ಜಿಲ್ಲೆಗಳು

ಹನೂರು : ಬುಡಕಟ್ಟು ಸಮುದಾಯದ ನಾಯಕ ಬಿರ್ಸ ಮುಂಡ ಜಯಂತಿ ಆಚರಣೆ

ಹನೂರು: ಪಟ್ಟಣದಲ್ಲಿ ಯುವ ಮುಖಂಡ ನಿಶಾಂತ್ ಅವರು ಬುಡಕಟ್ಟು ಸಮುದಾಯದ ನಾಯಕ ಬಿರ್ಸ ಮುಂಡ ಜಯಂತಿ ಅಂಗವಾಗಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಮಾದಮ್ಮ ಅವರನ್ನು ಸನ್ಮಾನಿಸಿ ಗೌರವಿಸಿದರು.

ಬಿರ್ಸಾ ಮುಂಡಾ ಜಯಂತಿ ಅಂಗವಾಗಿ ತಾಲೂಕಿನ ವಿವಿಧ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಸೋಲಿಗೆ ಸಮುದಾಯದ ಜನರು ಪಟ್ಟಣದ ಮಹದೇಶ್ವರ ಬೆಟ್ಟ ರಸ್ತೆಯಿಂದ ಮೆರವಣಿಗೆ ಹೊರಟು ಪಟ್ಟಣದ ಬಸ್ ನಿಲ್ದಾಣದಲ್ಲಿ ಸಮಾವೇಶಗೊಂಡರು.

ಯುವ ಮುಖಂಡ ನಿಶಾಂತ್ ಬಿರ್ಸಾ ಮುಂಡಾ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು. ಬಳಿಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಜೀರಿಗೆ ಗದ್ದೆ ದೊಡ್ಡ ಮಾದಮ್ಮ ಅವರನ್ನು ಸನ್ಮಾನಿಸಿದರು.

ಬಳಿಕ ಮಾತನಾಡಿದ ನಿಶಾಂತ್ ತಮ್ಮ ಧರ್ಮದ ಶ್ರೇಷ್ಠತೆಯನ್ನು ಕೊಂಡಾಡುತ್ತಲೇ ಆದಿವಾಸಿಗಳ ಸಂಸ್ಕೃತಿಯನ್ನು ಹಲ್ಲೆಗಳೆಯುವವರ ವಿರುದ್ಧ ಸಿಡಿದೆದ್ದಿದ್ದ. ತನ್ನ ಜನ ಭೂಮಿಯನ್ನು ಕಳೆದುಕೊಂಡು ನಿರ್ಗತಿಕರಾಗುತ್ತಿರುವುದನ್ನು ಕಂಡು ಬ್ರಿಟಿಷರ ವಿರುದ್ಧ ದಂಗೆ ಹೇಳುವುದರ ಮೂಲಕ ಆದಿವಾಸಿ ಸಮುದಾಯದ ನಾಯಕನಾಗಿ ಹೊರಹೊಮ್ಮಿದರು.

1893-94ರಲ್ಲಿ ಸರ್ಕಾರ ಕಾಡುಗಳನ್ನು ರಕ್ಷಿತಾ ಅರಣ್ಯಗಳೆಂದು ಘೋಷಿಸಿತು. ಇದರಿಂದ ಉದ್ರಿಕ್ತ ಗೊಂಡ ಬಿರ್ಸಮುಂಡ ಸಮುದಾಯದ ಜನರನ್ನು ಸಂಘಟಿಸಿ ಹೋರಾಟಕ್ಕೆ ಹೇಳಿದು ಜನರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ತನ್ನ ಹೋರಾಟದ ರೂಪ ರೇಷೆಗಳನ್ನು ಬದಲಾಯಿಸಿದರು.

ದಿನದಿಂದ ದಿನಕ್ಕೆ ಬಿರ್ಸಾ ಮುಂಡನ ಜನಪ್ರಿಯತೆ ಹೆಚ್ಚಾಗುತ್ತಿರುವುದನ್ನು ಕಂಡ ಬ್ರಿಟಿಷರು ಆತನನ್ನು ಬಂಧಿಸಿ ಎರಡು ವರ್ಷಗಳ ಕಾಲ ಸೆರೆಮನೆಯಲ್ಲಿ. ಎರಡು ವರ್ಷಗಳ ಬಳಿಕ ತನು ಹೋರಾಟವನ್ನು ಆರಂಭಿಸಿದ ಬಿರ್ಸಮುಂಡ ತನ್ನ ಸಮುದಾಯದ ಮೇಲಾಗುತ್ತಿದ್ದ ದೌರ್ಜನ್ಯಗಳನ್ನು ಖಂಡಿಸಿ ಗುತ್ತಿಗೆದಾರರು ಲೇವಾದೇವಿದಾರರು ಮುಂತಾದವರ ವಿರುದ್ಧ ಉಗ್ರ ಹೋರಾಟವನ್ನು ರೂಪಿಸುವುದರ ಮೂಲಕ ಸಮುದಾಯಕ್ಕೆ ಸೂಕ್ತ ಸ್ಥಾನಮಾನ ಕಲ್ಪಿಸಲು ತಮ್ಮ ಜೀವನವನ್ನೇ ಮುಡುಪಾಗಿಟ್ಟರು ಎಂದರು.

ಇದೇ ಸಂದರ್ಭದಲ್ಲಿ ಸೋಲಿಗ ಮುಖಂಡರಾದ ರಂಗೇಗೌಡ ,ಸೀಗೆಹೊಸೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಬುಲೆಟ್ ಬಸವರಾಜು,ಬೈಲೂರು ಗ್ರಾಪಂ ಉಪಾಧ್ಯಕ್ಷ ಸದಾನಂದ ಮೂರ್ತಿ ಮುಖಂಡರುಗಳಾದ ರವೀಂದ್ರ, ಕಣ್ಣಪ್ಪ, ಪಾಳ್ಯ ಸಿದ್ದಪ್ಪಾಜಿ ಕಿರಣ್, ಬಾಬು,ಚೇತನ್, ತೇಜು, ಪ್ರೀತಮ್, ಗೌತಮ್ ಸೇರಿದಂತೆ ಆದಿವಾಸಿ ಸಮುದಾಯದ ಮುಖಂಡರುಗಳು ಹಾಜರಿದ್ದರು.

andolana

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

10 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago