ಹನೂರು: ತಾಲ್ಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಕ್ಕೆ ಹೊಲದ ದೊರೆಸ್ವಾಮಿ ಎಂಬುವರಿಗೆ ಸೇರಿದ ಒಂದು ಎತ್ತುಗಳು ಚರ್ಮಗಂಟು ರೋಗಕ್ಕೆ ಬಲಿಯಾಗಿವೆ.
ಕಳೆದ ಒಂದು ವಾರದ ಹಿಂದೆ ಕಕ್ಕೆ ಮೂಲದ ತಂಗವೇಲು ಎಂಬುವವರಿಗೆ ಸೇರಿದ ಒಂದು ಹಸು ಚರ್ಮ ಗಂಟುರೋಗ ಬಂದು ಮೃತಪಟ್ಟಿತ್ತು. ತದನಂತರ ಸದಾಶಿವಪ್ಪ ಎಂಬವರಿಗೆ ಸೇರಿದ ಇಪ್ಪತ್ತಕ್ಕೂ ಹೆಚ್ಚು ಹಸುಗಳಿಗೆ ಚರ್ಮ ಗಂಟುರೋಗ ಕಾಣಿಸಿಕೊಂಡಿದ್ದ ಹಿನ್ನೆಲೆ ಜಿಲ್ಲಾ ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಡಾ. ಶಿವಣ್ಣ ಮಾರ್ಗದರ್ಶನದಲ್ಲಿ ತಾಲ್ಲೂಕು ಸಹಾಯಕ ನಿರ್ದೇಶಕ ಸಿದ್ದರಾಜು ಹಾಗೂ ಪರಿವೀಕ್ಷಕರು ಪೊನ್ನಾಚಿ ಗ್ರಾಮಕ್ಕೆ ಭೇಟಿ ನೀಡಿ 1400 ರಾಸುಗಳಿಗೆ ಭಾನುವಾರ ಚಿಕಿತ್ಸೆ ನೀಡಿದ್ದರು. ಇದಲ್ಲದೆ ಚರ್ಮ ಗಂಟುರೋಗ ತಡೆಗಟ್ಟುವ ನಿಟ್ಟಿನಲ್ಲಿ ಚುಚ್ಚುಮದ್ದು ಸಹ ನೀಡಲಾಗಿತ್ತು. ಆದರೂ ಸಹ ಕಕ್ಕೆ ಹೊಲದ ದೊರೆಸ್ವಾಮಿ ಎಂಬುವವರ ಎತ್ತು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದೆ. ಕಳೆದ ಒಂದು ವಾರದಿಂದೀಚೆಗೆ 4 ಹಸುಗಳು ಮೃತಪಟ್ಟಿರುವುದರಿಂದ ಈ ಭಾಗದ ರೈತರು ಕಂಗಾಲಾಗಿದ್ದಾರೆ.
ಪೊನ್ನಾಚಿ ಭಾಗದ ರೈತರಿಗೆ ಚರ್ಮ ಗಂಟುರೋಗ ದೊಡ್ಡ ಆಘಾತ ನೀಡಿದೆ. ಹೈನುಗಾರಿಕೆಯನ್ನೇ ನಂಬಿ ಬದುಕುತ್ತಿರುವ ರೈತರ ಬದುಕು ಬೀದಿಗೆ ಬಂದಂತಾಗಿದೆ. ಈ ಕೂಡಲೇ ಪಶುಪಾಲನಾ ಇಲಾಖೆಯ ಹಿರಿಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಚರ್ಮ ಗಂಟು ರೋಗ ನಿಯಂತ್ರಣಕ್ಕೆ ತರುವಲ್ಲಿ ಕ್ರಮಕೈಗೊಳ್ಳಬೇಕು ಹಾಗೂ ಮೃತಪಟ್ಟಿರುವ ರಾಸುಗಳಿಗೆ ಶೀಘ್ರವೇ ಪರಿಹಾರ ನೀಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಜೀವಿ ರಾಜು ಒತ್ತಾಯಿಸಿದ್ದಾರೆ.
ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…
ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…
ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…
ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…
ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ ನಡೆಸಿದ ಪ್ರಧಾನಿ ಎಂಬ ಹೊಸ…