ಜಿಲ್ಲೆಗಳು

ಹನೂರು : ಆಟೋ ಚಾಲಕರು, ಮಾಲೀಕರ ಸಂಘದಿಂದ ಕನ್ನಡ ರಾಜ್ಯೋತ್ಸವ ಆಚರಣೆ

ಹನೂರು : ನೆಲ ಜಲ ಮತ್ತು ಭಾಷೆಯ ಉಳಿವಿನ ವಿಚಾರ ಬಂದಾಗ ಸರ್ವರು ತಮ್ಮ ವೈಯಕ್ತಿಕ ಹಿತವನ್ನು ಬದುಗಿಟ್ಟು ಒಂದಾಗಿ ಹೋರಾಟ ನಡೆಸಬೇಕು ಎಂದು ಹಿಂದುಳಿದ ವರ್ಗಗಳ ಕಾರ್ಯಕಾರಿಣಿ ಸಮಿತಿ ಸದಸ್ಯ ಜನ ಧ್ವನಿ ಬಿ ವೆಂಕಟೇಶ್ ತಿಳಿಸಿದರು.

ತಾಲೂಕಿನ ರಾಮಪುರ ಪಟ್ಟಣದಲ್ಲಿ ಆಟೋ ಚಾಲಕರು ಹಾಗೂ ಮಾಲೀಕರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಭವ್ಯ ಪರಂಪರೆಯುಳ್ಳ ಕನ್ನಡ ನಾಡನ್ನು ಕಟ್ಟುವಲ್ಲಿ ಹಲವಾರು ಹೋರಾಟಗಾರರ ಶ್ರಮವಿದ್ದು ಇಂಥ ಪುಣ್ಯಭೂಮಿಯನ್ನು ಉಳಿಸುವ ಬೆಳೆಸುವ ಜವಾಬ್ದಾರಿ ಎಲ್ಲರ ಮೇಲಿದೆ. ನಾನು ನುಡಿಯ ವಿಚಾರದಲ್ಲಿ ದಕ್ಕೆ ಬಂದಾಗ ನಾವು ಸಹ ಕೈ ಕೊಟ್ಟು ಕೂರಲು ಸಾಧ್ಯವಿಲ್ಲ, ಕರ್ನಾಟಕ 10 ಹಲವು ಕಲೆ ಮತ್ತು ಸಂಸ್ಕೃತಿಯ ನೆಲೆಬೀಡಾಗಿದ್ದು ಆಗಿದ್ದು ಇಂತಹ ಗಂಡು ಮೆಟ್ಟಿನ ನೆಲ ವಿಶ್ವದ ಗಮನ ಸೆಳೆದಿರುವುದು ನಮ್ಮ ಮಣ್ಣಿನ ಕೆಂಪು ಹಾಗೂ ಸೋಂಪಿಗೆ ಉತ್ತಮ ಗರಿ ಎಂದು ಹೆಮ್ಮೆಯ ನುಡಿಗಳನ್ನು ಹಾಡಿದರು.

ಕನ್ನಡ ನೆಲ,ಜಲ ವಿಷಯ ಬಂದಾಗ ಮೊದಲು ನಿಂತುಕೊಳ್ಳುವುದು ಆಟೋ ಚಾಲಕರು ಇವರ ಕನ್ನಡ ಪ್ರೇಮವನ್ನು ಪ್ರತಿಯೊಬ್ಬರು ಮೆಚ್ಚಲೇಬೇಕು. ನವೆಂಬರ್ ತಿಂಗಳಿಗೆ ಕನ್ನಡ ರಾಜ್ಯೋತ್ಸವ ಸೀಮಿತವಾಗದೆ ವರ್ಷಪೂರ್ತಿ ರಾಜ್ಯೋತ್ಸವ ಆಚರಣೆ ಮಾಡುವಂತಾಗಬೇಕು ಎಂದು ತಿಳಿಸಿದರು.
ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ್ದ ಜನಧ್ವನಿ ವೆಂಕಟೇಶ್ ರವರನ್ನು ವಾದ್ಯ ಮೇಳಗಳೊಂದಿಗೆ ಗ್ರಾಮಸ್ಥರು ಬರಮಾಡಿಕೊಂಡರು. ಕಾರ್ಯಕ್ರಮದಲ್ಲಿ ಮುಖಂಡರುಗಳಾದ ಗೋವಿಂದ್ ರಾಜು, ಅಶ್ವಥ್, ಮಾದೇಶ್, ಮುನೇಶ್ ಸೇರಿದಂತೆ ಆಟೋ ಚಾಲಕರು ಹಾಗೂ ಮಾಲೀಕರುಗಳು, ಗ್ರಾಮಸ್ಥರು ಹಾಜರಿದ್ದರು.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

7 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

7 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

7 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

7 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

7 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

7 hours ago