾಮಿಯಾನ ವ್ಯವಸ್ಥೆ ಮಾಡಬೇಕು. ಯಾವುದೇ ಲೋಪ ಆಗದಂತೆ ಕಾರ್ಯಕ್ರಮವನ್ನು ರೂಪುಗೊಳಿಸಬೇಕು. ಈ ದಿಸೆಯಲ್ಲಿ ಅಧಿಕಾರಿಗಳು ಸಂಘ ಸಂಸ್ಥೆಗಳ ಸಹಕಾರವನ್ನು ಪಡೆದುಕೊಳ್ಳಬೇಕು. ಅಲ್ಲದೇ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಸಾಧಕರನ್ನು ಸನ್ಮಾನಿಸಬೇಕು. ಈ ಮೂಲಕ ಗಣರಾಜೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪಪಂ ಉಪಾಧ್ಯಕ್ಷ ಗಿರೀಶ್, ತಹಸೀಲ್ದಾರ್ ಆನಂದಯ್ಯ, ಗ್ರೇಡ್ 2 ತಹಸೀಲ್ದಾರ್ ಧನಂಜಯ, ಬಿಇಒ ಶಿವರಾಜು, ಪಪಂ ಮುಖ್ಯಾಧಿಕಾರಿ ಮೂರ್ತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ನವೀದ್ ಮಠದ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಗಂಗಾಧರ್, ಕೃಷಿ ಸಹಾಯಕ ನಿರ್ದೇಶಕಿ ಸುಂದರಮ್ಮ, ಹಾಗೂ ಇನ್ನಿತರರು ಹಾಜರಿದ್ದರು.

andolanait

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

6 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

6 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

6 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

9 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

9 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

9 hours ago