ಜಿಲ್ಲೆಗಳು

ಸಮರ್ಪಕ ಚರಂಡಿ ವ್ಯವಸ್ಥೆ ಕಲ್ಪಿಸುವಂತೆ ನಿವಾಸಿಗಳ ಅಗ್ರಹ

ಹನೂರು : ಪಟ್ಟಣದ 7ನೇ ವಾರ್ಡ್ ನ ಎಸ್‌ಟಿ ಸಮುದಾಯವಿರುವ ಆಂಜನೇಯ ಬಡಾವಣೆಯಲ್ಲಿ ಚರಂಡಿ ಕಾಮಗಾರಿಯನ್ನು ಅವೈಜ್ಞಾನಿಕವಾಗಿ ನಿರ್ಮಾಣ ಮಾಡುತ್ತಿದ್ದಾರೆ, ಕೂಡಲೇ ಸಮರ್ಪಕವಾಗಿ ಚರಂಡಿ ಕಾಮಗಾರಿಯನ್ನು ಮಾಡುವಂತೆ ನಿವಾಸಿಗಳು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮೂರ್ತಿರವರಿಗೆ ಮನವಿ ಸಲ್ಲಿಸಿದ್ದಾರೆ.

ಬಡಾವಣೆಯ ನಿವಾಸಿ ನಾಗಲಿಂಗಾಚಾರಿ ಮಾತನಾಡಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 7ನೇ ವಾರ್ಡಿನ ಆಂಜನೇಯ ಬಡಾವಣೆಯಲ್ಲಿ ಪರಿಶಿಷ್ಟ ವರ್ಗದ 25ಕ್ಕೂ ಹೆಚ್ಚು ಕುಟುಂಬಗಳಿದೆ. ಲಕ್ಷಾಂತರ ಅನುದಾನ ಬರುತಿದ್ದರು ಸಹ 7ನೇ ವಾರ್ಡಿಗೆ ಯಾವುದೇ ಅನುದಾನವನ್ನು ನೀಡುತ್ತಿಲ್ಲ, ಬಡಾವಣೆಯಲ್ಲಿ ಸಮರ್ಪಕ ಮೂಲಸೌಕರ್ಯ ಕಲ್ಪಿಸದೆ ಅನ್ಯಾಯ ವ್ಯಸಗುತ್ತಿದ್ದಾರೆ. ಈ ಬಗ್ಗೆ ವಾರ್ಡ್ ನ ಸದಸ್ಯರಿಗೂ ಹಲವು ಬಾರಿ ಮನವಿ ಮಾಡಿದ್ದರು ಸಹ ಯಾವುದೇ ಪ್ರಯೋಜನವಾಗಿಲ್ಲ, ಇರುವ ಚರಂಡಿಯಲ್ಲಿ ಕೊಳಚೆ ನೀರು ಸರಾಗವಾಗಿ ಮುಂದೆ ಹೋಗಲು ಸಾಧ್ಯವಾಗದೆ ಇರುವುದರಿಂದ ಸಾಂಕ್ರಮಿಕ ರೋಗದ ಭೀತಿಯಲ್ಲಿದ್ದೇವೆ ಮುಖ್ಯಾಧಿಕಾರಿಯಾದ ನೀವು ನಮ್ಮ ಸಮುದಾಯಕ್ಕೆ ನ್ಯಾಯ ಒದಗಿಸಿ ಸಮರ್ಪಕ ಚರಂಡಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಬಡಾವಣೆಯ ನಿವಾಸಿಗಳು ಹಾಜರಿದ್ದರು.

andolanait

Recent Posts

ಎಸ್‌ಎಸ್ಎಲ್‌ಸಿ ಪರೀಕ್ಷೆ-1ರ ಮೌಲ್ಯಮಾಪನ ಏಪ್ರಿಲ್.8ರಿಂದ ಪ್ರಾರಂಭ

ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್.8ರಿಂದ ಪ್ರಾರಂಭವಾಗಲಿದೆ. ರಾಜ್ಯದ ಎಲ್ಲಾ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ಏಕಕಾಲಕ್ಕೆ…

1 hour ago

ಐಪಿಎಲ್‌ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್‌ ತಗೋಳಿ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಶಾಸಕರು ಐಪಿಎಲ್‌ ಟಿಕೆಟ್‌ ಕೇಳೋದು ತಪ್ಪು. ಐಪಿಎಲ್‌ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್‌ ತಗೋಳಿ ಎಂದು ಮಾಜಿ…

1 hour ago

ಇಂದಿನಿಂದ ರಾಜ್ಯದಲ್ಲಿ ಐದು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಐದು ದಿನಗಳ ಕಾಲ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

2 hours ago

ವಿಧಾನಪರಿಷತ್‌ ಸದಸ್ಯತ್ವಕ್ಕೆ ಬಿಹಾರ ಸಿಎಂ ನಿತೀಶ್‌ ಕುಮಾರ್‌ ರಾಜೀನಾಮೆ

ಪಾಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ತಮ್ಮ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗೆ ರಾಜ್ಯಸಭೆಗೆ…

2 hours ago

ಕುಶಾಲನಗರ: ಹಿಟ್‌ ಅಂಡ್‌ ರನ್‌ಗೆ ಯುವಕ ಬಲಿ

ಕುಶಾಲನಗರ: ಹಿಟ್‌ ಅಂಡ್‌ ರನ್‌ಗೆ ಯುವಕ ಬಲಿಯಾಗಿರುವ ಘಟನೆ ಬೈಲಕುಪ್ಪೆ ಮುಖ್ಯ ರಸ್ತೆಯಲ್ಲಿ ನಡೆದಿದೆ. ಕಾರು, ಆಟೋ ಹಾಗೂ ಬೈಕ್‌…

2 hours ago

ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಡೀಸೆಲ್‌ ಸಮಸ್ಯೆ ಇಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ತಕ್ಷಣಕ್ಕೆ ಡೀಸೆಲ್‌ ಸಮಸ್ಯೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಇರಾನ್‌-ಇಸ್ರೇಲ್‌ ಸಂಘರ್ಷ…

3 hours ago