ಹನೂರು: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಿರ್ಮಾಣ ಮಾಡುತ್ತಿರುವ ರಸ್ತೆ ಕಳಪೆ ಕಾಮಗಾರಿಯಾಗಿದೆ ಎಂದು ಸೋಲಿಗ ಅಭಿವೃದ್ಧಿ ಸಂಘದ ಅಧ್ಯಕ್ಷ ಮುತ್ತಯ್ಯ ತಿಳಿಸಿದ್ದಾರೆ
ತಾಲೂಕಿನ ಶಾಗ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಗಾಣಿಗ ಮಂಗಲ ಕಾಡಂಚಿನ ಗ್ರಾಮವಾಗಿದ್ದು ಗ್ರಾಮದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 1ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ರಸ್ತೆ ಕಾಮಗಾರಿ ಗುಣಮಟ್ಟದಿಂದ ಕೂಡಿಲ್ಲ, ಜಲ್ಲಿಕಲ್ಲಿನಿಂದ ಮೆಟ್ಲಿಂಗ್ ಮಾಡದೆ ಗುಣಮಟ್ಟವು ಇಲ್ಲದ ಎಂ ಸ್ಯಾಂಡ್ ಬಳಸಿ ಕಳಪೆ ಕಾಮಗಾರಿ ನಡೆಸುತ್ತಿದ್ದಾರೆ ಎಂದು ದೂರಿದ್ದಾರೆ.
ಸೋಲಿಗ ಜನಾಂಗವೇ ಹೆಚ್ಚಾಗಿರುವ ಈ ಗ್ರಾಮದಲ್ಲಿ ಅಭಿವೃದ್ಧಿ ಹೆಸರಿನಲ್ಲಿ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ನಡೆಸುತ್ತಿರುವ ಕಾಮಗಾರಿ ಕಳಪೆ ಕಾಮಗಾರಿಯಾಗಿದೆ. ಕೂಡಲೇ ಸಂಬಂಧಪಟ್ಟ ಜಿಲ್ಲಾಡಳಿತ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ನಡೆಯುತ್ತಿರುವ ಕಾಮಗಾರಿಯನ್ನು ಪರಿಶೀಲಿಸಿ ಉತ್ತಮ ಗುಣಮಟ್ಟದಿಂದ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ ನೀಡಬೇಕು ಎಂದು ಗ್ರಾಮ ಅರಣ್ಯ ಸಮಿತಿಯ ಅಧ್ಯಕ್ಷ ಕರಿಯಪ್ಪ ಬೋಳ್ಮಾದ ರಾಜಪ್ಪ ಗ್ರಾಮ ಪಂಚಾಯಿತಿ ಸದಸ್ಯೆ ರಾಜಮ್ಮಕಳಪೆ ಕಾಮಗಾರಿ ನಡೆಸುತ್ತಿರುವ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಹಾಗೂ ಪರಿಶಿಷ್ಟ ಪಂಗಡದ ಕಲ್ಯಾಣ ಇಲಾಖೆಗೆ ದೂರು ಸಲ್ಲಿಸಿದ್ದಾರೆ.
ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕೆಆರ್ ಐಡಿಎಲ್ ಅಧಿಕಾರಿಗಳ ಜತೆ ಚರ್ಚಿಸಿ ಗುಣಮಟ್ಟದ ಕಾಮಗಾರಿ ನಡೆಸಲು ಗುತ್ತಿಗೆದಾರರಿಗೆ ಸೂಚಿಸಲಾಗುವುದು ಎಂದು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ನವೀನ್ ಮಠದ ತಿಳಿಸಿದ್ದಾರೆ.
ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…
ರಿಯಾಧ್: ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್…
ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…
ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…
ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…