ಹನೂರು: ಪಟ್ಟಣದಲ್ಲಿ ಯುವ ಮುಖಂಡ ನಿಶಾಂತ್ ಅವರು ಬುಡಕಟ್ಟು ಸಮುದಾಯದ ನಾಯಕ ಬಿರ್ಸ ಮುಂಡ ಜಯಂತಿ ಅಂಗವಾಗಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಮಾದಮ್ಮ ಅವರನ್ನು ಸನ್ಮಾನಿಸಿ ಗೌರವಿಸಿದರು.
ಬಿರ್ಸಾ ಮುಂಡಾ ಜಯಂತಿ ಅಂಗವಾಗಿ ತಾಲೂಕಿನ ವಿವಿಧ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಸೋಲಿಗೆ ಸಮುದಾಯದ ಜನರು ಪಟ್ಟಣದ ಮಹದೇಶ್ವರ ಬೆಟ್ಟ ರಸ್ತೆಯಿಂದ ಮೆರವಣಿಗೆ ಹೊರಟು ಪಟ್ಟಣದ ಬಸ್ ನಿಲ್ದಾಣದಲ್ಲಿ ಸಮಾವೇಶಗೊಂಡರು.
ಯುವ ಮುಖಂಡ ನಿಶಾಂತ್ ಬಿರ್ಸಾ ಮುಂಡಾ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು. ಬಳಿಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಜೀರಿಗೆ ಗದ್ದೆ ದೊಡ್ಡ ಮಾದಮ್ಮ ಅವರನ್ನು ಸನ್ಮಾನಿಸಿದರು.
ಬಳಿಕ ಮಾತನಾಡಿದ ನಿಶಾಂತ್ ತಮ್ಮ ಧರ್ಮದ ಶ್ರೇಷ್ಠತೆಯನ್ನು ಕೊಂಡಾಡುತ್ತಲೇ ಆದಿವಾಸಿಗಳ ಸಂಸ್ಕೃತಿಯನ್ನು ಹಲ್ಲೆಗಳೆಯುವವರ ವಿರುದ್ಧ ಸಿಡಿದೆದ್ದಿದ್ದ. ತನ್ನ ಜನ ಭೂಮಿಯನ್ನು ಕಳೆದುಕೊಂಡು ನಿರ್ಗತಿಕರಾಗುತ್ತಿರುವುದನ್ನು ಕಂಡು ಬ್ರಿಟಿಷರ ವಿರುದ್ಧ ದಂಗೆ ಹೇಳುವುದರ ಮೂಲಕ ಆದಿವಾಸಿ ಸಮುದಾಯದ ನಾಯಕನಾಗಿ ಹೊರಹೊಮ್ಮಿದರು.
1893-94ರಲ್ಲಿ ಸರ್ಕಾರ ಕಾಡುಗಳನ್ನು ರಕ್ಷಿತಾ ಅರಣ್ಯಗಳೆಂದು ಘೋಷಿಸಿತು. ಇದರಿಂದ ಉದ್ರಿಕ್ತ ಗೊಂಡ ಬಿರ್ಸಮುಂಡ ಸಮುದಾಯದ ಜನರನ್ನು ಸಂಘಟಿಸಿ ಹೋರಾಟಕ್ಕೆ ಹೇಳಿದು ಜನರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ತನ್ನ ಹೋರಾಟದ ರೂಪ ರೇಷೆಗಳನ್ನು ಬದಲಾಯಿಸಿದರು.
ದಿನದಿಂದ ದಿನಕ್ಕೆ ಬಿರ್ಸಾ ಮುಂಡನ ಜನಪ್ರಿಯತೆ ಹೆಚ್ಚಾಗುತ್ತಿರುವುದನ್ನು ಕಂಡ ಬ್ರಿಟಿಷರು ಆತನನ್ನು ಬಂಧಿಸಿ ಎರಡು ವರ್ಷಗಳ ಕಾಲ ಸೆರೆಮನೆಯಲ್ಲಿ. ಎರಡು ವರ್ಷಗಳ ಬಳಿಕ ತನು ಹೋರಾಟವನ್ನು ಆರಂಭಿಸಿದ ಬಿರ್ಸಮುಂಡ ತನ್ನ ಸಮುದಾಯದ ಮೇಲಾಗುತ್ತಿದ್ದ ದೌರ್ಜನ್ಯಗಳನ್ನು ಖಂಡಿಸಿ ಗುತ್ತಿಗೆದಾರರು ಲೇವಾದೇವಿದಾರರು ಮುಂತಾದವರ ವಿರುದ್ಧ ಉಗ್ರ ಹೋರಾಟವನ್ನು ರೂಪಿಸುವುದರ ಮೂಲಕ ಸಮುದಾಯಕ್ಕೆ ಸೂಕ್ತ ಸ್ಥಾನಮಾನ ಕಲ್ಪಿಸಲು ತಮ್ಮ ಜೀವನವನ್ನೇ ಮುಡುಪಾಗಿಟ್ಟರು ಎಂದರು.
ಇದೇ ಸಂದರ್ಭದಲ್ಲಿ ಸೋಲಿಗ ಮುಖಂಡರಾದ ರಂಗೇಗೌಡ ,ಸೀಗೆಹೊಸೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಬುಲೆಟ್ ಬಸವರಾಜು,ಬೈಲೂರು ಗ್ರಾಪಂ ಉಪಾಧ್ಯಕ್ಷ ಸದಾನಂದ ಮೂರ್ತಿ ಮುಖಂಡರುಗಳಾದ ರವೀಂದ್ರ, ಕಣ್ಣಪ್ಪ, ಪಾಳ್ಯ ಸಿದ್ದಪ್ಪಾಜಿ ಕಿರಣ್, ಬಾಬು,ಚೇತನ್, ತೇಜು, ಪ್ರೀತಮ್, ಗೌತಮ್ ಸೇರಿದಂತೆ ಆದಿವಾಸಿ ಸಮುದಾಯದ ಮುಖಂಡರುಗಳು ಹಾಜರಿದ್ದರು.
ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…
ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…
ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್…
ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…
ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…
ಚೆನ್ನೈ : ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…