ಜಿಲ್ಲೆಗಳು

ಹನೂರು : ಚರ್ಮಗಂಟು ರೋಗಕ್ಕೆ ಎತ್ತು ಬಲಿ

ಹನೂರು: ತಾಲ್ಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಕ್ಕೆ ಹೊಲದ ದೊರೆಸ್ವಾಮಿ ಎಂಬುವರಿಗೆ ಸೇರಿದ ಒಂದು ಎತ್ತುಗಳು ಚರ್ಮಗಂಟು ರೋಗಕ್ಕೆ ಬಲಿಯಾಗಿವೆ.

ಕಳೆದ ಒಂದು ವಾರದ ಹಿಂದೆ ಕಕ್ಕೆ ಮೂಲದ ತಂಗವೇಲು ಎಂಬುವವರಿಗೆ ಸೇರಿದ ಒಂದು ಹಸು ಚರ್ಮ ಗಂಟುರೋಗ ಬಂದು ಮೃತಪಟ್ಟಿತ್ತು. ತದನಂತರ ಸದಾಶಿವಪ್ಪ ಎಂಬವರಿಗೆ ಸೇರಿದ ಇಪ್ಪತ್ತಕ್ಕೂ ಹೆಚ್ಚು ಹಸುಗಳಿಗೆ ಚರ್ಮ ಗಂಟುರೋಗ ಕಾಣಿಸಿಕೊಂಡಿದ್ದ ಹಿನ್ನೆಲೆ ಜಿಲ್ಲಾ ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಡಾ. ಶಿವಣ್ಣ ಮಾರ್ಗದರ್ಶನದಲ್ಲಿ ತಾಲ್ಲೂಕು ಸಹಾಯಕ ನಿರ್ದೇಶಕ ಸಿದ್ದರಾಜು ಹಾಗೂ ಪರಿವೀಕ್ಷಕರು ಪೊನ್ನಾಚಿ ಗ್ರಾಮಕ್ಕೆ ಭೇಟಿ ನೀಡಿ 1400 ರಾಸುಗಳಿಗೆ ಭಾನುವಾರ ಚಿಕಿತ್ಸೆ ನೀಡಿದ್ದರು. ಇದಲ್ಲದೆ ಚರ್ಮ ಗಂಟುರೋಗ ತಡೆಗಟ್ಟುವ ನಿಟ್ಟಿನಲ್ಲಿ ಚುಚ್ಚುಮದ್ದು ಸಹ ನೀಡಲಾಗಿತ್ತು. ಆದರೂ ಸಹ ಕಕ್ಕೆ ಹೊಲದ ದೊರೆಸ್ವಾಮಿ ಎಂಬುವವರ ಎತ್ತು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದೆ. ಕಳೆದ ಒಂದು ವಾರದಿಂದೀಚೆಗೆ 4 ಹಸುಗಳು ಮೃತಪಟ್ಟಿರುವುದರಿಂದ ಈ ಭಾಗದ ರೈತರು ಕಂಗಾಲಾಗಿದ್ದಾರೆ.

ಪೊನ್ನಾಚಿ ಭಾಗದ ರೈತರಿಗೆ ಚರ್ಮ ಗಂಟುರೋಗ ದೊಡ್ಡ ಆಘಾತ ನೀಡಿದೆ. ಹೈನುಗಾರಿಕೆಯನ್ನೇ ನಂಬಿ ಬದುಕುತ್ತಿರುವ ರೈತರ ಬದುಕು ಬೀದಿಗೆ ಬಂದಂತಾಗಿದೆ. ಈ ಕೂಡಲೇ ಪಶುಪಾಲನಾ ಇಲಾಖೆಯ ಹಿರಿಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಚರ್ಮ ಗಂಟು ರೋಗ ನಿಯಂತ್ರಣಕ್ಕೆ ತರುವಲ್ಲಿ ಕ್ರಮಕೈಗೊಳ್ಳಬೇಕು ಹಾಗೂ ಮೃತಪಟ್ಟಿರುವ ರಾಸುಗಳಿಗೆ ಶೀಘ್ರವೇ ಪರಿಹಾರ ನೀಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಜೀವಿ ರಾಜು ಒತ್ತಾಯಿಸಿದ್ದಾರೆ.

andolanait

Recent Posts

ಓದುಗರ ಪತ್ರ: ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ

ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ನಿಗಮ (ಸೆಸ್ಕ್)ನಿಂದ ಅಂಡರ್ ಗ್ರೌಂಡ್ ಕೇಬಲ್…

3 hours ago

ಓದುಗರ ಪತ್ರ: ನ್ಯಾಯಾಂಗ ಬಡಾವಣೆಗೆ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ರಾಜರಾಜೇಶ್ವರಿ ನಗರದ ಬಳಿಯ ನ್ಯಾಯಾಂಗ ಬಡಾವಣೆಯಲ್ಲಿ ಐದಕ್ಕೂ ಹೆಚ್ಚು ಸರ್ಕಾರಿ ವಸತಿನಿಲಯಗಳಿದ್ದು, ಬೆಳಿಗ್ಗೆ ಹಾಗೂ ಸಂಜೆ ಸಾಕಷ್ಟು ನಗರ…

3 hours ago

ಓದುಗರ ಪತ್ರ: ಮಹಾರಾಣಿ ಕಾಲೇಜು ಆವರಣದಲ್ಲಿನ ಕಸ ತೆರವುಗೊಳಿಸಿ

ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಆವರಣದಲ್ಲಿ ಪ್ಲಾಸ್ಟಿಕ್ ಬಾಟಲಿ, ಪ್ಲೇಟ್, ಚೀಲಗಳು ಹಾಗೂ ಮರದ ಎಲೆಗಳು ತುಂಬಿದ್ದು, ಅನೈರ್ಮಲ್ಯದ…

3 hours ago

ಓದುಗರ ಪತ್ರ: ಭರಚುಕ್ಕಿ ಜಲಪಾತ ಸಂಪರ್ಕ ರಸ್ತೆ ದುರಸ್ತಿ ಮಾಡಿ

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನಲ್ಲಿರುವ ಭರಚುಕ್ಕಿ ಜಲಪಾತಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿಗಳಿಂದ ಕೂಡಿದ್ದು, ಹ್ಯಾಂಡ್ ಪೋಸ್ಟ್ ನಿಂದ ಶಿವನಸಮುದ್ರದ…

3 hours ago

ರೋಮಾಂಚನಕಾರಿ ಜಲ ಸಾಹಸ ಕ್ರೀಡೋತ್ಸವ…

ಚಾಮರಾಜನಗರ: ತಾಲ್ಲೂಕಿನ ಸುವರ್ಣಾವತಿ ಜಲಾಶಯದಲ್ಲಿ ಏರ್ಪಡಿಸಿರುವ ಎರಡು ದಿನಗಳ ‘ಜಿಲ್ಲಾ ಮಟ್ಟದ ಜಲ ಸಾಹಸ ಕ್ರೀಡೋತ್ಸವವನ್ನು’ ಜೆಟ್ ಸ್ಕೀ ಜಲ…

3 hours ago

ಸಂಘರ್ಷದ ಸಮಯದಲ್ಲಿ ಭಾರತೀಯ ಸೇನೆ ಅನಾಥ..!

ಚೀನಿ ಸೈನಿಕರು ಫಿರಂಗಿಗಳೊಂದಿಗೆ ಮುನ್ನುಗ್ಗುತ್ತಲೇ ಇದ್ದರು... ಉದ್ವಿಗ್ನ ಸನ್ನಿವೇಶದಲ್ಲಿ ರಕ್ಷಣಾ ಸಚಿವರಿಂದ ಸಿಗದ ಸ್ಪಷ್ಟ ಸಂದೇಶ ೨ ಗಂಟೆಗಳ ಕಾಲ…

3 hours ago