ಜಿಲ್ಲೆಗಳು

ಹನೂರು: ಗ್ರಾಮ ಆಡಳಿತ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲಿರುವ ಗ್ರಾಮ ಲೆಕ್ಕಿಗರು

ಹನೂರು : ಕಂದಾಯ ಇಲಾಖೆಯಲ್ಲಿನ ಗ್ರಾಮ ಲೆಕ್ಕಿಗರ ವೃಂದದ ಹುದ್ದೆಯನ್ನು ಗ್ರಾಮ ಆಡಳಿತ ಅಧಿಕಾರಿ ಎಂದು ಸರ್ಕಾರ ಆದೇಶ ಮಾಡಿರುವುದಕ್ಕೆ ಹನೂರು ತಾಲೂಕು ಗ್ರಾಮ ಆಡಳಿತ ಅಧಿಕಾರಿ ಸಂಘದ ಅಧ್ಯಕ್ಷ ರಾಜು ಅಭಿನಂದನೆ ಸಲ್ಲಿಸಿದ್ದಾರೆ.

ಗ್ರಾಮ ಪಂಚಾಯಿತಿಗಳಲ್ಲಿ ಪಿಡಿಓ ರವರು ಹೇಗೆ ಆಡಳಿತ ನಡೆಸುತ್ತಾರೋ,ಅದೇ ಮಾದರಿಯಲ್ಲಿ ಗ್ರಾಮ ಲೆಕ್ಕಿಗರು ಇನ್ನು ಮುಂದೆ ಗ್ರಾಮ ಆಡಳಿತ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.

ಇದುವರೆಗೆ ದಕ್ಷಿಣ ರಾಜ್ಯಗಳಾದ ಕೇರಳ ಹಾಗೂ ತಮಿಳುನಾಡುಗಳಲ್ಲಿ ಈ ಹಿಂದೆ ಗ್ರಾಮ ಲೆಕ್ಕಿಗರ ಬದಲಾಗಿ ಗ್ರಾಮ ಆಡಳಿತ ಅಧಿಕಾರಿ ವೃಂದದ ಹುದ್ದೆ ಚಾಲ್ತಿಯಲ್ಲಿತ್ತು, ಅದರಂತೆ ಕರ್ನಾಟಕದಲ್ಲಿಯೂ ಹುದ್ದೆಯನ್ನು ಬದಲಾಯಿಸುವಂತೆ ರಾಜ್ಯದ ಎಲ್ಲಾ ಗ್ರಾಮ ಲೆಕ್ಕಿಗರ ಸಂಘ ಹಾಗೂ ಪದಾಧಿಕಾರಿಗಳು ಕಂದಾಯ ಇಲಾಖೆ ಸಚಿವರಿಗೆ ಮನವಿ ಸಲ್ಲಿಸಿದ್ದರು. ಮನವಿಗೆ ಸ್ಪಂದಿಸಿದ ಕಂದಾಯ ಇಲಾಖೆ ಸಚಿವರು ಗ್ರಾಮ ಲೆಕ್ಕೀಗ ಪದ ನಾಮವನ್ನು ಗ್ರಾಮ ಆಡಳಿತ ಅಧಿಕಾರಿಯನ್ನು ಪರಿಶೀಲಿಸುವಂತೆ ಪ್ರಾದೇಶಿಕ ಆಯುಕ್ತರಿಗೆ ಅಭಿಪ್ರಾಯ ನೀಡುವಂತೆ ಕೋರಿದ್ದರು. ಅದರಂತೆ ನಾಲ್ಕು ಪ್ರಾದೇಶಿಕ ಆಯುಕ್ತರು ಗ್ರಾಮ ಲೆಕ್ಕಿಗರು ಎಂಬ ಪಧನಾಮವನ್ನು ಗ್ರಾಮ ಆಡಳಿತ ಅಧಿಕಾರಿ ಎಂದು ಬದಲಾಯಿಸಬಹುದೆಂದು ವರದಿ ಸಲ್ಲಿಸಿರುತ್ತಾರೆ. ಪ್ರಾದೇಶಿಕ ಆಯುಕ್ತರ ವರದಿಯಂತೆ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಹರೀಶ್ ರವರು ಇಂದು ನೂತನ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ರಾಜ್ಯಗಳಾದ ಕೇರಳ ಮತ್ತು ತಮಿಳುನಾಡುಗಳಲ್ಲಿ ಗ್ರಾಮ ಆಡಳಿತ ಅಧಿಕಾರಿಗಳಿಗೆ ವಿಶೇಷ ಭತ್ಯ ನೀಡಲಾಗುತ್ತಿದೆ. ಕರ್ನಾಟಕ ಸರ್ಕಾರ ಗ್ರಾಮ ಲೆಕ್ಕಿಗ ಬದಲಾಗಿ ಗ್ರಾಮ ಆಡಳಿತ ಅಧಿಕಾರಿ ನೇಮಕ ಮಾಡಿರುವುದು ಸಂತಸದ ವಿಚಾರ ದಕ್ಷಿಣ ರಾಜ್ಯಗಳಲ್ಲಿ ನೀಡುತ್ತಿರುವ ವಿಶೇಷ ಭತ್ಯ ಗಳನ್ನು ನಮ್ಮ ರಾಜ್ಯದಲ್ಲಿಯೂ ನೀಡುವಂತೆ ಮನವಿ ಮಾಡಿದ್ದಾರೆ.

ನೂತನ ಆದೇಶಕ್ಕೆ ಹನೂರು ತಾಲೂಕು ಗ್ರಾಮ ಆಡಳಿತ ಅಧಿಕಾರಿ ಸಂಘದ ಪದಾಧಿಕಾರಿಗಳಾದ ವಿನೋದ್, ಶೇಷಣ್ಣ,ಕಾರ್ತಿಕ್, ಪುನೀತ್, ಕುಮಾರ್,ಮಾರುತಿ, ರಮೇಶ್, ಮಹದೇವ ಪ್ರಸಾದ್ ಸೇರಿದಂತೆ ಎಲ್ಲಾ ಪದಾಧಿಕಾರಿಗಳು ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

andolana

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

6 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

6 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

8 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

8 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

22 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago