ಜಿಲ್ಲೆಗಳು

ಹನೂರು : ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವುದೇ ನಮ್ಮ ಗುರಿ – ಬಿ ವೆಂಕಟೇಶ್

ಹನೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹನೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವುದೇ ನಮ್ಮೆಲ್ಲರ ಗುರಿಯಾಗಿರಬೇಕೆಂದು ಬಿಜೆಪಿ ಜಿಲ್ಲಾ ಸಂಯೋಜಕ ಜನಧ್ವನಿ ಬಿ ವೆಂಕಟೇಶ್ ತಿಳಿಸಿದರು.
ಹನೂರು ಪಟ್ಟಣಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪಕ್ಷ ಸಂಘಟನೆ ಸಂಬಂಧ ಆಗಮಿಸುತ್ತಿರುವ ಹಿನ್ನೆಲೆಪಟ್ಟಣದ ಬಿಜೆಪಿ ಕಚೇರಿಯಲ್ಲಿ ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ರಾಷ್ಟ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯದಲ್ಲಿ ಸಚಿವ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಉತ್ತಮ ಆಡಳಿತ ನಡೆಸಿ ಜನಮನ್ನಣೆ ಗಳಿಸಿದೆ,ಈ ಅವಧಿಯಲ್ಲಿ ಆಗಿರುವ ಜನಪರ ಕಾರ್ಯಕ್ರಮಗಳನ್ನು ಪ್ರತಿಯೊಬ್ಬರ ಮನೆ ಮನೆಗೂ ತಲುಪಿಸಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದು ತಿಳಿಸಿದರು. ಬಿಜೆಪಿ ಜಿಲ್ಲಾ ಉಸ್ತುವಾರಿ ಮೈ ವಿ ರವಿಶಂಕರ್ ಮಾತನಾಡಿ ಇಡೀ ದೇಶಾದ್ಯಂತ ತಳಮಟ್ಟದಿಂದ ಸದೃಢವಾಗಿ ನೆಲೆಗೊಂಡಿರುವ ಬಿಜೆಪಿ ಪಕ್ಷದಲ್ಲಿ ವ್ಯಕ್ತಿಗಿಂತ ಪಕ್ಷ ಮುಖ್ಯವಾಗಿದೆ ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಪಕ್ಷ ಸಂಘಟನೆಗೆ ಒತ್ತು ನೀಡಬೇಕು,ಕಾರ್ಯಕರ್ತರುಗಳು ತಮ್ಮಲ್ಲಿರುವ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಪಕ್ಷ ಸಂಘಟನೆಗೆ ಮುಂದಾಗಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ದತ್ತೇಶ್ ಕುಮಾರ್,ರಾಜ್ಯ ಪರಿಷತ್ ಸದಸ್ಯ ಬೂದುಬಾಳು ವೆಂಕಟಸ್ವಾಮಿ,ಪಟ್ಟಣ ಪಂಚಾಯಿತಿ ನಾಮನಿರ್ದೇಶಿತ ಸದಸ್ಯರು ಗಳಾದ ಪುಟ್ಟರಾಜು ವೆಂಕಟೇಗೌಡ ಹನೂರು ಮಂಡಲ ಅಧ್ಯಕ್ಷ ಸಿದ್ದಪ್ಪ ರಾಮಪುರ ಮಂಡಲ ಅಧ್ಯಕ್ಷ ವೀರಭದ್ರ,ಮುಖಂಡ ಪ್ರೀತಂ ನಾಗಪ್ಪ ಸೇರಿದಂತೆ ವಿವಿಧ ಗ್ರಾಮಗಳ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

andolanait

Recent Posts

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

1 hour ago

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

2 hours ago

ಶೂಟೌಟ್ ಪ್ರಕರಣ: ಇನ್ಸ್‌ಪೆಕ್ಟರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸರ ಲಘು ಲಾಟಿ ಪ್ರಹಾರ, 5 ಮಂದಿ ವಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…

4 hours ago

ಹನೂರು ಗುಂಡಿನ ದಾಳಿ: ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ ಕುಟುಂಬಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…

4 hours ago

ಕುಶಾಲನಗರ| ಬೀದಿ ನಾಯಿ ದಾಳಿ: ವ್ಯಕ್ತಿಗೆ ಗಾಯ

ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…

4 hours ago

ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪ: ಮೃತರ ಸಂಖ್ಯೆ 40ಕ್ಕೆ ಏರಿಕೆ

ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್‌ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…

7 hours ago