ಜಿಲ್ಲೆಗಳು

ಹನೂರು : ಆಟೋ ಚಾಲಕರು, ಮಾಲೀಕರ ಸಂಘದಿಂದ ಕನ್ನಡ ರಾಜ್ಯೋತ್ಸವ ಆಚರಣೆ

ಹನೂರು : ನೆಲ ಜಲ ಮತ್ತು ಭಾಷೆಯ ಉಳಿವಿನ ವಿಚಾರ ಬಂದಾಗ ಸರ್ವರು ತಮ್ಮ ವೈಯಕ್ತಿಕ ಹಿತವನ್ನು ಬದುಗಿಟ್ಟು ಒಂದಾಗಿ ಹೋರಾಟ ನಡೆಸಬೇಕು ಎಂದು ಹಿಂದುಳಿದ ವರ್ಗಗಳ ಕಾರ್ಯಕಾರಿಣಿ ಸಮಿತಿ ಸದಸ್ಯ ಜನ ಧ್ವನಿ ಬಿ ವೆಂಕಟೇಶ್ ತಿಳಿಸಿದರು.

ತಾಲೂಕಿನ ರಾಮಪುರ ಪಟ್ಟಣದಲ್ಲಿ ಆಟೋ ಚಾಲಕರು ಹಾಗೂ ಮಾಲೀಕರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಭವ್ಯ ಪರಂಪರೆಯುಳ್ಳ ಕನ್ನಡ ನಾಡನ್ನು ಕಟ್ಟುವಲ್ಲಿ ಹಲವಾರು ಹೋರಾಟಗಾರರ ಶ್ರಮವಿದ್ದು ಇಂಥ ಪುಣ್ಯಭೂಮಿಯನ್ನು ಉಳಿಸುವ ಬೆಳೆಸುವ ಜವಾಬ್ದಾರಿ ಎಲ್ಲರ ಮೇಲಿದೆ. ನಾನು ನುಡಿಯ ವಿಚಾರದಲ್ಲಿ ದಕ್ಕೆ ಬಂದಾಗ ನಾವು ಸಹ ಕೈ ಕೊಟ್ಟು ಕೂರಲು ಸಾಧ್ಯವಿಲ್ಲ, ಕರ್ನಾಟಕ 10 ಹಲವು ಕಲೆ ಮತ್ತು ಸಂಸ್ಕೃತಿಯ ನೆಲೆಬೀಡಾಗಿದ್ದು ಆಗಿದ್ದು ಇಂತಹ ಗಂಡು ಮೆಟ್ಟಿನ ನೆಲ ವಿಶ್ವದ ಗಮನ ಸೆಳೆದಿರುವುದು ನಮ್ಮ ಮಣ್ಣಿನ ಕೆಂಪು ಹಾಗೂ ಸೋಂಪಿಗೆ ಉತ್ತಮ ಗರಿ ಎಂದು ಹೆಮ್ಮೆಯ ನುಡಿಗಳನ್ನು ಹಾಡಿದರು.

ಕನ್ನಡ ನೆಲ,ಜಲ ವಿಷಯ ಬಂದಾಗ ಮೊದಲು ನಿಂತುಕೊಳ್ಳುವುದು ಆಟೋ ಚಾಲಕರು ಇವರ ಕನ್ನಡ ಪ್ರೇಮವನ್ನು ಪ್ರತಿಯೊಬ್ಬರು ಮೆಚ್ಚಲೇಬೇಕು. ನವೆಂಬರ್ ತಿಂಗಳಿಗೆ ಕನ್ನಡ ರಾಜ್ಯೋತ್ಸವ ಸೀಮಿತವಾಗದೆ ವರ್ಷಪೂರ್ತಿ ರಾಜ್ಯೋತ್ಸವ ಆಚರಣೆ ಮಾಡುವಂತಾಗಬೇಕು ಎಂದು ತಿಳಿಸಿದರು.
ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ್ದ ಜನಧ್ವನಿ ವೆಂಕಟೇಶ್ ರವರನ್ನು ವಾದ್ಯ ಮೇಳಗಳೊಂದಿಗೆ ಗ್ರಾಮಸ್ಥರು ಬರಮಾಡಿಕೊಂಡರು. ಕಾರ್ಯಕ್ರಮದಲ್ಲಿ ಮುಖಂಡರುಗಳಾದ ಗೋವಿಂದ್ ರಾಜು, ಅಶ್ವಥ್, ಮಾದೇಶ್, ಮುನೇಶ್ ಸೇರಿದಂತೆ ಆಟೋ ಚಾಲಕರು ಹಾಗೂ ಮಾಲೀಕರುಗಳು, ಗ್ರಾಮಸ್ಥರು ಹಾಜರಿದ್ದರು.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago