ಹನೂರು: ತಾಲ್ಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಕ್ಕೆ ಹೊಲದ ದೊರೆಸ್ವಾಮಿ ಎಂಬುವರಿಗೆ ಸೇರಿದ ಒಂದು ಎತ್ತುಗಳು ಚರ್ಮಗಂಟು ರೋಗಕ್ಕೆ ಬಲಿಯಾಗಿವೆ.
ಕಳೆದ ಒಂದು ವಾರದ ಹಿಂದೆ ಕಕ್ಕೆ ಮೂಲದ ತಂಗವೇಲು ಎಂಬುವವರಿಗೆ ಸೇರಿದ ಒಂದು ಹಸು ಚರ್ಮ ಗಂಟುರೋಗ ಬಂದು ಮೃತಪಟ್ಟಿತ್ತು. ತದನಂತರ ಸದಾಶಿವಪ್ಪ ಎಂಬವರಿಗೆ ಸೇರಿದ ಇಪ್ಪತ್ತಕ್ಕೂ ಹೆಚ್ಚು ಹಸುಗಳಿಗೆ ಚರ್ಮ ಗಂಟುರೋಗ ಕಾಣಿಸಿಕೊಂಡಿದ್ದ ಹಿನ್ನೆಲೆ ಜಿಲ್ಲಾ ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಡಾ. ಶಿವಣ್ಣ ಮಾರ್ಗದರ್ಶನದಲ್ಲಿ ತಾಲ್ಲೂಕು ಸಹಾಯಕ ನಿರ್ದೇಶಕ ಸಿದ್ದರಾಜು ಹಾಗೂ ಪರಿವೀಕ್ಷಕರು ಪೊನ್ನಾಚಿ ಗ್ರಾಮಕ್ಕೆ ಭೇಟಿ ನೀಡಿ 1400 ರಾಸುಗಳಿಗೆ ಭಾನುವಾರ ಚಿಕಿತ್ಸೆ ನೀಡಿದ್ದರು. ಇದಲ್ಲದೆ ಚರ್ಮ ಗಂಟುರೋಗ ತಡೆಗಟ್ಟುವ ನಿಟ್ಟಿನಲ್ಲಿ ಚುಚ್ಚುಮದ್ದು ಸಹ ನೀಡಲಾಗಿತ್ತು. ಆದರೂ ಸಹ ಕಕ್ಕೆ ಹೊಲದ ದೊರೆಸ್ವಾಮಿ ಎಂಬುವವರ ಎತ್ತು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದೆ. ಕಳೆದ ಒಂದು ವಾರದಿಂದೀಚೆಗೆ 4 ಹಸುಗಳು ಮೃತಪಟ್ಟಿರುವುದರಿಂದ ಈ ಭಾಗದ ರೈತರು ಕಂಗಾಲಾಗಿದ್ದಾರೆ.
ಪೊನ್ನಾಚಿ ಭಾಗದ ರೈತರಿಗೆ ಚರ್ಮ ಗಂಟುರೋಗ ದೊಡ್ಡ ಆಘಾತ ನೀಡಿದೆ. ಹೈನುಗಾರಿಕೆಯನ್ನೇ ನಂಬಿ ಬದುಕುತ್ತಿರುವ ರೈತರ ಬದುಕು ಬೀದಿಗೆ ಬಂದಂತಾಗಿದೆ. ಈ ಕೂಡಲೇ ಪಶುಪಾಲನಾ ಇಲಾಖೆಯ ಹಿರಿಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಚರ್ಮ ಗಂಟು ರೋಗ ನಿಯಂತ್ರಣಕ್ಕೆ ತರುವಲ್ಲಿ ಕ್ರಮಕೈಗೊಳ್ಳಬೇಕು ಹಾಗೂ ಮೃತಪಟ್ಟಿರುವ ರಾಸುಗಳಿಗೆ ಶೀಘ್ರವೇ ಪರಿಹಾರ ನೀಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಜೀವಿ ರಾಜು ಒತ್ತಾಯಿಸಿದ್ದಾರೆ.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್ಪೆಕ್ಟರ್ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…