ಹನೂರು : ಪಟ್ಟಣದ 7ನೇ ವಾರ್ಡ್ ನ ಎಸ್ಟಿ ಸಮುದಾಯವಿರುವ ಆಂಜನೇಯ ಬಡಾವಣೆಯಲ್ಲಿ ಚರಂಡಿ ಕಾಮಗಾರಿಯನ್ನು ಅವೈಜ್ಞಾನಿಕವಾಗಿ ನಿರ್ಮಾಣ ಮಾಡುತ್ತಿದ್ದಾರೆ, ಕೂಡಲೇ ಸಮರ್ಪಕವಾಗಿ ಚರಂಡಿ ಕಾಮಗಾರಿಯನ್ನು ಮಾಡುವಂತೆ ನಿವಾಸಿಗಳು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮೂರ್ತಿರವರಿಗೆ ಮನವಿ ಸಲ್ಲಿಸಿದ್ದಾರೆ.
ಬಡಾವಣೆಯ ನಿವಾಸಿ ನಾಗಲಿಂಗಾಚಾರಿ ಮಾತನಾಡಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 7ನೇ ವಾರ್ಡಿನ ಆಂಜನೇಯ ಬಡಾವಣೆಯಲ್ಲಿ ಪರಿಶಿಷ್ಟ ವರ್ಗದ 25ಕ್ಕೂ ಹೆಚ್ಚು ಕುಟುಂಬಗಳಿದೆ. ಲಕ್ಷಾಂತರ ಅನುದಾನ ಬರುತಿದ್ದರು ಸಹ 7ನೇ ವಾರ್ಡಿಗೆ ಯಾವುದೇ ಅನುದಾನವನ್ನು ನೀಡುತ್ತಿಲ್ಲ, ಬಡಾವಣೆಯಲ್ಲಿ ಸಮರ್ಪಕ ಮೂಲಸೌಕರ್ಯ ಕಲ್ಪಿಸದೆ ಅನ್ಯಾಯ ವ್ಯಸಗುತ್ತಿದ್ದಾರೆ. ಈ ಬಗ್ಗೆ ವಾರ್ಡ್ ನ ಸದಸ್ಯರಿಗೂ ಹಲವು ಬಾರಿ ಮನವಿ ಮಾಡಿದ್ದರು ಸಹ ಯಾವುದೇ ಪ್ರಯೋಜನವಾಗಿಲ್ಲ, ಇರುವ ಚರಂಡಿಯಲ್ಲಿ ಕೊಳಚೆ ನೀರು ಸರಾಗವಾಗಿ ಮುಂದೆ ಹೋಗಲು ಸಾಧ್ಯವಾಗದೆ ಇರುವುದರಿಂದ ಸಾಂಕ್ರಮಿಕ ರೋಗದ ಭೀತಿಯಲ್ಲಿದ್ದೇವೆ ಮುಖ್ಯಾಧಿಕಾರಿಯಾದ ನೀವು ನಮ್ಮ ಸಮುದಾಯಕ್ಕೆ ನ್ಯಾಯ ಒದಗಿಸಿ ಸಮರ್ಪಕ ಚರಂಡಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಬಡಾವಣೆಯ ನಿವಾಸಿಗಳು ಹಾಜರಿದ್ದರು.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…