ಜಿಲ್ಲೆಗಳು

ಹನೂರು : ಬುಡಕಟ್ಟು ಸಮುದಾಯದ ನಾಯಕ ಬಿರ್ಸ ಮುಂಡ ಜಯಂತಿ ಆಚರಣೆ

ಹನೂರು: ಪಟ್ಟಣದಲ್ಲಿ ಯುವ ಮುಖಂಡ ನಿಶಾಂತ್ ಅವರು ಬುಡಕಟ್ಟು ಸಮುದಾಯದ ನಾಯಕ ಬಿರ್ಸ ಮುಂಡ ಜಯಂತಿ ಅಂಗವಾಗಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಮಾದಮ್ಮ ಅವರನ್ನು ಸನ್ಮಾನಿಸಿ ಗೌರವಿಸಿದರು.

ಬಿರ್ಸಾ ಮುಂಡಾ ಜಯಂತಿ ಅಂಗವಾಗಿ ತಾಲೂಕಿನ ವಿವಿಧ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಸೋಲಿಗೆ ಸಮುದಾಯದ ಜನರು ಪಟ್ಟಣದ ಮಹದೇಶ್ವರ ಬೆಟ್ಟ ರಸ್ತೆಯಿಂದ ಮೆರವಣಿಗೆ ಹೊರಟು ಪಟ್ಟಣದ ಬಸ್ ನಿಲ್ದಾಣದಲ್ಲಿ ಸಮಾವೇಶಗೊಂಡರು.

ಯುವ ಮುಖಂಡ ನಿಶಾಂತ್ ಬಿರ್ಸಾ ಮುಂಡಾ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು. ಬಳಿಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಜೀರಿಗೆ ಗದ್ದೆ ದೊಡ್ಡ ಮಾದಮ್ಮ ಅವರನ್ನು ಸನ್ಮಾನಿಸಿದರು.

ಬಳಿಕ ಮಾತನಾಡಿದ ನಿಶಾಂತ್ ತಮ್ಮ ಧರ್ಮದ ಶ್ರೇಷ್ಠತೆಯನ್ನು ಕೊಂಡಾಡುತ್ತಲೇ ಆದಿವಾಸಿಗಳ ಸಂಸ್ಕೃತಿಯನ್ನು ಹಲ್ಲೆಗಳೆಯುವವರ ವಿರುದ್ಧ ಸಿಡಿದೆದ್ದಿದ್ದ. ತನ್ನ ಜನ ಭೂಮಿಯನ್ನು ಕಳೆದುಕೊಂಡು ನಿರ್ಗತಿಕರಾಗುತ್ತಿರುವುದನ್ನು ಕಂಡು ಬ್ರಿಟಿಷರ ವಿರುದ್ಧ ದಂಗೆ ಹೇಳುವುದರ ಮೂಲಕ ಆದಿವಾಸಿ ಸಮುದಾಯದ ನಾಯಕನಾಗಿ ಹೊರಹೊಮ್ಮಿದರು.

1893-94ರಲ್ಲಿ ಸರ್ಕಾರ ಕಾಡುಗಳನ್ನು ರಕ್ಷಿತಾ ಅರಣ್ಯಗಳೆಂದು ಘೋಷಿಸಿತು. ಇದರಿಂದ ಉದ್ರಿಕ್ತ ಗೊಂಡ ಬಿರ್ಸಮುಂಡ ಸಮುದಾಯದ ಜನರನ್ನು ಸಂಘಟಿಸಿ ಹೋರಾಟಕ್ಕೆ ಹೇಳಿದು ಜನರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ತನ್ನ ಹೋರಾಟದ ರೂಪ ರೇಷೆಗಳನ್ನು ಬದಲಾಯಿಸಿದರು.

ದಿನದಿಂದ ದಿನಕ್ಕೆ ಬಿರ್ಸಾ ಮುಂಡನ ಜನಪ್ರಿಯತೆ ಹೆಚ್ಚಾಗುತ್ತಿರುವುದನ್ನು ಕಂಡ ಬ್ರಿಟಿಷರು ಆತನನ್ನು ಬಂಧಿಸಿ ಎರಡು ವರ್ಷಗಳ ಕಾಲ ಸೆರೆಮನೆಯಲ್ಲಿ. ಎರಡು ವರ್ಷಗಳ ಬಳಿಕ ತನು ಹೋರಾಟವನ್ನು ಆರಂಭಿಸಿದ ಬಿರ್ಸಮುಂಡ ತನ್ನ ಸಮುದಾಯದ ಮೇಲಾಗುತ್ತಿದ್ದ ದೌರ್ಜನ್ಯಗಳನ್ನು ಖಂಡಿಸಿ ಗುತ್ತಿಗೆದಾರರು ಲೇವಾದೇವಿದಾರರು ಮುಂತಾದವರ ವಿರುದ್ಧ ಉಗ್ರ ಹೋರಾಟವನ್ನು ರೂಪಿಸುವುದರ ಮೂಲಕ ಸಮುದಾಯಕ್ಕೆ ಸೂಕ್ತ ಸ್ಥಾನಮಾನ ಕಲ್ಪಿಸಲು ತಮ್ಮ ಜೀವನವನ್ನೇ ಮುಡುಪಾಗಿಟ್ಟರು ಎಂದರು.

ಇದೇ ಸಂದರ್ಭದಲ್ಲಿ ಸೋಲಿಗ ಮುಖಂಡರಾದ ರಂಗೇಗೌಡ ,ಸೀಗೆಹೊಸೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಬುಲೆಟ್ ಬಸವರಾಜು,ಬೈಲೂರು ಗ್ರಾಪಂ ಉಪಾಧ್ಯಕ್ಷ ಸದಾನಂದ ಮೂರ್ತಿ ಮುಖಂಡರುಗಳಾದ ರವೀಂದ್ರ, ಕಣ್ಣಪ್ಪ, ಪಾಳ್ಯ ಸಿದ್ದಪ್ಪಾಜಿ ಕಿರಣ್, ಬಾಬು,ಚೇತನ್, ತೇಜು, ಪ್ರೀತಮ್, ಗೌತಮ್ ಸೇರಿದಂತೆ ಆದಿವಾಸಿ ಸಮುದಾಯದ ಮುಖಂಡರುಗಳು ಹಾಜರಿದ್ದರು.

andolana

Recent Posts

ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ

ಅಮರಾವತಿ: ಇಂದು ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಕೆಲವೇ ಗಂಟೆಗಳಲ್ಲಿ ಫಲಿತಾಂಶ ಹೊರಬೀಳಲಿದೆ. ಇದೇ ಹೊತ್ತಿನಲ್ಲಿ ನಟಿ…

6 mins ago

ರಾಜ್ಯ ಕಾಂಗ್ರೆಸ್‌ನಲ್ಲಿ ಶುರುವಾಗಲಿದೆಯೇ ಈ ಅವಧಿಯ ಮೊದಲ ಬಂಡಾಯ?

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ  ಪಂಚರಾಜ್ಯ ಚುನಾವಣೆ, ಉಪಚುನಾವಣೆ ಫಲಿತಾಂಶದ ನಂತರ ಸಿಎಂ ಪಟ್ಟಕ್ಕಾಗಿ ಡಿಕೆಶಿ ತಂತ್ರ  ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು…

16 mins ago

ತಮಿಳುನಾಡಿನಲ್ಲಿ ಕಮಾಲ್‌ ಮಾಡಿದ ಟಿವಿಕೆ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಡಿಎಂಕೆಗೆ ಟಿವಿಕೆ ಟಾಂಗ್‌ ಕೊಟ್ಟಿದೆ. ತಮಿಳುನಾಡಿನಲ್ಲಿ ಟಿವಿಕೆ 58ಕ್ಕೂ ಹೆಚ್ಚು…

29 mins ago

ಸಂಜೀವಿನಿ ಒಕ್ಕೂಟದಿಂದ ಜೇನು ಉತ್ಪಾದನೆ

ಕೃಷ್ಣ ಸಿದ್ದಾಪುರ ಸ್ವಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ: ಮಹಿಳೆಯರಿಂದ ಉತ್ಕೃಷ್ಟ ದರ್ಜೆಯ ಜೇನು ಸಂಗ್ರಹ ಸಿದ್ದಾಪುರ: ಪ್ರಧಾನ ಮಂತ್ರಿ…

35 mins ago

ತಮಿಳುನಾಡಿನಲ್ಲಿ ಡಿಎಂಕೆಗೆ ಆರಂಭಿಕ ಮುನ್ನಡೆ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಡಿಎಂಕೆ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ. ತಮಿಳುನಾಡಿನಲ್ಲಿ ಡಿಎಂಕೆ 71ಕ್ಕೂ ಹೆಚ್ಚು…

1 hour ago

ಸೊಳ್ಳೆಗಳ ಕಾಟ; ಸಾಂಕ್ರಾಮಿಕ ರೋಗದ ಭೀತಿ

ಪ್ರಶಾಂತ್ ಎಸ್. ಮನೆಗಳ ಮುಂದೆ ನಿಲ್ಲುವ ಚರಂಡಿ ನೀರು! ವಾರ್ಡ್ ಸಂಖ್ಯೆ ೬೫ರ ನಿವಾಸಿಗಳಿಗೆ ತಪ್ಪದ ಸಂಕಷ್ಟ  ಮೈಸೂರು: ಸಣ್ಣ…

1 hour ago