ಜಿಲ್ಲೆಗಳು

ಹನೂರು : ಚರ್ಮಗಂಟು ರೋಗಕ್ಕೆ ಎತ್ತು ಬಲಿ

ಹನೂರು: ತಾಲ್ಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಕ್ಕೆ ಹೊಲದ ದೊರೆಸ್ವಾಮಿ ಎಂಬುವರಿಗೆ ಸೇರಿದ ಒಂದು ಎತ್ತುಗಳು ಚರ್ಮಗಂಟು ರೋಗಕ್ಕೆ ಬಲಿಯಾಗಿವೆ.

ಕಳೆದ ಒಂದು ವಾರದ ಹಿಂದೆ ಕಕ್ಕೆ ಮೂಲದ ತಂಗವೇಲು ಎಂಬುವವರಿಗೆ ಸೇರಿದ ಒಂದು ಹಸು ಚರ್ಮ ಗಂಟುರೋಗ ಬಂದು ಮೃತಪಟ್ಟಿತ್ತು. ತದನಂತರ ಸದಾಶಿವಪ್ಪ ಎಂಬವರಿಗೆ ಸೇರಿದ ಇಪ್ಪತ್ತಕ್ಕೂ ಹೆಚ್ಚು ಹಸುಗಳಿಗೆ ಚರ್ಮ ಗಂಟುರೋಗ ಕಾಣಿಸಿಕೊಂಡಿದ್ದ ಹಿನ್ನೆಲೆ ಜಿಲ್ಲಾ ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಡಾ. ಶಿವಣ್ಣ ಮಾರ್ಗದರ್ಶನದಲ್ಲಿ ತಾಲ್ಲೂಕು ಸಹಾಯಕ ನಿರ್ದೇಶಕ ಸಿದ್ದರಾಜು ಹಾಗೂ ಪರಿವೀಕ್ಷಕರು ಪೊನ್ನಾಚಿ ಗ್ರಾಮಕ್ಕೆ ಭೇಟಿ ನೀಡಿ 1400 ರಾಸುಗಳಿಗೆ ಭಾನುವಾರ ಚಿಕಿತ್ಸೆ ನೀಡಿದ್ದರು. ಇದಲ್ಲದೆ ಚರ್ಮ ಗಂಟುರೋಗ ತಡೆಗಟ್ಟುವ ನಿಟ್ಟಿನಲ್ಲಿ ಚುಚ್ಚುಮದ್ದು ಸಹ ನೀಡಲಾಗಿತ್ತು. ಆದರೂ ಸಹ ಕಕ್ಕೆ ಹೊಲದ ದೊರೆಸ್ವಾಮಿ ಎಂಬುವವರ ಎತ್ತು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದೆ. ಕಳೆದ ಒಂದು ವಾರದಿಂದೀಚೆಗೆ 4 ಹಸುಗಳು ಮೃತಪಟ್ಟಿರುವುದರಿಂದ ಈ ಭಾಗದ ರೈತರು ಕಂಗಾಲಾಗಿದ್ದಾರೆ.

ಪೊನ್ನಾಚಿ ಭಾಗದ ರೈತರಿಗೆ ಚರ್ಮ ಗಂಟುರೋಗ ದೊಡ್ಡ ಆಘಾತ ನೀಡಿದೆ. ಹೈನುಗಾರಿಕೆಯನ್ನೇ ನಂಬಿ ಬದುಕುತ್ತಿರುವ ರೈತರ ಬದುಕು ಬೀದಿಗೆ ಬಂದಂತಾಗಿದೆ. ಈ ಕೂಡಲೇ ಪಶುಪಾಲನಾ ಇಲಾಖೆಯ ಹಿರಿಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಚರ್ಮ ಗಂಟು ರೋಗ ನಿಯಂತ್ರಣಕ್ಕೆ ತರುವಲ್ಲಿ ಕ್ರಮಕೈಗೊಳ್ಳಬೇಕು ಹಾಗೂ ಮೃತಪಟ್ಟಿರುವ ರಾಸುಗಳಿಗೆ ಶೀಘ್ರವೇ ಪರಿಹಾರ ನೀಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಜೀವಿ ರಾಜು ಒತ್ತಾಯಿಸಿದ್ದಾರೆ.

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

11 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

19 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

20 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

20 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

22 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

22 hours ago