ಜಿಲ್ಲೆಗಳು

ಹನೂರು : ಆಟೋ ಚಾಲಕರು, ಮಾಲೀಕರ ಸಂಘದಿಂದ ಕನ್ನಡ ರಾಜ್ಯೋತ್ಸವ ಆಚರಣೆ

ಹನೂರು : ನೆಲ ಜಲ ಮತ್ತು ಭಾಷೆಯ ಉಳಿವಿನ ವಿಚಾರ ಬಂದಾಗ ಸರ್ವರು ತಮ್ಮ ವೈಯಕ್ತಿಕ ಹಿತವನ್ನು ಬದುಗಿಟ್ಟು ಒಂದಾಗಿ ಹೋರಾಟ ನಡೆಸಬೇಕು ಎಂದು ಹಿಂದುಳಿದ ವರ್ಗಗಳ ಕಾರ್ಯಕಾರಿಣಿ ಸಮಿತಿ ಸದಸ್ಯ ಜನ ಧ್ವನಿ ಬಿ ವೆಂಕಟೇಶ್ ತಿಳಿಸಿದರು.

ತಾಲೂಕಿನ ರಾಮಪುರ ಪಟ್ಟಣದಲ್ಲಿ ಆಟೋ ಚಾಲಕರು ಹಾಗೂ ಮಾಲೀಕರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಭವ್ಯ ಪರಂಪರೆಯುಳ್ಳ ಕನ್ನಡ ನಾಡನ್ನು ಕಟ್ಟುವಲ್ಲಿ ಹಲವಾರು ಹೋರಾಟಗಾರರ ಶ್ರಮವಿದ್ದು ಇಂಥ ಪುಣ್ಯಭೂಮಿಯನ್ನು ಉಳಿಸುವ ಬೆಳೆಸುವ ಜವಾಬ್ದಾರಿ ಎಲ್ಲರ ಮೇಲಿದೆ. ನಾನು ನುಡಿಯ ವಿಚಾರದಲ್ಲಿ ದಕ್ಕೆ ಬಂದಾಗ ನಾವು ಸಹ ಕೈ ಕೊಟ್ಟು ಕೂರಲು ಸಾಧ್ಯವಿಲ್ಲ, ಕರ್ನಾಟಕ 10 ಹಲವು ಕಲೆ ಮತ್ತು ಸಂಸ್ಕೃತಿಯ ನೆಲೆಬೀಡಾಗಿದ್ದು ಆಗಿದ್ದು ಇಂತಹ ಗಂಡು ಮೆಟ್ಟಿನ ನೆಲ ವಿಶ್ವದ ಗಮನ ಸೆಳೆದಿರುವುದು ನಮ್ಮ ಮಣ್ಣಿನ ಕೆಂಪು ಹಾಗೂ ಸೋಂಪಿಗೆ ಉತ್ತಮ ಗರಿ ಎಂದು ಹೆಮ್ಮೆಯ ನುಡಿಗಳನ್ನು ಹಾಡಿದರು.

ಕನ್ನಡ ನೆಲ,ಜಲ ವಿಷಯ ಬಂದಾಗ ಮೊದಲು ನಿಂತುಕೊಳ್ಳುವುದು ಆಟೋ ಚಾಲಕರು ಇವರ ಕನ್ನಡ ಪ್ರೇಮವನ್ನು ಪ್ರತಿಯೊಬ್ಬರು ಮೆಚ್ಚಲೇಬೇಕು. ನವೆಂಬರ್ ತಿಂಗಳಿಗೆ ಕನ್ನಡ ರಾಜ್ಯೋತ್ಸವ ಸೀಮಿತವಾಗದೆ ವರ್ಷಪೂರ್ತಿ ರಾಜ್ಯೋತ್ಸವ ಆಚರಣೆ ಮಾಡುವಂತಾಗಬೇಕು ಎಂದು ತಿಳಿಸಿದರು.
ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ್ದ ಜನಧ್ವನಿ ವೆಂಕಟೇಶ್ ರವರನ್ನು ವಾದ್ಯ ಮೇಳಗಳೊಂದಿಗೆ ಗ್ರಾಮಸ್ಥರು ಬರಮಾಡಿಕೊಂಡರು. ಕಾರ್ಯಕ್ರಮದಲ್ಲಿ ಮುಖಂಡರುಗಳಾದ ಗೋವಿಂದ್ ರಾಜು, ಅಶ್ವಥ್, ಮಾದೇಶ್, ಮುನೇಶ್ ಸೇರಿದಂತೆ ಆಟೋ ಚಾಲಕರು ಹಾಗೂ ಮಾಲೀಕರುಗಳು, ಗ್ರಾಮಸ್ಥರು ಹಾಜರಿದ್ದರು.

andolanait

Recent Posts

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

13 hours ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

13 hours ago

ರಾಜ್ಯದಲ್ಲಿ ೧೯೮೩ರ ಇತಿಹಾಸ ಮರುಕಳಿಸುತ್ತದೆಯೇ?

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…

13 hours ago

ಕೆಎಚ್‌ಬಿ ಕಾಲೋನಿ ನಿವಾಸಿಗಳ ಜೀವನ ಹೈರಾಣ

ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…

14 hours ago

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

14 hours ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

14 hours ago