ಜಿಲ್ಲೆಗಳು

ಹನೂರು : ಆಟೋ ಚಾಲಕರು, ಮಾಲೀಕರ ಸಂಘದಿಂದ ಕನ್ನಡ ರಾಜ್ಯೋತ್ಸವ ಆಚರಣೆ

ಹನೂರು : ನೆಲ ಜಲ ಮತ್ತು ಭಾಷೆಯ ಉಳಿವಿನ ವಿಚಾರ ಬಂದಾಗ ಸರ್ವರು ತಮ್ಮ ವೈಯಕ್ತಿಕ ಹಿತವನ್ನು ಬದುಗಿಟ್ಟು ಒಂದಾಗಿ ಹೋರಾಟ ನಡೆಸಬೇಕು ಎಂದು ಹಿಂದುಳಿದ ವರ್ಗಗಳ ಕಾರ್ಯಕಾರಿಣಿ ಸಮಿತಿ ಸದಸ್ಯ ಜನ ಧ್ವನಿ ಬಿ ವೆಂಕಟೇಶ್ ತಿಳಿಸಿದರು.

ತಾಲೂಕಿನ ರಾಮಪುರ ಪಟ್ಟಣದಲ್ಲಿ ಆಟೋ ಚಾಲಕರು ಹಾಗೂ ಮಾಲೀಕರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಭವ್ಯ ಪರಂಪರೆಯುಳ್ಳ ಕನ್ನಡ ನಾಡನ್ನು ಕಟ್ಟುವಲ್ಲಿ ಹಲವಾರು ಹೋರಾಟಗಾರರ ಶ್ರಮವಿದ್ದು ಇಂಥ ಪುಣ್ಯಭೂಮಿಯನ್ನು ಉಳಿಸುವ ಬೆಳೆಸುವ ಜವಾಬ್ದಾರಿ ಎಲ್ಲರ ಮೇಲಿದೆ. ನಾನು ನುಡಿಯ ವಿಚಾರದಲ್ಲಿ ದಕ್ಕೆ ಬಂದಾಗ ನಾವು ಸಹ ಕೈ ಕೊಟ್ಟು ಕೂರಲು ಸಾಧ್ಯವಿಲ್ಲ, ಕರ್ನಾಟಕ 10 ಹಲವು ಕಲೆ ಮತ್ತು ಸಂಸ್ಕೃತಿಯ ನೆಲೆಬೀಡಾಗಿದ್ದು ಆಗಿದ್ದು ಇಂತಹ ಗಂಡು ಮೆಟ್ಟಿನ ನೆಲ ವಿಶ್ವದ ಗಮನ ಸೆಳೆದಿರುವುದು ನಮ್ಮ ಮಣ್ಣಿನ ಕೆಂಪು ಹಾಗೂ ಸೋಂಪಿಗೆ ಉತ್ತಮ ಗರಿ ಎಂದು ಹೆಮ್ಮೆಯ ನುಡಿಗಳನ್ನು ಹಾಡಿದರು.

ಕನ್ನಡ ನೆಲ,ಜಲ ವಿಷಯ ಬಂದಾಗ ಮೊದಲು ನಿಂತುಕೊಳ್ಳುವುದು ಆಟೋ ಚಾಲಕರು ಇವರ ಕನ್ನಡ ಪ್ರೇಮವನ್ನು ಪ್ರತಿಯೊಬ್ಬರು ಮೆಚ್ಚಲೇಬೇಕು. ನವೆಂಬರ್ ತಿಂಗಳಿಗೆ ಕನ್ನಡ ರಾಜ್ಯೋತ್ಸವ ಸೀಮಿತವಾಗದೆ ವರ್ಷಪೂರ್ತಿ ರಾಜ್ಯೋತ್ಸವ ಆಚರಣೆ ಮಾಡುವಂತಾಗಬೇಕು ಎಂದು ತಿಳಿಸಿದರು.
ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ್ದ ಜನಧ್ವನಿ ವೆಂಕಟೇಶ್ ರವರನ್ನು ವಾದ್ಯ ಮೇಳಗಳೊಂದಿಗೆ ಗ್ರಾಮಸ್ಥರು ಬರಮಾಡಿಕೊಂಡರು. ಕಾರ್ಯಕ್ರಮದಲ್ಲಿ ಮುಖಂಡರುಗಳಾದ ಗೋವಿಂದ್ ರಾಜು, ಅಶ್ವಥ್, ಮಾದೇಶ್, ಮುನೇಶ್ ಸೇರಿದಂತೆ ಆಟೋ ಚಾಲಕರು ಹಾಗೂ ಮಾಲೀಕರುಗಳು, ಗ್ರಾಮಸ್ಥರು ಹಾಜರಿದ್ದರು.

andolanait

Recent Posts

ಐಪಿಲ್‌ನಲ್ಲಿ ಬಾಂಗ್ಲಾ ಆಟಗಾರ : ಶಾರುಖ್‌ ಒಡೆತನದ ಕೆಕೆಆರ್‌ ವಿರುದ್ಧ ಬಿಜೆಪಿ ವಾಗ್ದಾಳಿ

ಮುಂಬೈ :  ಐಪಿಎಲ್‌ ತಂಡವಾದ ಕೋಲ್ಕತ್ತಾ ನೈಟ್ ರೈಡರ್ಸ್ ( ಕೆಕೆಆರ್) ತಂಡಕ್ಕೆ ನೆರೆಯ ಬಾಂಗ್ಲಾದೇಶದ ಆಟಗಾರನನ್ನು ಖರೀದಿಸಿರುವ ಬಾಲಿವುಡ್…

29 mins ago

ಮರ್ಯಾದೆಗೇಡೆ ಹತ್ಯೆ | ಮಾನ್ಯ ಹೆಸರಲ್ಲಿ ಕಾಯ್ದೆಗೆ ಚಿಂತನೆ ; ಸಚಿವ ಮಹದೇವಪ್ಪ

ಹುಬ್ಬಳ್ಳಿ : ಮರ್ಯಾದೆಗೇಡು ಹತ್ಯೆ ಅಂತಹ ಘಟನೆ ತಡೆಗೆ ಮಾನ್ಯಾ ಹೆಸರಿನಲ್ಲಿ ಪ್ರತ್ಯೇಕ ಕಾಯ್ದೆ ಜಾರಿಗೊಳಿಸುವ ಬಗ್ಗೆ ಗಂಭೀರ ಚಿಂತನೆ…

55 mins ago

ರಾಜ್ಯದಲ್ಲಿ ನುಸುಳುಕೋರರು, ಬಾಂಗ್ಲಾದೇಶದವರು, ರೋಹಿಂಗ್ಯಾಗಳ ತನಿಖೆ ಬಳಿಕ ಪುನರ್ವಸತಿ ಕಲ್ಪಿಸಿ: ಯತ್ನಾಳ್‌ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ನುಸುಳುಕೋರರು, ಬಾಂಗ್ಲಾದೇಶದವರು, ರೋಹಿಂಗ್ಯಾಗಳು ಯಾರು ಅಂತ ತನಿಖೆ ಮಾಡಿ, ಬಳಿಕ ಪುನರ್‌ ವಸತಿ ಕಲ್ಪಿಸಬೇಕು ಎಂದು ಶಾಸಕ…

2 hours ago

ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್ಲೆಂಡ್‌ನಲ್ಲಿ ಭೀಕರ ಸ್ಫೋಟ: 40 ಮಂದಿ ಸಾವು

ಸ್ವಿಟ್ಜರ್ಲೆಂಡ್‌: ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್ಲೆಂಡ್‌ನಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 40 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.…

2 hours ago

ಹೊಸ ವರ್ಷಕ್ಕೆ ಮೆಟ್ರೋ ಧಮಾಕಾ: ಒಂದೇ ದಿನ 3.08 ಕೋಟಿ ಆದಾಯ

ಬೆಂಗಳೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಒಂದೇ ದಿನ 8.93 ಲಕ್ಷ ಜನರು ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದ್ದು, 3.08 ಕೋಟಿ ರೂ…

2 hours ago

ಸಾರಿಗೆ ನೌಕರರಿಗೆ ಬಿಗ್‌ ಶಾಕ್‌ ಕೊಟ್ಟ ರಾಜ್ಯ ಸರ್ಕಾರ

ಬೆಂಗಳೂರು: ಹೊಸ ವರ್ಷಕ್ಕೆ ಕಾಲಿಡುತ್ತಿದ್ದಂತೆ ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ಬಿಗ್‌ ಶಾಕ್‌ ನೀಡಿದೆ. 2026ರ ಜನವರಿ.1ರಿಂದ ಮುಂದಿನ ಆರು…

2 hours ago